ಬೆಂಗಳೂರು ಆಸ್ಪತ್ರೆ. 
ರಾಜ್ಯ

ದೀಪಾವಳಿ ಸಂಭ್ರಮ: ಪಟಾಕಿ ಸಿಡಿಸುವಾಗ ಗಾಯವಾದರೆ ಏನು ಮಾಡಬೇಕು? ಕಣ್ಣಿನ ಜಾಗೃತಿ ಬಗ್ಗೆ ವೈದ್ಯರ ಸಲಹೆ ಇಂತಿದೆ...

ಕಣ್ಣಿನ ಕಪ್ಪು ಭಾಗವಾದ ಕಾರ್ನಿಯಾ ಗಡಿಯಾರದ ಗಾಜಿನಂತಿರುತ್ತದೆ. ಒಮ್ಮೆ ಅದಕ್ಕೆ ಹಾನಿಯಾದರೆ ಶಸ್ತ್ರಚಿಕಿತ್ಸೆ ಅಗತ್ಯವಾಗಬಹುದು.

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ಇನ್ನು 2 ದಿನಗಳಷ್ಟೇ ಬಾಕಿ ಇದ್ದು, ಹಬ್ಬದ ವೇಳೆ ಪಟಾಕಿ ಸಿಡಿತದಿಂದ ಆಗುವ ಗಾಯಗಳು ವಿಶೇಷವಾಗಿ ಕಣ್ಣಿಗೆ ಆಗುವ ಗಾಯಗಳ ಕುರಿತು ವೈದ್ಯರು ಕೆಲವು ಸಲಹೆ ಹಾಗೂ ಎಚ್ಚರಿಕೆಗಳನ್ನು ನೀಡಿದ್ದಾರೆ.

ರಾಮಯ್ಯ ಮೆಮೋರಿಯಲ್ ಆಸ್ಪತ್ರೆಯ ನೇತ್ರಶಾಸ್ತ್ರ ವಿಭಾಗದ ಮುಖ್ಯಸ್ಥ ಮತ್ತು ಸಲಹೆಗಾರರಾದ ಡಾ. ಅನಂತ್ ಭಂಡಾರಿ ಎಸ್ ಅವರು ಮಾತನಾಡಿ, ವಯಸ್ಕರ ಮೇಲ್ವಿಚಾರಣೆ ಅತ್ಯಗತ್ಯವಾಗಿದ್ದು, ಪಟಾಕಿ ಸಿಡಿಸುವಾಗ ರಕ್ಷಣಾತ್ಮಕ ಕನ್ನಡಕಗಳ ಧರಿಸಬೇಕು. ಇವು ಎಲ್ಲೆಡೆ ಲಭ್ಯವಿದೆ ಎಂದು ಹೇಳಿದ್ದಾರೆ.

ಕಣ್ಣಿನ ಕಪ್ಪು ಭಾಗವಾದ ಕಾರ್ನಿಯಾ ಗಡಿಯಾರದ ಗಾಜಿನಂತಿರುತ್ತದೆ. ಒಮ್ಮೆ ಅದಕ್ಕೆ ಹಾನಿಯಾದರೆ ಶಸ್ತ್ರಚಿಕಿತ್ಸೆ ಅಗತ್ಯವಾಗಬಹುದು ಎಂದು ತಿಳಿಸಿದ್ದಾರೆ.

ಶಂಕರ ಕಣ್ಣಿನ ಆಸ್ಪತ್ರೆಯ ವೈದಯೆ ಪಲ್ಲವಿ ಜೋಶಿ ಅವರು ಮಾತನಾಡಿ, ಗಾಯವಾದಾಗ ಕಣ್ಣಿಗೆ ಹಾಲು, ತುಪ್ಪ, ಎಣ್ಣೆ ಅಥವಾ ಟ್ಯಾಪ್ ನೀರನ್ನು ಹಾಕಬಾರದು. ಟ್ಯಾಪ್ ನೀರಿನಿಂದ ಸೋಂಕು ಮತ್ತಷ್ಟು ಹೆಚ್ಚಾಗಬಹುದು. ಅದರ ಬದಲು 10-15 ನಿಮಿಷಗಳ ಕಾಲ ಶುದ್ಧ ನೀರು ಅಥವಾ ಲವಣಯುಕ್ತ ನೀರಿನಿಂದ ತಕ್ಷಣ ತೊಳೆಯಿರಿ. ವೈದ್ಯರ ಸಲಹೆ, ಚಿಕಿತ್ಸೆ ಪಡೆಯಿತಿ ಎಂದು ಹೇಳಿದ್ದಾರೆ.

ಪಟಾಕಿ ಸಿಡಿತದ ವೇಳೆ ಕಾರ್ನಿಯಾಗೆ ಸಮಸ್ಯೆಯಾದರೆ, ಅದು ಕಣ್ಣಿನ ದೃಷ್ಟಿಯ ಮೇಲೆ ಶಾಶ್ವತ ಪರಿಣಾಮ ಬೀರುತ್ತದೆ ಎಂದು ಭಂಡಾರಿಯವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ನನಗೆ ಬೇಕಿರುವುದು ಅದೊಂದೆ...": ರಷ್ಯಾ-ಯುಕ್ರೇನ್ ಯುದ್ಧ ಕೊನೆಗೊಳಿಸಲು ಟ್ರಂಪ್ ಗೆ ಪುತಿನ್ ಷರತ್ತು; ಈಡೇರುತ್ತಾ 11 ವರ್ಷಗಳ ಗುರಿ?

Ro-Ko ಕಟ್ಟಿಹಾಕಿದ ಆಸೀಸ್: ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯ ಸೋತ Team India

ದೊಡ್ಡಬಳ್ಳಾಪುರ: "ಹೃದಯವಂತ ಆರ್.ಎಲ್.ಜಾಲಪ್ಪ ಜೀವನ‌ ಪಥ"; ಕೃತಿ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ!

ದೊಡ್ಡವರ ಮನೆಗೆ ಹೋಗಬಾರದಿತ್ತು: ಶಾರುಖ್ ಖಾನ್ ಮನೆ ಪಾರ್ಟಿಯಲ್ಲಿ ಆದ ಕಹಿ ಅನುಭವ ಬಿಚ್ಚಿಟ್ಟ ನಟ ಗುಲ್ಶನ್ ದೇವಯ್ಯ!

ಬೆಳಗಾವಿ 'ಡಿಸಿಸಿ ಬ್ಯಾಂಕ್' ಚುನಾವಣೆ: ಮತಗಟ್ಟೆ ಬಳಿ ಜಾರಕಿಹೊಳಿ- ಸವದಿ ಬಣಗಳ ನಡುವೆ ಮಾರಾಮಾರಿ!

SCROLL FOR NEXT