ಸಿಎಂ ಭೇಟಿಯಾದ ಮಹಿಳಾ ನಿಯೋಗ 
ರಾಜ್ಯ

ಧರ್ಮಸ್ಥಳ ಪ್ರಕರಣ: ತಾರ್ಕಿಕ ಅಂತ್ಯದವರೆಗೂ SIT ತನಿಖೆ ಮುಂದುವರೆಸಬೇಕು, ಮಹಿಳಾ ಹೋರಾಟಗಾರರ ಒತ್ತಾಯ

ಎಸ್ ಐಟಿ ತನಿಖೆಯನ್ನು ಸಮಗ್ರವಾಗಿ ನಡೆಸಬೇಕು. ತಾರ್ಕಿಕ ಅಂತ್ಯದವರೆಗೂ ಸ್ಥಗಿತಗೊಳಿಸಬಾರದು ಎಂದು ಮನವಿ ಮಾಡಿತು.

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಮಹಿಳೆಯರ ಮೇಲಿನ ಎಲ್ಲ ದೌರ್ಜನ್ಯ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗುವವರೆಗೂ ಎಸ್ ಐಟಿ ತನಿಖೆ ಮುಂದುವರೆಸಬೇಕು ಎಂದು ಮಹಿಳಾ ಹೋರಾಟಗಾರರು, ಲೇಖಕಿಯರ ನಿಯೋಗವೊಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಹಿಳಾ ನಿಯೋಗ, ಧರ್ಮಸ್ಥಳ ಪ್ರಕರಣಗಳಲ್ಲಿ ತಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಿಬಿಐ ಕೋರ್ಟ್ ಹೇಳಿದೆ. ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿತು.

ಎಸ್ ಐಟಿ ತನಿಖೆಯನ್ನು ಸಮಗ್ರವಾಗಿ ನಡೆಸಬೇಕು. ತಾರ್ಕಿಕ ಅಂತ್ಯದವರೆಗೂ ಸ್ಥಗಿತಗೊಳಿಸಬಾರದು ಎಂದು ಮನವಿ ಮಾಡಿತು.

ಮಹಿಳೆಯರು ಹಾಗೂ ಸಮಾನ ಮನಸ್ಕರು ಸೇರಿ ಕೊಂದವರು ಯಾರು ಆಂದೋಲನ ರಚಿಸಿದ್ದೇವೆ. ಧರ್ಮಸ್ಥಳ ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಮಹಿಳೆಯರ ಪರವಾಗಿ ಆಂದೋಲನ ಧ್ವನಿ ಎತ್ತುತ್ತಿದೆ. ಸರ್ಕಾರ ನೊಂದವರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು ಎಂದು ಕೋರಿದರು.

ಆಂದೋಲನದ ಪ್ರಮುಖರಾದ ಚಂಪಾವತಿ, ಮಧು ಭೂಷಣ್, ಶಕುನ್, ಮಾಯಾರಾವ್ ಮತ್ತಿತರರು ನಿಯೋಗದಲ್ಲಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Venezuela Earth quake: 40 ಸೆಕೆಂಡ್​​ ನಲ್ಲಿ 2 ಬಾರಿ ಭೂಕಂಪ, ಭಾರೀ ವಿನಾಶ, ಕನಿಷ್ಠ 32 ಸಾವು, ಸಾವಿನ ಸಂಖ್ಯೆ 1 ಲಕ್ಷಕ್ಕೇರುವ ಸಾಧ್ಯತೆ!

ಭೂಕಂಪದ ರೌದ್ರನರ್ತನಕ್ಕೆ Venezuela ತತ್ತರ; Caracasನಲ್ಲಿ ಧರೆಗುರುಳಿದ ಕಟ್ಟಡಗಳು, ಸುನಾಮಿ ಎಚ್ಚರಿಕೆ..!

ತುರ್ತು ಪರಿಸ್ಥಿತಿ ಸಂವಿಧಾನದ ಮೇಲಿನ ನೇರ ದಾಳಿ: 1975ರ ಕರಾಳ ಅಧ್ಯಾಯ ಸ್ಮರಿಸಿದ ಪ್ರಧಾನಿ ಮೋದಿ..!

ಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಗೋದಾಮು ಕುಸಿದು 5 ಕಾರ್ಮಿಕರ ಸಾವು, 20 ಮಂದಿ ರಕ್ಷಣೆ; TMC ಅವಧಿಯ ಯೋಜನೆಗಳಿಗೆ CM ಸುವೇಂದು ಬ್ರೇಕ್..!

ಇರಾನ್ ಸಂಘರ್ಷಕ್ಕೆ $70 ಬಿಲಿಯನ್ ತುರ್ತು ನಿಧಿ ಕೋರಿದ ಅಮೆರಿಕಾ: ಟ್ರಂಪ್ ವಿರುದ್ಧ ಸಿಡಿದೆದ್ದ Republican senator, ಸ್ವಪಕ್ಷದಲ್ಲೇ ಭಿನ್ನಮತ ಸ್ಫೋಟ..!