ಬದನವಾಳು ಗ್ರಾಮಕ್ಕೆ ತೆರಳಿದ ಮಾಜಿ ಶಾಸಕ ಬಿ. ಹರ್ಷವರ್ಧನ್ ಹಾಗೂ ಮೃತ ಮಕ್ಕಳ ಚಿತ್ರ 
ರಾಜ್ಯ

ನಂಜನಗೂಡು: ಕೆರೆಯಲ್ಲಿ ಈಜಲು ಹೋದ ಇಬ್ಬರು ಮಕ್ಕಳು ನೀರುಪಾಲು!

ದಸರಾ ರಜೆ ಹಿನ್ನೆಲೆಯಲ್ಲಿ ಮಕ್ಕಳು ಸೈಕಲ್ ಮೂಲಕ ಕೆರೆಗೆ ತೆರಳಿದ್ದಾರೆ. ತದನಂತರ ಕೆರೆಯಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ಸುಳಿಗೆ ಸಿಲುಕಿ ಹೊರಗೆ ಬಾರದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ನಂಜನಗೂಡು: ಕೆರೆಯಲ್ಲಿ ಈಜಲು ಹೋದ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ ಶನಿವಾರ ನಡೆದಿದೆ.

ಮೃತರನ್ನು ಬದನವಾಳು ಗ್ರಾಮದ ಮೋಹಿತ್ (8) ಆರ್ಯ (9) ಎಂದು ಗುರುತಿಸಲಾಗಿದೆ. ಮೋಹಿತ್ ಮೂರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರೆ, ಆರ್ಯ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.

ದಸರಾ ರಜೆ ಹಿನ್ನೆಲೆಯಲ್ಲಿ ಮಕ್ಕಳು ಸೈಕಲ್ ಮೂಲಕ ಕೆರೆಗೆ ತೆರಳಿದ್ದಾರೆ. ತದನಂತರ ಕೆರೆ ಬಳಿ ಬಟ್ಟೆ ಬಿಚ್ಚಿ ಈಜಲು ಇಳಿದಿದ್ದಾರೆ. ಈ ವೇಳೆ ಸುಳಿಗೆ ಸಿಲುಕಿ ಹೊರಗೆ ಬಾರದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಕವಲಂದೆ ಪೊಲೀಸ್ ಠಾಣೆ ಪೊಲೀಸರು ಮೃತ ಬಾಲಕರ ಶವವನ್ನು ಕೆರೆಯಿಂದ ಹೊರಗೆ ತಂದಿದ್ದಾರೆ. ಮೃತ ಮಕ್ಕಳ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಮಾಜಿ ಶಾಸಕ ಬಿ. ಹರ್ಷವರ್ಧನ್ ನಂಜನಗೂಡು ಸಾವ೯ಜನಿಕ ಆಸ್ಪತ್ರೆಯ ಶವಾಗಾರಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಚೇರಿಯಲ್ಲಿ ಐಟಿ ಶೋಧ ನಡೆಯುತ್ತಿದ್ದಾಗಲೇ ಶೂಟ್ ಮಾಡಿಕೊಂಡ ಸಿ.ಜೆ ರಾಯ್; ಪೊಲೀಸ್ ಆಯುಕ್ತರು ಹೇಳಿದ್ದೇನು?

ಉಪ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಎನ್‌ಸಿಪಿ ನಿರ್ಧಾರವನ್ನು ಬೆಂಬಲಿಸುತ್ತೇವೆ: ಫಡ್ನವೀಸ್

12 ರೋಲ್ಸ್ ರಾಯ್ಸ್‌ ಸೇರಿ ಹಲವು ಐಷಾರಾಮಿ ಕಾರು, ಸಾವಿರಾರು ಕೋಟಿ ಒಡೆಯ ಸಿಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಮಹಾರಾಷ್ಟ್ರದ ನೂತನ ಉಪ ಮುಖ್ಯಮಂತ್ರಿಯಾಗಿ ಸುನೇತ್ರ ಪವಾರ್ ನಾಳೆ ಪ್ರಮಾಣ ವಚನ ಸ್ವೀಕಾರ: ಭುಜಬಲ್

BIFF ನಲ್ಲಿ ಪ್ಯಾಲೆಸ್ತೀನ್ ಚಿತ್ರಗಳ ಪ್ರದರ್ಶನಕ್ಕೆ ಪ್ರಕಾಶ್ ರಾಜ್ ಒತ್ತಾಯ: ಬಿಜೆಪಿ ವಾಗ್ದಾಳಿ!

SCROLL FOR NEXT