ಹಾಸನಾಂಬ ದೇವಸ್ಥಾನ 
ರಾಜ್ಯ

ಹಾಸನಾಂಬ ದರ್ಶನ ಇಂದು ಕೊನೆ: 8 ಕಿ.ಮೀ ವರೆಗೆ ಧರ್ಮ ದರ್ಶನ ಸಾಲು

ಅಕ್ಟೋಬರ್​ 10 ರಿಂದ ಹಾಸನಾಂಬೆ ದೇವಿ ದರ್ಶನ ಪ್ರಾರಂಭವಾದಾಗಿನಿಂದ ಅಕ್ಟೋಬರ್ 20ರವರೆಗೆ ಒಟ್ಟು 23 ಲಕ್ಷಕ್ಕೂ ಅಧಿಕ ಭಕ್ತರು ದೇವಿ ದರ್ಶನ ಪಡೆದುಕೊಂಡಿದ್ದಾರೆ.

ಹಾಸನ: ಪ್ರಸಿದ್ಧ ಹಾಸನಾಂಬೆ ದೇವಿಯ ಈ ವರ್ಷದ ದರ್ಶನಕ್ಕೆ ಇಂದು ಕೊನೆಯ ದಿನ. ವರ್ಷಕ್ಕೊಮ್ಮೆ ದರ್ಶನ ಕೊಡುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದೆ.

ಅಕ್ಟೋಬರ್​ 10 ರಿಂದ ಹಾಸನಾಂಬೆ ದೇವಿ ದರ್ಶನ ಪ್ರಾರಂಭವಾದಾಗಿನಿಂದ ಅಕ್ಟೋಬರ್ 20ರವರೆಗೆ ಒಟ್ಟು 23 ಲಕ್ಷಕ್ಕೂ ಅಧಿಕ ಭಕ್ತರು ದೇವಿ ದರ್ಶನ ಪಡೆದುಕೊಂಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಂದಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

ಇತಿಹಾಸದಲ್ಲೇ ಇದೇ ಮೊದಲ ಬಾರಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದಾರೆ ಎನ್ನುವ ದಾಖಲೆ ಸೃಷ್ಟಿಯಾಗಿದೆ. ಬೆಳಗ್ಗೆ 6 ಗಂಟೆಯಿಂದ ದೇವಿ ದರ್ಶನ ಆರಂಭವಾಗಿದ್ದು, ಸರತಿ ಸಾಲುಗಳಲ್ಲಿ ನಿಂತು ಸಹಸ್ರಾರು ಭಕ್ತರು ದೇವಿ ದರ್ಶನ ಪಡೆಯುತ್ತಿದ್ದಾರೆ.

ಧರ್ಮ ದರ್ಶನ, 1000 ರೂ., 300 ರೂ. ಹಾಗೂ ವಿಶೇಷ ದರ್ಶನದ ಸರತಿ ಸಾಲುಗಳಲ್ಲಿ ಜನಜಂಗುಳಿ ಉಂಟಾಗಿದೆ.

ಇಂದು ಕೊನೆಯ ದಿನ ಭಕ್ತಸಾಗರವೇ ಹರಿದುಬರುತ್ತಿದ್ದು, ಸದ್ಯ ಸನ್ನಿಧಾನದಲ್ಲಿ ಧರ್ಮದರ್ಶನ ಸಾಲು ಎಂಟು ಕಿಲೋಮೀಟರ್ ಮುಟ್ಟಿದೆ. ಇಂದು ಸಂಜೆ 7 ಗಂಟೆಯವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶವಿದ್ದು, ನಾಳೆ ಮಧ್ಯಾಹ್ನ 12.30ಕ್ಕೆ ಶಾಸ್ತ್ರೋಕ್ತವಾಗಿ ಗರ್ಭಗುಡಿಯ ಬಾಗಿಲು ಬಂದ್ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ದಾಖಲೆಯ ಭಕ್ತರ ಭೇಟಿ

