ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಆರ್‌ಎಸ್‌ಎಸ್ ಕಚೇರಿಯ ಮುಂದೆ ಶುಕ್ರವಾರ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆಂಬಲ ಸೂಚಿಸಲು ಎನ್‌ಎಸ್‌ಯುಐ ಸದಸ್ಯರು ಆರ್‌ಎಸ್‌ಎಸ್ ವಿರುದ್ಧ ಪ್ರತಿಭಟನೆ ನಡೆಸಿದರು. 
ರಾಜ್ಯ

RSS ಕಚೇರಿ ಮುಂದೆ ಯುವ ಕಾಂಗ್ರೆಸ್ ಪ್ರತಿಭಟನೆ: ಕ್ರಮಕ್ಕೆ BJP ಆಗ್ರಹ

ಆರ್‌ಎಸ್‌ಎಸ್‌ ರಾಜ್ಯ ಕಚೇರಿ ಕೇಶವ ಕೃಪಾಕ್ಕೆ ಮುತ್ತಿಗೆ ಹಾಕಲು ಯುವ ಕಾಂಗ್ರೆಸ್ ಮತ್ತು ಎನ್‌ಎಸ್‌ಐಯು ಸದಸ್ಯರು ಯತ್ನಿಸಿದ್ದಾರೆ.

ಬೆಂಗಳೂರು: ಆರ್‌ಎಸ್‌ಎಸ್‌ ರಾಜ್ಯ ಕಚೇರಿ ಕೇಶವ ಕೃಪಾಕ್ಕೆ ಮುತ್ತಿಗೆ ಹಾಕಲು ಯುವ ಕಾಂಗ್ರೆಸ್‌ ಘಟಕದ ಕಾರ್ಯಕರ್ತರು ಯತ್ನಿಸಿದ್ದು, ಕ್ರಮ ಕೈಗೊಳ್ಳುವಲ್ಲಿ ಪೊಲೀಸರು ವಿಫಲರಾಗಿದ್ದಾರೆಂದು ಆರೋಪಿಸಿ, ರಾಜ್ಯ ಬಿಜೆಪಿ ನಾಯಕರು ನಗರ ಪೊಲೀಸ್ ಆಯುಕ್ತ ಸೀಮಂತ್ ಸಿಂಗ್ ಅವರಿಗೆ ಶುಕ್ರವಾರ ದೂರು ನೀಡಿದ್ದಾರೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ ಸುನಿಲ್ ಕುಮಾರ್ ನೇತೃತ್ವದ ನಿಯೋಗ ಪೊಲೀಸ್ ಆಯುಕ್ತ ಸೀಮಂತ್ ಸಿಂಗ್ ಅವರನ್ನು ಭೇಟಿ ಮಾಡಿ, ದೂರು ಸಲ್ಲಿಸಿದೆ.

ಆರ್‌ಎಸ್‌ಎಸ್‌ ರಾಜ್ಯ ಕಚೇರಿ ಕೇಶವ ಕೃಪಾಕ್ಕೆ ಮುತ್ತಿಗೆ ಹಾಕಲು ಯುವ ಕಾಂಗ್ರೆಸ್ ಮತ್ತು ಎನ್‌ಎಸ್‌ಐಯು ಸದಸ್ಯರು ಯತ್ನಿಸಿದ್ದಾರೆ. ಯಾವುದೇ ವಿಚಾರದ ಬಗ್ಗೆ ಮಾಧ್ಯಮಗಳಲ್ಲಿ ಚರ್ಚೆ ನಡೆಸಲಿ, ಯಾವುದೇ ಪ್ರತಿಭಟನೆ ನಡೆಸುವ ಮೊದಲು ಪೊಲೀಸರ ಅನುಮತಿ ಪಡೆಯಬೇಕಿದೆ. ಆದರೆ, ಅನುಮತಿ ಇಲ್ಲದೆ ಇಲ್ಲಿ ಪ್ರತಿಭಟನೆ ನಡೆಸಲಾಗಿದೆ. ಇಂತಹ ಘಟನೆಗಳು ನಡೆಯದಂತೆ ಪೊಲೀಸರು ಕ್ರಮ ಕೈಗೊಳ್ಳಬೇಕು, ಪ್ರಸ್ತುತ ಘಟನೆ ಬಗ್ಗೆ ಪೊಲೀಸರು ಎಫ್ಐಆರ್ ದಾಖಲಿಸಬೇಕು. ಅಲ್ಲದೆ, ಪ್ರತಿಭಟನೆ ನಡೆಸಲು ಸ್ಥಳಾವಕಾಶ ನೀಡಿದ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಆರ್‌ಎಸ್‌ಎಸ್ ಕಚೇರಿ ಮುಂದೆ ಇಂದು ನಡೆದ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ ಪ್ರತಿಭಟನೆಯಾಗಿದೆ. ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ, ಎಲ್ಲಾ 33 ಸಚಿವರ ನಿವಾಸಗಳ ಮುಂದೆ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Afghanistan-Pakistan War: ತಕ್ಷಣದ ಕದನ ವಿರಾಮಕ್ಕೆ ಉಭಯ ರಾಷ್ಟ್ರಗಳು ಒಪ್ಪಿಗೆ: ಕತಾರ್ ವಿದೇಶಾಂಗ ಸಚಿವಾಲಯ

ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ಇನ್ಮುಂದೆ ಗ್ರಾ.ಪಂ ವ್ಯಾಪ್ತಿಯಲ್ಲೂ ಸಿಗಲಿದೆ ಇ-ಸ್ವತ್ತು ಸೌಲಭ್ಯ..!

ಗುತ್ತಿಗೆದಾರರು ಬಾಕಿ ಬಿಲ್ ಕೇಳಿದರೆ ಅದು "ಧಮ್ಕಿ" ಹೇಗೆ ಆಗುತ್ತದೆ DCM ಡಿಕೆ.ಶಿವಕುಮಾರ್ ಅವರೇ?

ಬಿಲ್​ ಕ್ಲಿಯರ್'ಗೆ ಗುತ್ತಿಗೆದಾರರ ಆಗ್ರಹ: DCM ಡಿಕೆ.ಶಿವಕುಮಾರ್ ಮಧ್ಯಪ್ರವೇಶ, ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸುವ ಭರವಸೆ

ನಾನು ಮೂಲಭೂತವಾದದ ವಿರೋಧಿಯೇ ಹೊರತು ಯಾವುದೇ ಧರ್ಮಶ್ರದ್ದೆಯ ವಿರೋಧಿಯಲ್ಲ: ಪ್ರಿಯಾಂಕ್ ಖರ್ಗೆ

SCROLL FOR NEXT