ಸಂತೋಷ್ ಹೆಗ್ಡೆ 
ರಾಜ್ಯ

RSS‌ ನಿಷೇಧಿಸಲು ಕಾಂಗ್ರೆಸ್ ಹೊರಟಿದೆ; ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಪಕ್ಷವನ್ನೇ ನಿಷೇಧಿಸುತ್ತೆ: ಸಂತೋಷ್ ಹೆಗ್ಡೆ

ಸಂಘಟನೆ ಮಾಡುವ ಅಧಿಕಾರ, ಹಕ್ಕು ಸಂವಿಧಾನ ಕೊಟ್ಟಿದೆ. ಹೀಗಾಗಿರುವಾಗ ಆರ್.ಎಸ್.ಎಸ್. ಸಂಘಟನೆ ನಿಷೇಧಿಸಲು ಹೊರಟಿರುವುದು ಸಂವಿಧಾನಕ್ಕೆ ವಿರೋಧಿ ಎಂದರು.

ಧಾರವಾಡ: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸೇರಿದಂತೆ ಎಲ್ಲರಿಗೂ ಸಂಘಟನೆ ಕಟ್ಟುವ ಹಕ್ಕು ಸಂವಿಧಾನವೇ ನೀಡಿದ್ದು, ಇದೀಗ ಸಂಘಟನೆ ನಿಷೇಧ ಮಾಡುವ ಕ್ರಮ ಸಂವಿಧಾನ ವಿರೋಧಿ ನಡೆ ಎಂದು ಮಾಜಿ‌ ಲೋಕಾಯುಕ್ತ, ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗಡೆ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಘಟನೆ ಮಾಡುವ ಅಧಿಕಾರ, ಹಕ್ಕು ಸಂವಿಧಾನ ಕೊಟ್ಟಿದೆ. ಹೀಗಾಗಿರುವಾಗ ಆರ್.ಎಸ್.ಎಸ್. ಸಂಘಟನೆ ನಿಷೇಧಿಸಲು ಹೊರಟಿರುವುದು ಸಂವಿಧಾನಕ್ಕೆ ವಿರೋಧಿ ಎಂದರು. ಒಂದು ವೇಳೆ ಸರ್ಕಾರ ಆರ್ ಎಸ್ ಎಸ್ ಸಂಘಟನೆ ನಿಷೇಧ ಮಾಡಿದರೇ ಆ ನಿರ್ಧಾರವೇ ಕಾಂಗ್ರೆಸ್ ಗೆ ತಿರುಗು ಬಾಣವಾಗಲಿದೆ ಎಂದರು.

ರಾಜ್ಯದಲ್ಲಿ ಆರ್. ಎಸ್.ಎಸ್.‌ ನಿಷೇಧಿಸಲು ಕಾಂಗ್ರೆಸ್ ಪಕ್ಷ ಹೊರಟಿದೆ. ಮತ್ತೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಪಕ್ಷವನ್ನೇ ನಿಷೇಧಿಸುತ್ತಾರೆ. ಆಗ ಅವರ ಆಟ ಶುರುವಾಗುತ್ತದೆ. ಒಟ್ಟಿನಲ್ಲಿ ನಿಷೇಧಿಸುವ ಆಟ ಜೋರಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ನನಗೆ ಬೇಕಿರುವುದು ಅದೊಂದೆ...": ರಷ್ಯಾ-ಯುಕ್ರೇನ್ ಯುದ್ಧ ಕೊನೆಗೊಳಿಸಲು ಟ್ರಂಪ್ ಗೆ ಪುತಿನ್ ಷರತ್ತು; ಈಡೇರುತ್ತಾ 11 ವರ್ಷಗಳ ಗುರಿ?

Ro-Ko ಕಟ್ಟಿಹಾಕಿದ ಆಸೀಸ್: ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯ ಸೋತ Team India

ದೊಡ್ಡಬಳ್ಳಾಪುರ: "ಹೃದಯವಂತ ಆರ್.ಎಲ್.ಜಾಲಪ್ಪ ಜೀವನ‌ ಪಥ"; ಕೃತಿ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ!

ದೊಡ್ಡವರ ಮನೆಗೆ ಹೋಗಬಾರದಿತ್ತು: ಶಾರುಖ್ ಖಾನ್ ಮನೆ ಪಾರ್ಟಿಯಲ್ಲಿ ಆದ ಕಹಿ ಅನುಭವ ಬಿಚ್ಚಿಟ್ಟ ನಟ ಗುಲ್ಶನ್ ದೇವಯ್ಯ!

ಬೆಳಗಾವಿ 'ಡಿಸಿಸಿ ಬ್ಯಾಂಕ್' ಚುನಾವಣೆ: ಮತಗಟ್ಟೆ ಬಳಿ ಜಾರಕಿಹೊಳಿ- ಸವದಿ ಬಣಗಳ ನಡುವೆ ಮಾರಾಮಾರಿ!

SCROLL FOR NEXT