ಸಚಿವ ಸತೀಶ್ ಜಾರಕಿಹೊಳಿ 
ರಾಜ್ಯ

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಬಣಕ್ಕೆ ಸ್ಪಷ್ಟ ಮುನ್ನಡೆ!

ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್‌ಗೆ ಭಾನುವಾರ ನಡೆದ ಚುನಾವಣೆಯಲ್ಲಿ ಶೇ. 96.96 ರಷ್ಟು ಮತದಾನವಾಗಿದ್ದು, ಜಾರಕಿಹೊಳಿ ಬಣ ಸ್ಪಷ್ಟ ಮುನ್ನಡೆ ಸಾಧಿಸಿದೆ.

ಬೆಳಗಾವಿ: ರಾಜ್ಯಾದ್ಯಂತ ಸುದ್ದಿ ಮಾಡಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಗೆ ತೆರೆ ಬಿದ್ದಿದೆ. ಭಾನುವಾರ ನಡೆದ ಚುನಾವಣೆಯಲ್ಲಿ ಮೂರು ತಾಲ್ಲೂಕುಗಳ ಫಲಿತಾಂಶ ಮಾತ್ರ ಅಧಿಕೃತವಾಗಿ ಪ್ರಕಟವಾಗಿದ್ದು, ಇನ್ನುಳಿದ ನಾಲ್ಕು ತಾಲ್ಲೂಕುಗಳ ಫಲಿತಾಂಶ ನ್ಯಾಯಾಲಯದಲ್ಲಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 28ರಂದು ಅಧಿಕೃತವಾಗಿ ಪ್ರಕಟವಾಗಲಿದೆ.

ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್‌ಗೆ ಭಾನುವಾರ ನಡೆದ ಚುನಾವಣೆಯಲ್ಲಿ ಶೇ. 96.96 ರಷ್ಟು ಮತದಾನವಾಗಿದ್ದು, ಜಾರಕಿಹೊಳಿ ಬಣ ಸ್ಪಷ್ಟ ಮುನ್ನಡೆ ಸಾಧಿಸಿದೆ.

ಬೆಳಗಾವಿಯ ಬಿಕೆ ಮಾಡೆಲ್ ಹೈಸ್ಕೂಲ್‌ನಲ್ಲಿ ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಬಿಗಿ ಪೊಲೀಸ್ ಭದ್ರತೆ ಮತ್ತು ಸಿಸಿಟಿವಿ ಕಣ್ಗಾವಲಿನಲ್ಲಿ ಮತದಾನ ಸುಗಮವಾಗಿ ನಡೆಯಿತು. ಅಥಣಿ (125), ಬೈಲಹೊಂಗಲ (73), ಹುಕ್ಕೇರಿ (90), ಕಿತ್ತೂರು (29), ನಿಪ್ಪಾಣಿ (119), ರಾಯಬಾಗ್ (205), ಮತ್ತು ರಾಮದುರ್ಗ (105) ಎಂಬ ಏಳು ತಾಲ್ಲೂಕುಗಳಿಂದ ಒಟ್ಟು 676 ಅರ್ಹ ಮತದಾರರು ತಮ್ಮ ಮತ ಚಲಾಯಿಸಿದರು. ಏಳು ನಿರ್ದೇಶಕ ಹುದ್ದೆಗಳಿಗೆ ಚುನಾವಣೆ ನಡೆದಿದ್ದು, ಒಂಬತ್ತು ನಿರ್ದೇಶಕರು ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಒಟ್ಟು 17 ಮಂಡಳಿ ಸ್ಥಾನಗಳಲ್ಲಿ, 13 ಸ್ಥಾನಗಳ ಫಲಿತಾಂಶಗಳನ್ನು ಘೋಷಿಸಲಾಗಿದೆ, ಅಲ್ಲಿ ಜಾರಕಿಹೊಳಿ ಸಮಿತಿಯ ಎಂಟು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಉಳಿದ ನಾಲ್ಕು ಸ್ಥಾನಗಳಲ್ಲಿ, ಒಂದೇ ಸಮಿತಿಯ ಮೂವರು ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ, ಇದು ಜಾರಕಿಹೊಳಿ ಬಣಕ್ಕೆ ಒಟ್ಟಾರೆ ಫಲಿತಾಂಶದಲ್ಲಿ ನಿರ್ಣಾಯಕ ಮುನ್ನಡೆ ನೀಡಿದೆ.

