ಬೆಂಗಳೂರು- ಹಂಪಿ ದೈನಂದಿನ ವಿಮಾನ ಸೇವೆ  
ರಾಜ್ಯ

ನವೆಂಬರ್ 1 ರಿಂದ ಬೆಂಗಳೂರು-ಹಂಪಿ ದೈನಂದಿನ ವಿಮಾನ ಸೇವೆ ಆರಂಭ

ಈ ಹೊಸೆ ವಿಮಾನ ಯಾನ ಸೇವೆಯಿಂದ ಯುನೆಸ್ಕೋ ವಿಶ್ವ ಪರಂಪರೆಯ ತಾಣ ಮತ್ತು ದಕ್ಷಿಣ ಭಾರತದ ಅತ್ಯಂತ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾದ ಹಂಪಿಗೆ ಸಂಪರ್ಕವನ್ನು ಗಮನಾರ್ಹವಾಗಿ ಸುಧಾರಿಸುವ ನಿರೀಕ್ಷೆಯಿದೆ.

ಬಳ್ಳಾರಿ: ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಮತ್ತು ವ್ಯವಹಾರಕ್ಕೆ ಪ್ರಮುಖ ಉತ್ತೇಜನ ನೀಡುವ ನಿಟ್ಟಿನಲ್ಲಿ, ಪ್ರಾದೇಶಿಕ ವಿಮಾನಯಾನ ಸಂಸ್ಥೆ ಸ್ಟಾರ್ ಏರ್ ಬೆಂಗಳೂರು ಮತ್ತು ಹಂಪಿಯನ್ನು ಸಂಪರ್ಕಿಸುವ ಹೊಸ ವಿಮಾನವನ್ನು ಪ್ರಾರಂಭಿಸುವ ಯೋಜನೆಯನ್ನು ಪ್ರಕಟಿಸಿದೆ.

ಐತಿಹಾಸಿಕ ಪಟ್ಟಣಕ್ಕೆ ಹತ್ತಿರದ ವಿಮಾನ ನಿಲ್ದಾಣವಾದ ವಿದ್ಯಾನಗರ (ಜೆಎಸ್‌ಡಬ್ಲ್ಯೂ) ಏರ್ ಪೋರ್ಟ್ ಮೂಲಕ ವಿಮಾನಗಳು ಕಾರ್ಯನಿರ್ವಹಿಸಲಿವೆ. ಕಳೆದ ಒಂದು ತಿಂಗಳಿನಿಂದ ಜೆಎಸ್‌ಡಬ್ಲ್ಯೂ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿರುವುದರಿಂದ ಪ್ರಯಾಣಿಕರು ಮತ್ತು ಸ್ಥಳೀಯರಿಗೆ ಈ ಘೋಷಣೆ ನಿರಾಳವಾಗಿದೆ.

ಈ ಹೊಸೆ ವಿಮಾನ ಯಾನ ಸೇವೆಯಿಂದ ಯುನೆಸ್ಕೋ ವಿಶ್ವ ಪರಂಪರೆಯ ತಾಣ ಮತ್ತು ದಕ್ಷಿಣ ಭಾರತದ ಅತ್ಯಂತ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾದ ಹಂಪಿಗೆ ಸಂಪರ್ಕವನ್ನು ಗಮನಾರ್ಹವಾಗಿ ಸುಧಾರಿಸುವ ನಿರೀಕ್ಷೆಯಿದೆ. ಬಳ್ಳಾರಿಗೂ ಸಹ ಪ್ರಯೋಜನವಾಗಲಿದೆ, ವಿಮಾನ ಸೇವೆಯು ನವೆಂಬರ್ 1 ರಂದು ಪ್ರಾರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಸ್ಟಾರ್ ಏರ್‌ನ ಘೋಷಣೆಯು ಪ್ರವಾಸಿಗರು ಮತ್ತು ಸ್ಥಳೀಯ ಉದ್ಯಮಿಗಳಿಗೆ ಸಂತೋಷವನ್ನು ತಂದಿದೆ. ಈ ಹಿಂದೆ, ಅಲೈಯನ್ಸ್ ಏರ್ ಹಂಪಿಯಿಂದ ಬೆಂಗಳೂರಿಗೆ ದೈನಂದಿನ ವಿಮಾನಗಳನ್ನು ನಿರ್ವಹಿಸುತ್ತಿತ್ತು, ಆದರೆ ತಾಂತ್ರಿಕ ಕಾರಣಗಳಿಂದ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು.

ಸ್ಟಾರ್ ಏರ್ ಪ್ರಕಾರ, ದೈನಂದಿನ ವಿಮಾನವು ಬೆಂಗಳೂರಿನಿಂದ ಬೆಳಿಗ್ಗೆ ಹೊರಟು, ವಿದ್ಯಾನಗರವನ್ನು ತಲುಪಿ, ಸ್ವಲ್ಪ ಸಮಯದ ನಂತರ ಹಿಂತಿರುಗುತ್ತದೆ. ಈ ವಿಮಾನವು ಬೆಂಗಳೂರಿನಿಂದ ಬೆಳಿಗ್ಗೆ 7:50 ಕ್ಕೆ ಹೊರಟು, 8.40 ಕ್ಕೆ ವಿದ್ಯಾನಗರ ತಲುಪಿ, 9.10 ಕ್ಕೆ ವಿದ್ಯಾನಗರದಿಂದ ಹಿಂತಿರುಗಿ ಬೆಳಿಗ್ಗೆ 10 ಗಂಟೆಗೆ ಬೆಂಗಳೂರು ತಲುಪಲಿದೆ.

ಇದು ದೈನಂದಿನ ಸೇವೆಯಾಗಿರುತ್ತದೆ. ರಾಜ್ಯ ಪ್ರವಾಸಿ ಮಾರ್ಗದರ್ಶಿಗಳ ಸಂಘ ಮತ್ತು ಹಂಪಿ ಮಾರ್ಗದರ್ಶಿಯ ಕಾರ್ಯದರ್ಶಿ ವಿರೂಪಾಕ್ಷಿ ವಿ ಹಂಪಿ ಮಾತನಾಡಿ "ಹಂಪಿ ಜೆಎಸ್‌ಡಬ್ಲ್ಯೂ ವಿದ್ಯಾನಗರ ವಿಮಾನ ನಿಲ್ದಾಣದಿಂದ ಸುಮಾರು 35 ಕಿ.ಮೀ ದೂರದಲ್ಲಿದೆ. ಪ್ರಸ್ತುತ, ಅನೇಕ ಪ್ರವಾಸಿಗರು ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಬಳಸುತ್ತಾರೆ, ಇದು ಸುಮಾರು 150 ಕಿ.ಮೀ ದೂರದಲ್ಲಿದೆ. ಈ ಅತ್ಯಂತ ಅಗತ್ಯವಾದ ಸೇವೆಗಾಗಿ ನಾನು ಸ್ಟಾರ್ ಏರ್‌ಗೆ ಕೃತಜ್ಞನಾಗಿದ್ದೇನೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

SCROLL FOR NEXT