ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಅನಂತ್ ನಾಗ್ ಗೆ ಸನ್ಮಾನ  
ರಾಜ್ಯ

ಫಿಲಂ ಚೇಂಬರ್ ನವರ ಮೇಲೆ ನನಗೆ ಕೋಪ ಇದೆ; ಅನಂತ್ ನಾಗ್ ಕನ್ನಡ ಚಿತ್ರರಂಗದ ಆಸ್ತಿ: ಡಿ.ಕೆ ಶಿವಕುಮಾರ್

ಸಿನಿಮಾ ರಂಗ ಬೆಳೆಯುತ್ತಿದೆ. ನಟರು, ನಿರ್ಮಾಪಕರು 50 ಜನ ಇದ್ದರೂ ಆ ಸಿನಿಮಾದಲ್ಲಿ ಸಾವಿರಾರು ಮಂದಿ ಕೆಲಸ ಮಾಡುತ್ತಿರುತ್ತಾರೆ.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು 2025ನೇ ಸಾಲಿನ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ಕಲಾವಿದ ಅನಂತ್ ನಾಗ್ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹಾಸನ್ ರಘು ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಲಾವಿದರಿಬ್ಬರಿಗೆ ಗೌರವ ಅಭಿನಂದನೆ ಸಲ್ಲಿಸಿದರು. ಈ ವೇಳೆ ಅವರು ಚಿತ್ರರಂಗದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಬೇರೆ ಯಾವುದಾದರೂ ಸಂದರ್ಭದಲ್ಲಿ ನಾನು ಫಿಲ್ಮ್ ಚೇಂಬರ್​​ಗೆ ಬರುತ್ತೇನೆ. ಇವರ ಮೇಲೆಲ್ಲ ನನಗೆ ಕೋಪ ಇದೆ. ಇರಲಿ, ಈಗ ನಾನು ಅದರ ಬಗ್ಗೆ ಮಾತಾಡೋಕೆ ಹೋಗಲ್ಲ ಎಂದರು.

ಇತ್ತೀಚೆಗೆ ಸಿನಿಮಾ ವಿತರಕರು, ಪ್ರದರ್ಶಕರು ಭೇಟಿ ಮಾಡಿ ಅನೇಕ ವಿಚಾರ ಚರ್ಚೆ ಮಾಡಿದರು. ಸಿನಿಮಾ ರಂಗ ಬೆಳೆಯುತ್ತಿದೆ. ನಟರು, ನಿರ್ಮಾಪಕರು 50 ಜನ ಇದ್ದರೂ ಆ ಸಿನಿಮಾದಲ್ಲಿ ಸಾವಿರಾರು ಮಂದಿ ಕೆಲಸ ಮಾಡುತ್ತಿರುತ್ತಾರೆ. ಕಲೆ ಯಾರಪ್ಪನ ಮನೆ ಸ್ವತ್ತಲ್ಲ, ನಾವು ಉಳಿಸಿ ಬೆಳೆಸಿಕೊಂಡ ಹೋಗಬೇಕು ಎಂದರು.

ಬಿಗ್ ಬಾಸ್ ಕಾರ್ಯಕ್ರಮ ಸಮಸ್ಯೆ

ಇತ್ತೀಚೆಗೆ ಬಿಗ್ ಬಾಸ್ ರಿಯಾಲಿಟಿ ಶೋ ವಿಚಾರವಾಗಿ ಮಾಲಿನ್ಯ ನಿಯಂತ್ರಣ ಮಂಡಳಿ ನೊಟೀಸ್ ವಿಚಾರದಲ್ಲಿ ನಾನು ಮಧ್ಯಪ್ರವೇಶಿಸಬೇಕಾಯಿತು. ಅವರು ಯಾವ ಕಾರಣ ಕೊಟ್ಟರೋ ಗೊತ್ತಿಲ್ಲ. ಆದರೆ ಸಾವಿರಾರು ಜನ ಕೆಲಸ ಮಾಡುತ್ತಿರುತ್ತಾರೆ. ಸಾರ್ವಜನಿಕರ ಗಮನ ಇರುತ್ತದೆ ಎಂಬ ಅರಿವು ನಮಗಿದೆ. ಹೀಗಾಗಿ ಅಧಿಕಾರಿಗಳಿಗೆ ಹೇಳಿ ಮತ್ತೆ ಅವಕಾಶ ಮಾಡಿಕೊಟ್ಟೆ. ಅದೇನೇ ಇದ್ದರೂ ಉದ್ಯಮ ನಡೆಯುತ್ತಿದೆ, ಸ್ಪರ್ಧೆ ಹೆಚ್ಚಾಗಿದೆ. ತಂತ್ರಜ್ಞಾನ ಬೆಳೆಯುತ್ತಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ನನಗೆ ಬೇಕಿರುವುದು ಅದೊಂದೆ...": ರಷ್ಯಾ-ಯುಕ್ರೇನ್ ಯುದ್ಧ ಕೊನೆಗೊಳಿಸಲು ಟ್ರಂಪ್ ಗೆ ಪುತಿನ್ ಷರತ್ತು; ಈಡೇರುತ್ತಾ 11 ವರ್ಷಗಳ ಗುರಿ?

Ro-Ko ಕಟ್ಟಿಹಾಕಿದ ಆಸೀಸ್: ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯ ಸೋತ Team India

ದೊಡ್ಡಬಳ್ಳಾಪುರ: "ಹೃದಯವಂತ ಆರ್.ಎಲ್.ಜಾಲಪ್ಪ ಜೀವನ‌ ಪಥ"; ಕೃತಿ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ!

ದೊಡ್ಡವರ ಮನೆಗೆ ಹೋಗಬಾರದಿತ್ತು: ಶಾರುಖ್ ಖಾನ್ ಮನೆ ಪಾರ್ಟಿಯಲ್ಲಿ ಆದ ಕಹಿ ಅನುಭವ ಬಿಚ್ಚಿಟ್ಟ ನಟ ಗುಲ್ಶನ್ ದೇವಯ್ಯ!

ಬೆಳಗಾವಿ 'ಡಿಸಿಸಿ ಬ್ಯಾಂಕ್' ಚುನಾವಣೆ: ಮತಗಟ್ಟೆ ಬಳಿ ಜಾರಕಿಹೊಳಿ- ಸವದಿ ಬಣಗಳ ನಡುವೆ ಮಾರಾಮಾರಿ!

SCROLL FOR NEXT