ಕಾವೇರಿ ತೀರ್ಥೋದ್ಭವ 
ರಾಜ್ಯ

ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ: ಕಣ್ತುಂಬಿಕೊಂಡ ಭಕ್ತಾದಿಗಳು

ಶುಕ್ರವಾರ ಮಧ್ಯಾಹ್ನ 1.44ಕ್ಕೆ ತೀರ್ಥರೂಪಿಣಿಯಾಗಿ ತಾಯಿ ಕಾವೇರಿ ಪವಿತ್ರ ಬ್ರಹ್ಮಕುಂಡಿಕೆಯಲ್ಲಿ ದರ್ಶನ ನೀಡಿದಳು. ಇದಕ್ಕೂ ಮುನ್ನ ಅರ್ಚಕ ಗುರುರಾಜಾಚಾರ್ ನೇತೃತ್ವದಲ್ಲಿ 11ಕ್ಕೂ ಅಧಿಕ ಅರ್ಚಕರು ಕುಂಕುಮಾರ್ಚನೆ, ಪುಷ್ಪಾರ್ಚನೆ ಮೂಲಕ ಕಾವೇರಿಗೆ ಪೂಜೆ ಸಲ್ಲಿಕೆ ಮಾಡಿದರು.

ಕೊಡಗು: ತುಲಾ ಸಂಕ್ರಮಣದ ದಿನ (ಅ.17 ರಂದು) ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವವಾಗಿದ್ದು, ಸಾವಿರಾರು ಭಕ್ತಾದಿಗಳು ಅಪರೂಪದ ಕ್ಷಣವನ್ನು ಕಣ್ತುಂಬಿಕೊಂಡರು.

ಶುಕ್ರವಾರ ಮಧ್ಯಾಹ್ನ 1.44ಕ್ಕೆ ತೀರ್ಥರೂಪಿಣಿಯಾಗಿ ತಾಯಿ ಕಾವೇರಿ ಪವಿತ್ರ ಬ್ರಹ್ಮಕುಂಡಿಕೆಯಲ್ಲಿ ದರ್ಶನ ನೀಡಿದಳು. ಇದಕ್ಕೂ ಮುನ್ನ ಅರ್ಚಕ ಗುರುರಾಜಾಚಾರ್ ನೇತೃತ್ವದಲ್ಲಿ 11ಕ್ಕೂ ಅಧಿಕ ಅರ್ಚಕರು ಕುಂಕುಮಾರ್ಚನೆ, ಪುಷ್ಪಾರ್ಚನೆ ಮೂಲಕ ಕಾವೇರಿಗೆ ಪೂಜೆ ಸಲ್ಲಿಕೆ ಮಾಡಿದರು.

ತೀರ್ಥೋದ್ಭವ ಆಗುತ್ತಿದ್ದಂತೆ ಅರ್ಚಕ ವೃಂದದವರಿಂದ ಭಕ್ತರ ಮೇಲೆ ಕಾವೇರಿ ತೀರ್ಥ ಪ್ರೋಕ್ಷಣೆ ಮಾಡಲಾಯಿತು. ಭಾಗಮಂಡಲದ ಶ್ರೀ ಭಂಗಡೇಶ್ವರ ದೇವಾಲಯಕ್ಕೆ ಮೊದಲು ತೀರ್ಥವನ್ನು ಸಂಗ್ರಹಿಸಿ ಅಭಿಷೇಕ ಮಾಡಲಾಯಿತು.

ತೀರ್ಥೋದ್ಭವ ಸಮಯ ಸಮೀಪಿಸುತ್ತಿದ್ದಂತೆ ಪವಿತ್ರ ತೀರ್ಥ ಕುಂಡಿಕೆಯಲ್ಲಿ ಭಕ್ತರಿಂದ ನೂಕು ನುಗ್ಗಲು ಉಂಟಾಯಿತು. ಭಕ್ತರು ಬ್ಯಾರಿಕೇಡ್ ಭೇಧಿಸಿ ಕುಂಡಿಕೆ ಮುಂದೆ ತೀರ್ಥಕ್ಕಾಗಿ ಕಾತರದಿಂದ ಕಾದರು. ಮಧ್ಯಾಹ್ನದ ವೇಳೆ ತೀರ್ಥೋದ್ಭವವಾದ್ದರಿಂದ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಹೆಚ್ಚಿನ ಭಕ್ತರು ಮಾತೆ ಕಾವೇರಿ ದರ್ಶನವನ್ನು ಪಡೆದರು.

