ಡಿಸಿಸಿ ಬ್ಯಾಂಕ್ ಮತದಾನ ವೇಳೆ ಗಲಾಟೆ 
ರಾಜ್ಯ

ಬೆಳಗಾವಿ 'ಡಿಸಿಸಿ ಬ್ಯಾಂಕ್' ಚುನಾವಣೆ: ಮತಗಟ್ಟೆ ಬಳಿ ಜಾರಕಿಹೊಳಿ- ಸವದಿ ಬಣಗಳ ನಡುವೆ ಮಾರಾಮಾರಿ!

ಲಕ್ಷ್ಮಣ ಸವದಿ-ಕತ್ತಿ ಬಣದ ಬಸನಗೌಡ ಆಸಂಗಿ ರಾಯಬಾಗ ತಾಲೂಕಿನಿಂದ ನಿರ್ದೇಶಕ ಸ್ಥಾನಕ್ಕೆ ಕಣಕ್ಕಿಳಿದಿದ್ದು, ಹೋಟೆಲ್ ಮುಂದೆ ಮಾರಾಮಾರಿ ನಡೆದಿದೆ.

ಬೆಳಗಾವಿ: ಡಿಸಿಸಿ ಬ್ಯಾಂಕ್ ಚುನಾವಣೆ ಮತದಾನದ ವೇಳೆ ಹೈಡ್ರಾಮ ನಡೆದಿದೆ. ಮತಗಟ್ಟೆ ಬಳಿ ಜಾರಕಿಹೊಳಿ ಹಾಗೂ ಸವದಿ ಬಣಗಳ ನಡುವೆ ಹೊಡೆದಾಟ ನಡೆದಿದೆ. ಡೆಲಿಗೇಷನ್ ಫಾರ್ಮ್ ಕೊಡುತ್ತಿಲ್ಲ ಎಂದು ಆರೋಪಿಸಿ ಸವದಿ ಬಣದ ಬೆಣ್ಬಲಿಗರು ಕ್ಯಾತೆ ತೆಗೆದಿದ್ದು, ಜಾರಕಿಹೊಳಿ ಬಣದ ಅಭ್ಯರ್ಥಿ ವಿರುದ್ಧ ಆರೋಪ ಮಾಡಿ ಗಲಾಟೆ ಆರಂಭಿಸಿದ್ದಾರೆ.

ಮತದಾನ ಮಾಡಲು 40 ಡೆಲಿಗೇಷನ್ ಫಾರಂ ಕೊಡ್ತಿಲ್ಲ ಎಂದು ಜಾರಕಿಹೊಳಿ‌ ಪೆನಲ್‌ನ ಅಭ್ಯರ್ಥಿ ಅಪ್ಪಾಸಾಹೇಬ್ ವಿರುದ್ಧ ಆರೋಪಿಸಿ ಬಸನಗೌಡ ಆಸಂಗಿ ಬೆಂಬಲಿಗರು ಬೆಳಗಾವಿಯ ಖಾಸಗಿ ಹೋಟೆಲ್‌ಗೆ ನುಗ್ಗಿದ್ದಾರೆ.

ಲಕ್ಷ್ಮಣ ಸವದಿ-ಕತ್ತಿ ಬಣದ ಬಸನಗೌಡ ಆಸಂಗಿ ರಾಯಬಾಗ ತಾಲೂಕಿನಿಂದ ನಿರ್ದೇಶಕ ಸ್ಥಾನಕ್ಕೆ ಕಣಕ್ಕಿಳಿದಿದ್ದು, ಹೋಟೆಲ್ ಮುಂದೆ ಮಾರಾಮಾರಿ ನಡೆದಿದೆ.

