ಪ್ರಿಯಾಂಕ್ ಖರ್ಗೆ, ಎಚ್. ಡಿ. ದೇವೇಗೌಡರು ಸಾಂದರ್ಭಿಕ ಚಿತ್ರ 
ರಾಜ್ಯ

RSS ನಿಷೇಧ: ದೇವೇಗೌಡರು 25 ವರ್ಷಗಳ ಹಿಂದೆಯೇ ಹೇಳಿದ್ರಾ? ಕುತೂಹಲ ಕೆರಳಿಸಿದ ಪ್ರಿಯಾಂಕ್ ಖರ್ಗೆ ಟ್ವೀಟ್!

'ಆರ್ ಎಸ್ ಎಸ್ ನಿಷೇಧವಾಗಬೇಕು' ಇದು ಜೆಡಿಎಸ್ ನವರ ಮನ್ ಕಿ ಬಾತ್! ಈ ಮನದಾಳದ ಮಾತುಗಳನ್ನು ಇಂದು ಮರೆತಿದ್ದಾರೆಯೇ ಅಥವಾ ಮರೆಯಲು ಪ್ರಯತ್ನಿಸುತ್ತಿದ್ದಾರೆಯೇ?

ಬೆಂಗಳೂರು: ರಾಜ್ಯದಲ್ಲಿ '' ಆರ್ ಎಸ್ ಎಸ್ ನಿಷೇಧವಾಗಬೇಕು'' ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು 25 ವರ್ಷಗಳ ಹಿಂದೆಯೇ ಹೇಳಿರುವುದನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಕುರಿತ ಪತ್ರಿಕಾ ವರದಿಯೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.

ಆರ್ ಎಸ್ ಎಸ್, ವಿಹೆಚ್ ಪಿ, ಬಜರಂಗದಳ ಮತ್ತು ಶಿವಸೇನೆಯಂಥ ಕೋಮು ಸಂಘಟನೆಗಳನ್ನು ನಿಷೇಧಿಸಬೇಕು. ದಕ್ಷಿಣ ಗುಜರಾತ್ ನಲ್ಲಿ ಕ್ರೈಸ್ತರ ಮೇಲೆ ನಡೆದ ದಾಳಿಗೆ ಈ ಸಂಘಟನೆಗಳು ಕಾರಣ ಎಂದು ದೇವೇಗೌಡರು ಆರೋಪಿಸಿರುವುದು ವರದಿಯಲ್ಲಿದೆ.

'ಆರ್ ಎಸ್ ಎಸ್ ನಿಷೇಧವಾಗಬೇಕು' ಇದು ಜೆಡಿಎಸ್ ನವರ ಮನ್ ಕಿ ಬಾತ್! ಈ ಮನದಾಳದ ಮಾತುಗಳನ್ನು ಇಂದು ಮರೆತಿದ್ದಾರೆಯೇ ಅಥವಾ ಮರೆಯಲು ಪ್ರಯತ್ನಿಸುತ್ತಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

ಈ ಹಳೆಯ ಪಾಳೆಯುಳಿಕೆಯಂತಹ ಮಾತುಗಳನ್ನು ಈ ಸಂದರ್ಭದಲ್ಲಿ ಬಿಜೆಪಿಯವರಿಗೆ ನೆನಪು ಮಾಡಲು ಬಯಸುತ್ತೇನೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್‌ನಲ್ಲಿ ಸಿಲುಕಿರುವ ಭಾರತೀಯರಿಗೆ ಪ್ರಧಾನಿ ಮೋದಿ ಸಹಾಯದ ಭರವಸೆ; ಕೊಚ್ಚಿಯಲ್ಲಿ 'ವಿಕ್ಷಿತ್ ಕೇರಳಂ'ಗೆ ಚಾಲನೆ

'ರಕ್ಷಿತ್ ಶೆಟ್ಟಿ - ರಶ್ಮಿಕಾ ನಿಶ್ಚಿತಾರ್ಥ ಮುರಿದುಬೀಳಲು ಇದೇ ಕಾರಣ': ತಾಯಿ ಸುಮನ್ ಮಂದಣ್ಣರದ್ದು ಎನ್ನಲಾದ ಆಡಿಯೋ ವೈರಲ್!

IPL 2026: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ: ಮಾರ್ಚ್ 28 ರಂದು RCB vs SRH

ತೈಲ ಪೂರೈಕೆಗೆ ರಿಯಾಯಿತಿ ಸ್ಥಗಿತ ಬೆನ್ನಲ್ಲೇ ಎಚ್ಚೆತ್ತ ಭಾರತ; ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ; ಮಹತ್ವದ ಚರ್ಚೆ!

ಹಾರ್ಮುಜ್ ಜಲಸಂಧಿ ಬಳಿ ದಾಳಿ: ಭಾರತ ಕಡೆಗೆ ಹೊರಟ್ಟಿದ್ದ ಥಾಯ್ ಕಾರ್ಗೋ ಹಡಗಿನಲ್ಲಿ ಬೆಂಕಿ, ಕಪ್ಪು ಹೊಗೆ! ಹೊಣೆ ಹೊತ್ತ ಇರಾನ್

SCROLL FOR NEXT