ನೂರಾರು ಕೊಡವರು ತಮ್ಮ ಸಾಂಪ್ರದಾಯಿಕ ಉಡುಪನ್ನು ಧರಿಸಿ, ಭಾಗಮಂಡಲದಿಂದ ತಲಕಾವೇರಿಯವರೆಗೆ ಸುಮಾರು 8 ಕಿ.ಮೀ. ಕಾಲಿನಲ್ಲೇ ನಡೆದು ಭಕ್ತಿಯ ಪ್ರದರ್ಶಿಸಿದರು.

ತಲಕಾವೇರಿಗೆ ತೆರಳುವಾಗ ಸಾಂಪ್ರದಾಯಿಕ ಕೊಡವ ವೇಷಭೂಷಣಗಳನ್ನು ಧರಿಸಿದ ಹಿರಿಯರು ಸಾಂಪ್ರದಾಯಿಕ ದುಡಿ ನುಡಿಸುತ್ತಾ ಬಾಳೋ ಪಾಟ್ ಹಾಡುತ್ತಾ ಮುನ್ನಡೆದರು.

ಈ ಸಂದರ್ಭದಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಅವರು ಸಾಂಪ್ರದಾಯಿಕ ರಾಜಮನೆತನದ ಬಿಳಿ ಉಡುಪು ಧರಿಸಿರುವುದು ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರು ಸಾಂಪ್ರದಾಯಿಕ ಕೊಡವ ವೇಷಭೂಷಣದಲ್ಲಿ ಕಂಡು ಬಂದರು.

ಇಬ್ಬರೂ ಭಾಗಮಂಡಲದಿಂದ ತಲಕಾವೇರಿಗೆ 8 ಕಿ.ಮೀ. ದೂರದಲ್ಲಿ ನಡೆದುಕೊಂಡು ಹೋಗಿ ಆಚರಣೆಗಳಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಉಪ ಆಯುಕ್ತ ವೆಂಕಟ್ ರಾಜ, ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಮತ್ತು ಇತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಹಾಜರಾಗಬೇಕಿತ್ತು. ಅನಿರೀಕ್ಷಿತ ಕಾರಣಗಳಿಂದ ಭೇಟಿಯನ್ನು ರದ್ದುಗೊಳಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026: ಷೇರುಮಾರುಕಟ್ಟೆ 'ರಕ್ತಪಾತ', ಹೂಡಿಕೆದಾರರ 9.40 ಲಕ್ಷ ಕೋಟಿ ರೂ ನಷ್ಟ! ಕುಸಿತಕ್ಕೆ ಕಾರಣವೇನು?

'ಆಗ ಸಿದ್ಧಾರ್ಥ್, ಈಗ CJ Roy': 'ತೆರಿಗೆ ಭಯೋತ್ಪಾದನೆ'; ಐಟಿ ದಾಳಿ ಕುರಿತು ಕೇಂದ್ರಕ್ಕೆ ಉದ್ಯಮಿ Mohandas Pai ಪತ್ರ! Video

T20 World Cup 2026: 'ಟೂರ್ನಿ ಆಡ್ತೇವೆ.. ಆದ್ರೆ ಭಾರತದ ವಿರುದ್ಧ ಆಡಲ್ಲ'; ಐಸಿಸಿಗೆ PCB ಹೊಸ ತಲೆನೋವು!

ಇನ್ಮುಂದೆ ಷೇರು ಮರುಖರೀದಿ ಲಾಭಕ್ಕೂ ತೆರಿಗೆ! Capital gains ಎಂದು ಪರಿಗಣಿಸುವ ಘೋಷಣೆ

U19 World Cup: ಪಾಕಿಸ್ತಾನವನ್ನು ಬಗ್ಗು ಬಡಿದು ಭಾರತ ಸೆಮಿಫೈನಲ್‌ಗೆ ಲಗ್ಗೆ; ಅಫ್ಘಾನ್ ಜೊತೆ ಗುದ್ದಾಟ!

SCROLL FOR NEXT