ಎಂ.ಸಿ ಸುಧಾಕರ್ 
ರಾಜ್ಯ

SSLC-PUC ಉತ್ತೀರ್ಣ ಅಂಕ ಇಳಿಕೆ ನಿರ್ಧಾರಕ್ಕೂ ಮುನ್ನ ಅಧ್ಯಯನ, ಚರ್ಚೆ ಅಗತ್ಯ: ಸಚಿವ ಡಾ. ಎಂ.ಸಿ ಸುಧಾಕರ್

ಉತ್ತೀರ್ಣ ಅಂಕಗಳನ್ನು ಕಡಿಮೆ ಮಾಡುವ ನಿರ್ಧಾರವನ್ನು ಎಚ್ಚರಿಕೆಯಿಂದ ಅಧ್ಯಯನ ಮಾಡಿದ ನಂತರ ತೆಗೆದುಕೊಳ್ಳಬೇಕಾಗಿತ್ತು ಎಂಬುದು ನನ್ನ ಭಾವನೆ.

ಉಡುಪಿ: ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಉತ್ತೀರ್ಣ ಶೇಕಡಾವಾರು ಪ್ರಮಾಣವನ್ನು ಕಡಿಮೆ ಮಾಡುವುದಕ್ಕೂ ಮುನ್ನ ಅಧ್ಯಯನ ಹಾಗೂ ಚರ್ಚೆಯ ಅಗತ್ಯವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತೀರ್ಣ ಅಂಕಗಳನ್ನು ಕಡಿಮೆ ಮಾಡುವ ನಿರ್ಧಾರವನ್ನು ಎಚ್ಚರಿಕೆಯಿಂದ ಅಧ್ಯಯನ ಮಾಡಿದ ನಂತರ ತೆಗೆದುಕೊಳ್ಳಬೇಕಾಗಿತ್ತು ಎಂಬುದು ನನ್ನ ಭಾವನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಬಂಗಾರಪ್ಪ ಅವರಿಗೆ ಚರ್ಚೆ ನಡೆಸಬೇಕೆಂದು ನಿರ್ದೇಶನ ನೀಡಿದ್ದಾರೆಂದು ಹೇಳಿದರು.

ಅನೇಕ ಶಾಸಕರು ಗ್ರಾಮೀಣ ಪ್ರದೇಶಗಳಲ್ಲಿ ಕಾಲೇಜುಗಳಿಗಾಗಿ ಮನವಿ ಮಾಡಿದ್ದಾರೆ, ಆದರೆ ಇಲಾಖೆಯು ಮೊದಲು ಅಧ್ಯಾಪಕರನ್ನು ನೇಮಿಸಿಕೊಳ್ಳಬೇಕು. ಕಾಲೇಜು ಪ್ರಾರಂಭಿಸುವ ಮೊದಲು ಇತರ ವ್ಯವಸ್ಥೆಗಳನ್ನು ಮಾಡಬೇಕು ಎಂದು ತಿಳಿಸಿದರು.

ಸರ್ಕಾರವು ಪ್ರಸ್ತುತ ಅಸ್ತಿತ್ವದಲ್ಲಿರುವ ಕಾಲೇಜುಗಳನ್ನು ಬಲಪಡಿಸುವ ಮತ್ತು ಉದ್ಯೋಗ ಆಧಾರಿತ ಕೋರ್ಸ್‌ಗಳನ್ನು ಪರಿಚಯಿಸುವತ್ತ ಗಮನಹರಿಸುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ಸುಮಾರು 2,000 ವಿದ್ಯಾರ್ಥಿಗಳು ಉದ್ಯೋಗ ಆಧಾರಿತ ಕೋರ್ಸ್‌ಗಳಿಗೆ ಸೇರಿದ್ದಾರೆ. ನಾವು ಬಿ.ಕಾಂನಲ್ಲಿ ನಾಲ್ಕು ಪದವಿ (ಲಾಜಿಸ್ಟಿಕ್ಸ್, ಚಿಲ್ಲರೆ ವ್ಯಾಪಾರ, ಇ-ಕಾಮರ್ಸ್, ಬ್ಯಾಂಕಿಂಗ್ ಮತ್ತು ಹಣಕಾಸು.) ಕಾರ್ಯಕ್ರಮಗಳನ್ನು ಪರಿಚಯಿಸಿದ್ದೇವೆ.

ಕ್ರೋಮಾ ಮತ್ತು ರಿಲಯನ್ಸ್ ಜೊತೆ ಒಪ್ಪಂದಕ್ಕೆ ಸಹಿ ಹಾಕಿದ್ದೇವೆ. ವಿದ್ಯಾರ್ಥಿಗಳು ತಮ್ಮ ಕೋರ್ಸ್‌ನ ಐದನೇ ಅಥವಾ ಆರನೇ ಸೆಮಿಸ್ಟರ್‌ನಲ್ಲಿ ಅಪ್ರೆಂಟಿಸ್‌ಶಿಪ್ ಅವಕಾಶಗಳನ್ನು ಪಡೆಯುತ್ತಾರೆಂದು ತಿಳಿಸಿದರು.

