ಅಭಿಷೇಕ್ 
ರಾಜ್ಯ

ಮಂಗಳೂರು: 'ಹನಿಟ್ರ್ಯಾಪ್ ಕಿರುಕುಳ'ಕ್ಕೆ ಬೇಸತ್ತು ಯುವಕ ಆತ್ಮಹತ್ಯೆಗೆ ಶರಣು!

ಮೃತ ಯುವಕನನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯ ಪರಪ್ಪಾಡಿ ನಿವಾಸಿ ಅಭಿಷೇಕ್ ಎಂದು ಗುರುತಿಸಲಾಗಿದೆ.

ಮಂಗಳೂರು: ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಯುವಕನೊಬ್ಬ, ತನ್ನ ಖಾಸಗಿ ವಿಡಿಯೋ ಬಳಸಿ ನಾಲ್ವರು ತನಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮೃತ ಯುವಕನನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯ ಪರಪ್ಪಾಡಿ ನಿವಾಸಿ ಅಭಿಷೇಕ್ ಎಂದು ಗುರುತಿಸಲಾಗಿದೆ.

ಡೆತ್ ನೋಟ್ ನಲ್ಲಿ ತಾನು ಪ್ರೀತಿಸಿದ ಹುಡುಗಿ ನಿರೀಕ್ಷಾ, ಆಕೆ ತಂಡದಲ್ಲಿದ್ದ ಮಂಗಳೂರು ಮೂಲದ ರಾಕೇಶ್ ,ರಾಹುಲ್ ಹಾಗೂ ತಸ್ಲೀಮ್ ಸಾವಿಗೆ ಕಾರಣ ಎಂದು ಬರೆದಿದ್ದಾನೆ. ಅವರು ಹಣಕ್ಕಾಗಿ ತೀವ್ರ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಾರೆ ಮತ್ತು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾನೆ. ಅಲ್ಲದೆ ಇವರು ತಂಡವಾಗಿ ಅನೇಕ ಜನರನ್ನು ಅಶ್ಲೀಲ ಫೋಟೋ ಬಳಸಿ ವಂಚಿಸಿದ್ದಾರೆ ಅಂತಲೂ ದೂರಿದ್ದಾನೆ.

ಡೆತ್ ನೋಟ್‌ನ ವಿಷಯಗಳ ಆಧಾರದ ಮೇಲೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಯುವಕ, ನಿರಂತರ ಬೆದರಿಕೆ ಮತ್ತು ಸುಲಿಗೆ ಪ್ರಯತ್ನಗಳಿಂದ ಬಳಲುತ್ತಿದ್ದರು ಎಂದು ಸೂಚಿಸುತ್ತವೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಾರತ ಮೇಲೆ ಶೇ.50 ಸುಂಕ ರದ್ದು ಮಾಡಿ, ಇದರಿಂದ ನಮ್ಮ ದೇಶಕ್ಕೇ ನಷ್ಟ': Donald Trump ಗೆ ಸೆನೆಟ್ ಸದಸ್ಯರ ಬೇಡಿಕೆ, ನಿರ್ಣಯ ಮಂಡನೆ

ಕಾಂಗ್ರೆಸ್‌ ಪ್ರತಿಭಟನೆಗೆ ಹೊಸ ಅಸ್ತ್ರ: ಆಳಂದ ಮತಗಳ್ಳತನ ಪ್ರಕರಣದಲ್ಲಿ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ CID ಚಾರ್ಜ್ ಶೀಟ್ ಸಲ್ಲಿಕೆ

ಜನೌಷಧಿ ಕೇಂದ್ರಗಳಿಗೆ ಶಕ್ತಿ ತುಂಬಿದ ಕರ್ನಾಟಕ, ಕೇರಳ, ತಮಿಳುನಾಡು!

ಚುಮು ಚುಮು ಚಳಿಯಲಿ ಆಹಾರ ಹೀಗಿರಲಿ (ಕುಶಲವೇ ಕ್ಷೇಮವೇ)

MUDA Scam: ಮಾಜಿ ಆಯುಕ್ತರಿಂದ ಸಂಬಂಧಿಕರ ಮೂಲಕ ನಗದು ಲಂಚ ಪಡೆದು ನಿವೇಶನ ಹಂಚಿಕೆ!

SCROLL FOR NEXT