ಈ ವೇಳೆ ಸ್ಥಳಕ್ಕೆ ಆಗಮಿಸಿದ ಡಿಸಿಪಿ ನಾರಾಯಣ ಭರಮನಿ ಚುನಾವಣಾಧಿಕಾರಿಗೆ ದೂರು ನೀಡುವಂತೆ ಸವದಿ ಬೆಂಬಲಿಗರ ಮನವೊಲಿಕೆ ಮಾಡಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಹಿನ್ನೆಲೆ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಗಲಾಟೆ ತಾರಕ್ಕೇರುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಡಿಸಿಸಿ ಬ್ಯಾಂಕಿನ 16 ನಿರ್ದೇಶಕರ ಸ್ಥಾನಗಳ ಪೈಕಿ 9 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು, ಇಂದು ಏಳು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಇಂದು ಸಂಜೆಯೇ ಫಲಿತಾಂಶ ಹೊರಬೀಳಲಿದೆ. ಅಥಣಿ ಕ್ಷೇತ್ರದಲ್ಲಿ ಶಾಸಕ ಲಕ್ಷ್ಮಣ ಸವದಿ ವಿರುದ್ಧ ಮಾಜಿ ಶಾಸಕ ಮಹೇಶ್ ಕುಮಠಳ್ಳಿ, ನಿಪ್ಪಾಣಿಯಲ್ಲಿ ಮಾಜಿ ಸಂಸದ ಅಣ್ಣಾ ಸಾಹೇಬ ಜೊಲ್ಲೆ ವಿರುದ್ಧ ಉತ್ತಮ ಪಾಟೀಲ ಸ್ಪರ್ಧಿಸಿದ್ದಾರೆ.

ಹುಕ್ಕೇರಿಯಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ರಾಜೀಂದ್ರ ಪಾಟೀಲ, ಚೆನ್ನಮ್ಮನ ಕಿತ್ತೂರಿನಲ್ಲಿ ನಾನಾ ಸಾಹೇಬ ಪಾಟೀಲ ವಿರುದ್ಧ ವಿಕ್ರಮ ಇನಾಮದರ, ರಾಯಬಾಗದಲ್ಲಿ ಡಿಸಿಸಿ ಬ್ಯಾಂಕ್ ಹಾಲಿ ಅಧ್ಯಕ್ಷ ಅಪ್ಪಾ ಸಾಹೇಬ ಕುಲಗೊಡೆ ವಿರುದ್ಧ ಬಸನಗೌಡ ಅಸಂಗಿ, ರಾಮದುರ್ಗದಲ್ಲಿ ಶ್ರೀಕಾಂತ ಢವಣ ವಿರುದ್ಧ ಮಲ್ಲಣ್ಣ ಯಾದವಾಡ ಹಾಗೂ ಬೈಲಹೊಂಗಲದಲ್ಲಿ ಮಾಜಿ ಶಾಸಕ ಡಾ. ವಿಶ್ವನಾಥ ಪಾಟೀಲ್ ಸ್ಪರ್ಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಳ್ಳು ಸುದ್ದಿ ಬಿತ್ತರ ಆರೋಪ: ರಾಷ್ಟ್ರೀಯ ಮಾಧ್ಯಮಗಳಿಗೆ ಉದಯನಿಧಿ ಶಾಕ್, 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ನೋಟಿಸ್..!

'Islamic NATO' ಊಹಾಪೋಹಗಳಿಗೆ ಮತ್ತಷ್ಟು ಬಲ: ಹೊಸ ರಕ್ಷಣಾ ಒಪ್ಪಂದದತ್ತ ಟರ್ಕಿ-ಸೌದಿ-ಪಾಕಿಸ್ತಾನ, ಜಾಗತಿಕ ಮಟ್ಟದಲ್ಲಿ ಹೆಚ್ಚಿದ ಕುತೂಹಲ..!

ಸ್ಟಾಕ್ ಮಾರ್ಕೆಟ್ ಹೆಸರಲ್ಲಿ ಲಕ್ಷಾಂತರ ರೂ ವಂಚನೆ; ಪ್ರಶ್ನಿಸಿದ ಕನ್ನಡಿಗರಿಗೆ ಅಪಮಾನ, ಕೊನೆಗೂ ಕ್ಷಮೆ ಯಾಚನೆ! Video

'ಕಾವೇರಿ ನಮ್ಮ ಜೀವನಾಡಿ, ಈ ವಿಚಾರದಲ್ಲಿ ತುಚ್ಛ ರಾಜಕಾರಣ ಮಾಡಲು ಬಯಸಲ್ಲ: ತಮಿಳುನಾಡು ಸಿಎಂ ವಿಜಯ್..!

'ಭಾರತದ ಕಾನೂನು ಪಾಲಿಸುತ್ತಿದ್ದೀರಾ?': Metaಗೆ ಖಡಕ್ ಕ್ಲಾಸ್‌ ತೆಗೆದುಕೊಂಡ ಕೇಂದ್ರ ಸರ್ಕಾರ, ತೀವ್ರ ವಿಚಾರಣೆ