ಪ್ರೇಯಸಿ ಜೊತೆಗಿದ್ದ ತಕ್ಷಿತ್ ಸಾವು 
ರಾಜ್ಯ

ಬೆಂಗಳೂರು: 8 ದಿನಗಳಿಂದ ಪ್ರೇಯಸಿ ಜತೆ ಲಾಡ್ಜ್‌ನಲ್ಲಿದ್ದ ಪುತ್ತೂರಿನ ಯುವಕ ನಿಗೂಢ ಸಾವು, Girlfriend ಎಸ್ಕೇಪ್!

ಪುತ್ತೂರು ಮೂಲದ 20 ವರ್ಷದ ತಕ್ಷಿತ್ ವಿರಾಜಪೇಟೆಯ ರಕ್ಷಿತಾ ಎನ್ನುವ ಯುವತಿ ಜೊತೆ ಲಾಡ್ಜ್‌ನಲ್ಲಿ ರೂಂ ಮಾಡಿಕೊಂಡಿದ್ದರು.

ಬೆಂಗಳೂರು: ಬೆಂಗಳೂರಿನ ಮಡಿವಾಳದ ಗ್ರ್ಯಾಂಡ್ ಚಾಯ್ಸ್ ಲಾಡ್ಜ್ ನಲ್ಲಿ ಕಳೆದ 8 ದಿನಗಳಿಂದ ಪ್ರೇಯಸಿ ಜೊತೆ ತಂಗಿದ್ದ ಯುವಕನೋರ್ವ ನಿಗೂಢವಾಗಿ ಸಾವನ್ನಪ್ಪಿದ್ದಾನೆ. ಪುತ್ತೂರು ಮೂಲದ 20 ವರ್ಷದ ತಕ್ಷಿತ್ ವಿರಾಜಪೇಟೆಯ ರಕ್ಷಿತಾ ಎನ್ನುವ ಯುವತಿ ಜೊತೆ ಲಾಡ್ಜ್‌ನಲ್ಲಿ ರೂಂ ಮಾಡಿಕೊಂಡಿದ್ದರು. ಆದರೆ ತಕ್ಷಿತ್ ಇಂದು ಶವವಾಗಿ ಪತ್ತೆಯಾಗಿದ್ದಾನೆ. ಇನ್ನು ತಕ್ಷಿತ್ ಸಾವಿಗೂ ಮುನ್ನ ಆತನ ಜೊತೆಗಿದ್ದ ಯುವತಿ ಲಾಡ್ಜ್‌ನಿಂದ ಹೊರಹೋಗಿದ್ದಳು. ಸದ್ಯ ಯುಡಿಆರ್ ದಾಖಲಿಸಿಕೊಂಡಿರುವ ಮಡಿವಾಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಕಳೆದ ಎಂಟು ದಿನಗಳಿಂದ ಜೋಡಿ ಸ್ವಿಗ್ಗಿಯಲ್ಲಿ ಫುಡ್ ಆರ್ಡರ್ ಮಾಡಿ ಊಟ ತರಿಸಿಕೊಂಡು ತಿಂದಿದ್ದಾರೆ. ಆದರೆ ನಿನ್ನೆ ಊಟದ ನಂತರ ಇಬ್ಬರಿಗೂ ಫುಡ್ ಪಾಯ್ಸಿನ್ ಆಗಿ ಮಾತ್ರೆಗಳನ್ನು ತಿಂದಿದ್ದಾರೆ. ಊಟಕ್ಕೆ ಬೇಕಂತಲೆ ವಿಷ ಬೆರಸಿ ತಿಂದಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಫುಡ್ ಪಾಯ್ಸಿನ್ ನಿಂದ ಸುಧಾರಿಸಿಕೊಂಡಿದ್ದು ಯುವತಿ ನಿನ್ನೆ ರೂಂನಿಂದ ಹೊರಹೋದ ಬಳಿಕ ಕೋಣೆಯನ್ನು ಪರಿಶೀಲಿಸಲು ಹೋಟೆಲ್ ಸಿಬ್ಬಂದಿ ಹೋಗಿದ್ದಾಗ ತಕ್ಷಿತ್ ಮೃತದೇಹ ಪತ್ತೆಯಾಗಿದೆ. ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಎಲ್ಲಾ ಆಯಾಮಗಳೂ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿದೇಶದಿಂದ ಕಪ್ಪು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದರು. ಹಾಕಿದ್ರಾ?: BJP ವಿರುದ್ಧ ಸಿದ್ದರಾಮಯ್ಯ ಕಿಡಿ

'ಮದುವೆ ಮನೆಯಲ್ಲಿ ಬೇರೊಬ್ಬ ಮಹಿಳೆ ಜೊತೆ ಹಾಸಿಗೆಯಲ್ಲಿ ರೆಡ್​​ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಲಾಶ್: ಭಾರತೀಯ ಮಹಿಳಾ ಕ್ರಿಕೆಟಿಗರು ಆತನನ್ನು ಥಳಿಸಿದ್ದರು'

ರಾಷ್ಟ್ರೀಯ ರಕ್ಷಣಾ ಕಾರ್ಯತಂತ್ರ ಬದಲಿಸಿದ ಅಮೆರಿಕ: ಇಂಡೋ-ಪೆಸಿಫಿಕ್‌ಗೆ ಮೊದಲ ಆದ್ಯತೆ; ಯುರೋಪ್‌ ಅನ್ನು ದೂರವಿಟ್ಟ ಟ್ರಂಪ್!

T20 World cup: ಬಾಂಗ್ಲಾವನ್ನು ಹೊರಗಿಟ್ಟಿದ್ದು 'ಅನ್ಯಾಯ', ಟೂರ್ನಿಯಲ್ಲಿ ನಾವು ಆಡಲ್ಲ?; ICCಗೆ ಪಾಕಿಸ್ತಾನ ಧಮ್ಕಿ!

ಮೆಜೆಸ್ಟಿಕ್​​​​ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಬ್​ಅರ್ಬನ್ ರೈಲು ಯೋಜನೆಗೆ ಗ್ರೀನ್ ಸಿಗ್ನಲ್!

SCROLL FOR NEXT