ಡಿ ಕೆ ಶಿವಕುಮಾರ್, ರಿಜ್ವಾನ್ ಪಾಷಾ  
ರಾಜ್ಯ

ಡಿ.ಕೆ ಶಿವಕುಮಾರ್ ಸಿಎಂ ಆಗಬೇಕು: ಕಾಂಗ್ರೆಸ್ ಮುಖಂಡನಿಂದ ಮೆಕ್ಕಾದಲ್ಲಿ ಪ್ರಾರ್ಥನೆ; Video viral

ಈ ಮಧ್ಯೆ ಡಿ ಕೆ ಶಿವಕುಮಾರ್ ಅಭಿಮಾನಿಯಾದ ಬೆಂಗಳೂರು ದಕ್ಷಿಣ ಜಿಲ್ಲೆ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಿಜ್ವಾನ್ ಪಾಷಾ ಮೆಕ್ಕಾಕ್ಕೆ ಹೋದ ಸಂದರ್ಭದಲ್ಲಿ ಡಿ ಕೆ ಶಿವಕುಮಾರ್ ಸೋದರರ ಫೋಟೋವನ್ನು ಮೊಬೈಲ್ ನಲ್ಲಿ ಹಿಡಿದುಕೊಂಡು ಪ್ರಾರ್ಥಿಸಿಕೊಂಡಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಡಿ ಕೆ ಶಿವಕುಮಾರ್ ಸಿಎಂ ಆಗಬೇಕೆಂಬ ಕೂಗು, ಒತ್ತಾಯ ಅವರ ಅಭಿಮಾನಿಗಳಿಂದ ಕೇಳಿಬರುತ್ತಲೇ ಇದೆ. ನವೆಂಬರ್ ನಲ್ಲಿ ಕ್ರಾಂತಿಯಾಗುತ್ತದೆ ಎಂದು ಈ ಹಿಂದೆ ಕಾಂಗ್ರೆಸ್ ನಾಯಕರೇ ಹೇಳಿಕೆ ನೀಡಿದ್ದರು. ಆದರೆ ಸ್ವತಃ ಸಿಎಂ ಸಿದ್ದರಾಮಯ್ಯನವರ ಅದನ್ನು ನಿರಾಕರಿಸಿದ್ದಾರೆ.

ಈ ಮಧ್ಯೆ ಡಿ ಕೆ ಶಿವಕುಮಾರ್ ಅಭಿಮಾನಿಯಾದ ಬೆಂಗಳೂರು ದಕ್ಷಿಣ ಜಿಲ್ಲೆ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಿಜ್ವಾನ್ ಪಾಷಾ ಮೆಕ್ಕಾಕ್ಕೆ ಹೋದ ಸಂದರ್ಭದಲ್ಲಿ ಡಿ ಕೆ ಶಿವಕುಮಾರ್ ಸೋದರರ ಫೋಟೋವನ್ನು ಮೊಬೈಲ್ ನಲ್ಲಿ ಹಿಡಿದುಕೊಂಡು ಪ್ರಾರ್ಥಿಸಿಕೊಂಡಿದ್ದಾರೆ.

ವಿಡಿಯೊದಲ್ಲಿ ಏನು ಹೇಳಿದ್ದಾರೆ?

ನಾನು ಕರ್ನಾಟಕದ ಮೆಕ್ಕಾಗೆ ಬಂದಿದ್ದೇನೆ. ಡಿ ಕೆ ಶಿವಕುಮಾರ್ ಮತ್ತು ಡಿ ಕೆ ಸುರೇಶ್ ಇಬ್ಬರೂ ನನ್ನ ಕಣ್ಣುಗಳು ಇದ್ದ ಹಾಗೆ. ಡಿ ಕೆ ಶಿವಕುಮಾರ್ ಅವರು ಮುಂದೆ ಮುಖ್ಯಮಂತ್ರಿಯಾಗಲಿ ಎಂದು ಪ್ರಾರ್ಥನೆ ಮಾಡಲು ಮೆಕ್ಕಾಗೆ ಬಂದಿದ್ದೇನೆ. ಇಲ್ಲಿಗೆ ಬಂದು ಹರಕೆ ಹೊತ್ತರೆ ಅಲ್ಲಾ ಕಾಪಾಡುತ್ತಾನೆ ಎಂಬುದು ಕೇವಲ ಮುಸಲ್ಮಾನರು ಮಾತ್ರವಲ್ಲ ಜಗತ್ತಿನ ಜನರ ನಂಬಿಕೆಯಾಗಿದೆ.

ಮುಂದಿನ ದಿನಗಳಲ್ಲಿ ಡಿ ಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ನಾನು ಕಾಂಗ್ರೆಸ್ ಪಕ್ಷ ಹಾಗೂ ರಾಹುಲ್ ಗಾಂಧಿಯವರಲ್ಲಿ ಮನವಿ ಮಾಡುತ್ತೇನೆ. ಜೈ ಹಿಂದ್ ಜೈ ಕರ್ನಾಟಕ, ಜೈ ಹಿಂದೂಸ್ತಾನ್ ಎಂದು ರಿಜ್ವಾನ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

Ranji Trophy final: ಮೊದಲ ದಿನ ಬಲಿಷ್ಠ ಕರ್ನಾಟಕ ವಿರುದ್ಧ ಪ್ರಾಬಲ್ಯ ಸಾಧಿಸಿದ ಜಮ್ಮು ಕಾಶ್ಮೀರ!

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಮ್ಯೂಸಿಕ್ ಮೈಲಾರಿಗೆ ಬಿಗ್ ರಿಲೀಫ್; ಜಾಮೀನು ಮಂಜೂರು

AIADMKಯಿಂದ ಮತ್ತಷ್ಟು ಫ್ರೀಬೀಸ್ ಘೋಷಣೆ; ಪ್ರತಿ ಕುಟುಂಬಕ್ಕೆ 10,000 ರೂ. ನೆರವು!

ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ, 7 ಅಪ್ರಾಪ್ತರ ಬಂಧನ; 15 ಲಕ್ಷ ರೂ ಪರಿಹಾರ ಘೋಷಣೆ

SCROLL FOR NEXT