ಸಿಎಂ ಭೇಟಿಯಾದ ಮಹಿಳಾ ನಿಯೋಗ 
ರಾಜ್ಯ

ಧರ್ಮಸ್ಥಳ ಪ್ರಕರಣ: ತಾರ್ಕಿಕ ಅಂತ್ಯದವರೆಗೂ SIT ತನಿಖೆ ಮುಂದುವರೆಸಬೇಕು, ಮಹಿಳಾ ಹೋರಾಟಗಾರರ ಒತ್ತಾಯ

ಎಸ್ ಐಟಿ ತನಿಖೆಯನ್ನು ಸಮಗ್ರವಾಗಿ ನಡೆಸಬೇಕು. ತಾರ್ಕಿಕ ಅಂತ್ಯದವರೆಗೂ ಸ್ಥಗಿತಗೊಳಿಸಬಾರದು ಎಂದು ಮನವಿ ಮಾಡಿತು.

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಮಹಿಳೆಯರ ಮೇಲಿನ ಎಲ್ಲ ದೌರ್ಜನ್ಯ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗುವವರೆಗೂ ಎಸ್ ಐಟಿ ತನಿಖೆ ಮುಂದುವರೆಸಬೇಕು ಎಂದು ಮಹಿಳಾ ಹೋರಾಟಗಾರರು, ಲೇಖಕಿಯರ ನಿಯೋಗವೊಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಹಿಳಾ ನಿಯೋಗ, ಧರ್ಮಸ್ಥಳ ಪ್ರಕರಣಗಳಲ್ಲಿ ತಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಿಬಿಐ ಕೋರ್ಟ್ ಹೇಳಿದೆ. ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿತು.

ಎಸ್ ಐಟಿ ತನಿಖೆಯನ್ನು ಸಮಗ್ರವಾಗಿ ನಡೆಸಬೇಕು. ತಾರ್ಕಿಕ ಅಂತ್ಯದವರೆಗೂ ಸ್ಥಗಿತಗೊಳಿಸಬಾರದು ಎಂದು ಮನವಿ ಮಾಡಿತು.

ಮಹಿಳೆಯರು ಹಾಗೂ ಸಮಾನ ಮನಸ್ಕರು ಸೇರಿ ಕೊಂದವರು ಯಾರು ಆಂದೋಲನ ರಚಿಸಿದ್ದೇವೆ. ಧರ್ಮಸ್ಥಳ ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಮಹಿಳೆಯರ ಪರವಾಗಿ ಆಂದೋಲನ ಧ್ವನಿ ಎತ್ತುತ್ತಿದೆ. ಸರ್ಕಾರ ನೊಂದವರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು ಎಂದು ಕೋರಿದರು.

ಆಂದೋಲನದ ಪ್ರಮುಖರಾದ ಚಂಪಾವತಿ, ಮಧು ಭೂಷಣ್, ಶಕುನ್, ಮಾಯಾರಾವ್ ಮತ್ತಿತರರು ನಿಯೋಗದಲ್ಲಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತಂದೆಯ ರಾಜಕೀಯ ಜೀವನ ಮುಗಿಯಿತು; ಸತೀಶ್ ಜಾರಕಿಹೊಳಿ 'ಉತ್ತರಾಧಿಕಾರಿ': ಯತೀಂದ್ರ ಸಿದ್ದರಾಮಯ್ಯ ಹೇಳಿಕೆ; ಡಿಕೆಶಿ ಬಣಕ್ಕೆ ಶಾಕ್!

'ಇಸ್ಲಾಂ ರಾಜಕೀಯ' ಸನಾತನ ಧರ್ಮಕ್ಕೆ ಅತ್ಯಂತ ಅಪಾಯಕಾರಿ; ಹಲಾಲ್ ಬಗ್ಗೆ ಎಚ್ಚರ: ಸಿಎಂ ಯೋಗಿ ಆದಿತ್ಯನಾಥ್

ದೀಪ ಹಚ್ಚೋಣ, ಇದು ಬೆಳಕಿನ ಅನ್ವೇಷಣೆಯೆಂಬ ಅನಂತ ಯಾನ (ತೆರೆದ ಕಿಟಕಿ)

PNB ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ಗಡಿಪಾರಿಗೆ ಬೆಲ್ಜಿಯಂ ಕೋರ್ಟ್ ಅನುಮೋದನೆ; 8 ವರ್ಷ ಭಾರತ ನಡೆಸಿದ್ದ ಹೋರಾಟ ಸಫಲ!

ಪಿಒಕೆಯಲ್ಲಿ ಎಲ್‌ಒಸಿ ಉದ್ದಕ್ಕೂ ಭಯೋತ್ಪಾದಕ ಶಿಬಿರಗಳು, ಉಡಾವಣಾ ಪ್ಯಾಡ್‌ಗಳು ಮತ್ತೆ ತಲೆ ಎತ್ತುತ್ತಿವೆ: ಗುಪ್ತಚರ ವರದಿ

SCROLL FOR NEXT