ಬಂಧಿತ ಆರೋಪಿಗಳು 
ರಾಜ್ಯ

ಬೆಂಗಳೂರು: ಮಹಿಳೆಯ ಬೆರಳು ಕತ್ತರಿಸಿ ಚಿನ್ನಾಭರಣ ದರೋಡೆ ಮಾಡಿದ್ದ ಇಬ್ಬರ ಬಂಧನ

ಸೆ.13ರಂದು ದೂರುದಾರ ಮಹಿಳೆ ಉಷಾ ಹಾಗೂ ಸ್ನೇಹಿತೆ ವರಲಕ್ಷ್ಮೀ ಎಂಬವರು ಗಣೇಶ ಹಬ್ಬದ ಆರ್ಕೆಸ್ಟ್ರಾ ಮುಗಿಸಿ ಮನೆಗೆ ವಾಪಸ್ ಆಗುವಾಗ ಪಲ್ಸರ್ ಬೈಕ್​ನಲ್ಲಿ ಬಂದ ದುರುಳರು ಮಚ್ಚು ತೋರಿಸಿದ್ಧಾರೆ.

ಬೆಂಗಳೂರು: ಆರ್ಕೆಸ್ಟ್ರಾ ನೋಡಿಕೊಂಡು ಮನೆಗೆ ಹೋಗುತ್ತಿದ್ದ ಮಹಿಳೆಯರನ್ನು ಗುರಿಯಾಗಿಸಿ, ಲಾಂಗ್‌ನಿಂದ ಹಲ್ಲೆ ಮಾಡಿ, ಸರಗಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಖದೀಮರನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಯೋಗಾನಂದ (35) ಹಾಗೂ ಈತನ ಸಹಚರ ಪ್ರವೀಣ್ ಬಂಧಿತರು. ಇವರಿಂದ 80 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಬಿ.ಜಗಲಾಸರ್ ಅವರು ಪ್ರಕರಣದ ಕುರಿತು ಮಾಹಿತಿ ನೀಡಿದರು.

ಸೆ.13ರಂದು ದೂರುದಾರ ಮಹಿಳೆ ಉಷಾ ಹಾಗೂ ಸ್ನೇಹಿತೆ ವರಲಕ್ಷ್ಮೀ ಎಂಬವರು ಗಣೇಶ ಹಬ್ಬದ ಆರ್ಕೆಸ್ಟ್ರಾ ಮುಗಿಸಿ ಮನೆಗೆ ವಾಪಸ್ ಆಗುವಾಗ ಪಲ್ಸರ್ ಬೈಕ್​ನಲ್ಲಿ ಬಂದ ದುರುಳರು ಮಚ್ಚು ತೋರಿಸಿದ್ಧಾರೆ. ಗಾಬರಿಗೊಂಡ ಉಷಾ ಸರ ನೀಡಿದರೆ, ವರಲಕ್ಷ್ಮಿ ಅವರು ಪ್ರತಿರೋಧ ತೋರಿಸಿದ್ದು ಮಚ್ಚಿನಿಂದ ಹಲ್ಲೆ ಮಾಡಿದ್ದರು. ಈ ವೇಳೆ ಅವರ, ಕೈ ಬೆರಳು ತುಂಡಾಗಿತ್ತು.

ಅದೇ ದಿನ ಕುಮಾರಸ್ವಾಮಿ ಲೇಔಟ್ ಹಾಗೂ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಮಾಡಿದ್ದರು. ಪ್ರಕರಣ ದಾಖಲಿಸಿ ತನಿಖೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗೋವಾ ನೈಟ್ ಕ್ಲಬ್​ನಲ್ಲಿ ಭೀಕರ ಅಗ್ನಿ ದುರಂತ: ಪ್ರವಾಸಿಗರು ಸೇರಿ 25 ಮಂದಿ ಸಜೀವ ದಹನ, ತನಿಖೆಗೆ ಆದೇಶ

Goa Nightclub Tragedy: ಡ್ಯಾನ್ಸ್ ಫ್ಲೋರ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಕನಿಷ್ಠ 100 ಮಂದಿ ಇದ್ದರು..!

ಕಾಂಗ್ರೆಸ್ ಕುರ್ಚಿ ಕದನ: ಸೋನಿಯಾ ಗಾಂಧಿ ನೇತೃತ್ವದ ಮಹತ್ವದ ಸಭೆ, ತೆಗೆದುಕೊಂಡ ನಿರ್ಧಾರವೇನು..?

ಗೋವಾ ನೈಟ್ ಕ್ಲಬ್​ ಅಗ್ನಿ ದುರಂತ: ಪ್ರಧಾನಿ ಮೋದಿ, ರಾಷ್ಟ್ರಪತಿ ತೀವ್ರ ಸಂತಾಪ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

ಎಸ್‌ಸಿ-ಎಸ್‌ಟಿ ಕೋಟಾ ಹೆಚ್ಚಳಕ್ಕೆ ಪ್ರಧಾನಿ ಸಹಾಯ ಕೋರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಉಗ್ರಪ್ಪ ಒತ್ತಾಯ

SCROLL FOR NEXT