ಸಿಎಂ ಭೇಟಿಯಾದ ಮಹಿಳಾ ನಿಯೋಗ 
ರಾಜ್ಯ

ಧರ್ಮಸ್ಥಳ ಪ್ರಕರಣ: ತಾರ್ಕಿಕ ಅಂತ್ಯದವರೆಗೂ SIT ತನಿಖೆ ಮುಂದುವರೆಸಬೇಕು, ಮಹಿಳಾ ಹೋರಾಟಗಾರರ ಒತ್ತಾಯ

ಎಸ್ ಐಟಿ ತನಿಖೆಯನ್ನು ಸಮಗ್ರವಾಗಿ ನಡೆಸಬೇಕು. ತಾರ್ಕಿಕ ಅಂತ್ಯದವರೆಗೂ ಸ್ಥಗಿತಗೊಳಿಸಬಾರದು ಎಂದು ಮನವಿ ಮಾಡಿತು.

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಮಹಿಳೆಯರ ಮೇಲಿನ ಎಲ್ಲ ದೌರ್ಜನ್ಯ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗುವವರೆಗೂ ಎಸ್ ಐಟಿ ತನಿಖೆ ಮುಂದುವರೆಸಬೇಕು ಎಂದು ಮಹಿಳಾ ಹೋರಾಟಗಾರರು, ಲೇಖಕಿಯರ ನಿಯೋಗವೊಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಹಿಳಾ ನಿಯೋಗ, ಧರ್ಮಸ್ಥಳ ಪ್ರಕರಣಗಳಲ್ಲಿ ತಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಿಬಿಐ ಕೋರ್ಟ್ ಹೇಳಿದೆ. ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿತು.

ಎಸ್ ಐಟಿ ತನಿಖೆಯನ್ನು ಸಮಗ್ರವಾಗಿ ನಡೆಸಬೇಕು. ತಾರ್ಕಿಕ ಅಂತ್ಯದವರೆಗೂ ಸ್ಥಗಿತಗೊಳಿಸಬಾರದು ಎಂದು ಮನವಿ ಮಾಡಿತು.

ಮಹಿಳೆಯರು ಹಾಗೂ ಸಮಾನ ಮನಸ್ಕರು ಸೇರಿ ಕೊಂದವರು ಯಾರು ಆಂದೋಲನ ರಚಿಸಿದ್ದೇವೆ. ಧರ್ಮಸ್ಥಳ ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಮಹಿಳೆಯರ ಪರವಾಗಿ ಆಂದೋಲನ ಧ್ವನಿ ಎತ್ತುತ್ತಿದೆ. ಸರ್ಕಾರ ನೊಂದವರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು ಎಂದು ಕೋರಿದರು.

ಆಂದೋಲನದ ಪ್ರಮುಖರಾದ ಚಂಪಾವತಿ, ಮಧು ಭೂಷಣ್, ಶಕುನ್, ಮಾಯಾರಾವ್ ಮತ್ತಿತರರು ನಿಯೋಗದಲ್ಲಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!