ಇದೇ ವೇಳೆ ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಮತ್ತು ಅವರ ರಾಜ್ಯಸಭಾ ಸಂಸದೆ-ಪತ್ನಿ ಸುಧಾ ಮೂರ್ತಿ ಅವರು ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಲು ನಿರಾಕರಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಇಡೀ ರಾಷ್ಟ್ರಕ್ಕೆ ಕೀರ್ತಿ ತಂದ ಇನ್ಫೋಸಿಸ್ ಸಂಸ್ಥಾಪಕರ ಬಗ್ಗೆ ನಮಗೆ ಗೌರವವಿದೆ. ಆದರೆ, ರಾಜ್ಯದಲ್ಲಿ ನಡೆಯುತ್ತಿರುವ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆಯನ್ನು ಸುಧಾ ಮೂರ್ತಿ ಮತ್ತು ನಾರಾಯಣ ಮೂರ್ತಿ ವಿರೋಧಿಸಿದ್ದಾರೆ.

ಅದು ಸಮೀಕ್ಷೆಯಾಗಿದ್ದರಿಂದ ಸಹಜವಾಗಿ ಎಲ್ಲರೂ ತಮ್ಮ ಜಾತಿ-ಧರ್ಮ ಉಲ್ಲೇಖಿಸಬೇಕಾಗುತ್ತದೆ. ಕಾಂಗ್ರೆಸ್​ ಸರ್ಕಾರ ಈ ಸಮೀಕ್ಷೆ ಮಾಡುತ್ತಿರುವುದಕ್ಕೆ ನಿಮ್ಮ ವಿರೋಧವೇ? ಮುಂದಿನ ವರ್ಷ ಕೇಂದ್ರ ಬಿಜೆಪಿ ಸರ್ಕಾರ ನೇರವಾಗಿಯೇ ಜಾತಿ ಗಣತಿ ಮಾಡುತ್ತಿದೆ. ಆಗಲೂ ನೀವು ವಿರೋಧ ವ್ಯಕ್ತಪಡಿಸುತ್ತೀರಾ? ವಿಶ್ವವೇ ನಿಮ್ಮನ್ನು ನೋಡುತ್ತಿರುತ್ತದೆ. ಹೀಗಾಗಿ ತಾವುಗಳು ನೀಡುವ ಸೂಚನೆ, ಅನುಭವಗಳು ಏನು ಎನ್ನುವುದನ್ನೂ ದೇಶದ ಯುವ ಸಮೂಹ ಆಲಿಸುತ್ತದೆ. ಈ ವಿಚಾರದಲ್ಲಿ ಅವರು ಬಹಳ ಯೋಚನೆ ಮಾಡಿ ಹೇಳಿಕೆ ಕೊಟ್ಟಿದ್ದರೆ ಚೆನ್ನಾಗಿರುತ್ತಿತ್ತು ಎಂದು ಸಚಿವ ಸುಧಾಕರ್​ ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ನನಗೆ ಬೇಕಿರುವುದು ಅದೊಂದೆ...": ರಷ್ಯಾ-ಯುಕ್ರೇನ್ ಯುದ್ಧ ಕೊನೆಗೊಳಿಸಲು ಟ್ರಂಪ್ ಗೆ ಪುತಿನ್ ಷರತ್ತು; ಈಡೇರುತ್ತಾ 11 ವರ್ಷಗಳ ಗುರಿ?

Ro-Ko ಕಟ್ಟಿಹಾಕಿದ ಆಸೀಸ್: ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯ ಸೋತ Team India

ದೊಡ್ಡಬಳ್ಳಾಪುರ: "ಹೃದಯವಂತ ಆರ್.ಎಲ್.ಜಾಲಪ್ಪ ಜೀವನ‌ ಪಥ"; ಕೃತಿ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ!

ದೊಡ್ಡವರ ಮನೆಗೆ ಹೋಗಬಾರದಿತ್ತು: ಶಾರುಖ್ ಖಾನ್ ಮನೆ ಪಾರ್ಟಿಯಲ್ಲಿ ಆದ ಕಹಿ ಅನುಭವ ಬಿಚ್ಚಿಟ್ಟ ನಟ ಗುಲ್ಶನ್ ದೇವಯ್ಯ!

ಬೆಳಗಾವಿ 'ಡಿಸಿಸಿ ಬ್ಯಾಂಕ್' ಚುನಾವಣೆ: ಮತಗಟ್ಟೆ ಬಳಿ ಜಾರಕಿಹೊಳಿ- ಸವದಿ ಬಣಗಳ ನಡುವೆ ಮಾರಾಮಾರಿ!

SCROLL FOR NEXT