ಬೈಲ ಹೊಂಗಲ, ಹುಕ್ಕೇರಿ, ಕಿತ್ತೂರು ಮತ್ತು ನಿಪ್ಪಾಣಿಗಳ ಫಲಿತಾಂಶಗಳನ್ನು ಅಕ್ಟೋಬರ್ 28 ರಂದು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠದ ಇತ್ಯರ್ಥ ಮಾಡಿದ ನಂತರ ಫಲಿತಾಂಶ ಪ್ರಕವಾಗಲಿದೆ, ಏಕೆಂದರೆ ಕೆಲವು ಮತಗಳು ನ್ಯಾಯಾಂಗ ಪರಿಶೀಲನೆಯಲ್ಲಿವೆ. ಚುನಾವಣಾಧಿಕಾರಿ ಮತ್ತು ಸಹಾಯಕ ಆಯುಕ್ತ ಶ್ರವಣ್ ನಾಯಕ್ ಅದೇ ದಿನ ಎಣಿಕೆ ಪೂರ್ಣಗೊಂಡಿದೆ ಎಂದು ದೃಢಪಡಿಸಿದರು. ವಿವಾದಿತ ಸ್ಥಾನಗಳ ಫಲಿತಾಂಶಗಳನ್ನು ನ್ಯಾಯಾಲಯದ ಅನುಮತಿಯ ನಂತರ ಪ್ರಕಟಿಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'INS Vikrant ಪಾಕಿಗಳ ನಿದ್ರೆಗೆಡಿಸಿತ್ತು.. ಬ್ರಹ್ಮೋಸ್, ಆಕಾಶ್‌ ಕ್ಷಿಪಣಿಗಳಿಗೆ ಜಗತ್ತಿನಾದ್ಯಂತ ಬೇಡಿಕೆ ಬಂದಿದೆ': ಆಪರೇಷನ್ ಸಿಂದೂರ ಕುರಿತು ಪ್ರಧಾನಿ ಮೋದಿ

Bihar Polls: ನಾಮಪತ್ರ ಸಲ್ಲಿಕೆಗೆ ಕಡೆಯ ದಿನ, ಆರ್ ಜೆಡಿಯ 143 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!

'ಸಂಬಳ ನೀಡದೇ ಕಿರುಕುಳ': ಡೆತ್‌ ನೋಟ್‌ ಬರೆದು ಬೆಂಗಳೂರಿನಲ್ಲಿ ಓಲಾ ಎಂಜಿನಿಯರ್ ಆತ್ಮಹತ್ಯೆ, ಭವೀಶ್ ಅಗರ್ವಾಲ್ ವಿರುದ್ಧ ಪ್ರಕರಣ!

ರಾಜ್ಯದಲ್ಲಿ 'PPP' ಮಾದರಿಯಲ್ಲಿ ಎಂಟು ವೈದ್ಯಕೀಯ ಕಾಲೇಜುಗಳು: ಸರ್ಕಾರದ ಪ್ರಸ್ತಾವನೆಗೆ ಶಿಕ್ಷಣ ತಜ್ಞರ ಆಕ್ಷೇಪ!

ಬೆಂಗಳೂರಿನ ಮೂಲಸೌಕರ್ಯ ಬಗ್ಗೆ ಟೀಕೆ: ನಾವು ಹೇಗಿದ್ವಿ, ಹೇಗಾದ್ವಿ? ಅನ್ನೋದನ್ನ ಮರೆತು ಮಾತಡ್ತಾರೆ; ಉದ್ಯಮಿ ಗಳಿಗೆ ಡಿಕೆಶಿ ಟಾಂಗ್!

SCROLL FOR NEXT