ಈ ವರ್ಷ 23 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆಯ ದರ್ಶನ ಪಡೆದಿದ್ದು, ಪ್ರತಿ ವರ್ಷ ಕೇವಲ 12 ದಿನಗಳವರೆಗೆ ತೆರೆದಿರುವ ದೇವಾಲಯಕ್ಕೆ 20 ಕೋಟಿ ರೂಪಾಯಿ ಆದಾಯ ಬಂದಿದೆ. ಹಾಸನ ಜಿಲ್ಲಾ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರ ಪ್ರಕಾರ, 1,000 ರೂಪಾಯಿ ಮತ್ತು 300 ರೂಪಾಯಿ ಪ್ರವೇಶ ಟಿಕೆಟ್‌ಗಳ ದಾಖಲೆಯ ಮಾರಾಟ ಮತ್ತು ಲಡ್ಡು ಪ್ರಸಾದವು ಸಹ ದಾಖಲೆಯಲ್ಲಿ ಮಾರಾಟವಾಗಿ ದೇವಾಲಯಕ್ಕೆ ಕಾಣಿಕೆ ಹೆಚ್ಚು ಸಂಗ್ರಹವಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರ ಮೇಲುಸ್ತುವಾರಿ

ಸಾಮಾನ್ಯ ಸಂದರ್ಶಕರಿಗೆ ತ್ವರಿತ ದರ್ಶನ ಒದಗಿಸಲು ಕೆಲಸ ಮಾಡಿದ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಸರತಿ ಸಾಲಿನ ವ್ಯವಸ್ಥೆಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡಿದ್ದರು. ಅವರಿಗೆ ಮೂಲಭೂತ ಸೌಕರ್ಯಗಳು ಮತ್ತು ಪ್ರಸಾದವನ್ನು ಒದಗಿಸಿದರು. ಅಧಿಕಾರಿಗಳಿಗೆ ನಿರ್ದೇಶನ ನೀಡುವುದರ ಜೊತೆಗೆ ಜನಸಂದಣಿಯನ್ನು ನಿರ್ವಹಿಸಲು ವೈಯಕ್ತಿಕವಾಗಿ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದರು.

ದೇವಾಲಯಕ್ಕೆ ಭೇಟಿ ನೀಡುವವರು ದೇವಾಲಯ ಪ್ರವೇಶ ವ್ಯವಸ್ಥೆ ಮತ್ತು ಸ್ಥಳದಲ್ಲಿ ಒದಗಿಸಲಾದ ಮೂಲಭೂತ ಸೌಕರ್ಯಗಳನ್ನು ಮೆಚ್ಚಿಕೊಂಡಿದ್ದಾರೆ. ಮೊದಲ ಬಾರಿಗೆ, ದೇವಾಲಯದ ಅಧಿಕಾರಿಗಳು 80 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರಿಗೆ ಉಚಿತ ಪ್ರವೇಶವನ್ನು ಒದಗಿಸಿದ್ದರು. ಅಲ್ಲದೆ, 1,000 ರೂ. ಪ್ರವೇಶ ಟಿಕೆಟ್‌ನೊಂದಿಗೆ ದೇವಾಲಯವನ್ನು ಪ್ರವೇಶಿಸಿದವರಿಗೆ ಎರಡು ಪ್ಯಾಕೆಟ್ ಲಡ್ಡು ಪ್ರಸಾದವನ್ನು ನೀಡಲಾಯಿತು.

ಇಂದು ರಾತ್ರಿ ಹಾಸನಾಂಬ ದೇವಾಲಯದ ಆವರಣದಲ್ಲಿ ಸಿದ್ದೇಶ್ವರ ವಾರ್ಷಿಕ ರಥೋತ್ಸವ ನಡೆಯಲಿದ್ದು, ಸಾವಿರಾರು ಭಕ್ತರು ಧಾರ್ಮಿಕ ವಿಧಿವಿಧಾನಗಳಿಗೆ ಸಾಕ್ಷಿಯಾಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಡಿಗೋ ಬಿಕ್ಕಟ್ಟು: ನಾಲ್ವರು ವಿಮಾನ ಕಾರ್ಯಾಚರಣೆ ಇನ್ಸ್‌ಪೆಕ್ಟರ್‌ಗಳನ್ನು ಅಮಾನತುಗೊಳಿಸಿದ DGCA!

ಬೆಂಗಳೂರು: ನಾಲ್ಕು ಅಂತಸ್ತಿನ ಕಟ್ಟಡ ಬೆಂಕಿಗೆ ಆಹುತಿ; ನಿವಾಸಿಗಳನ್ನು ರಕ್ಷಿಸಿದ ಮೂವರು ಪೊಲೀಸರು!

ಮಾಗಡಿ: ಮಾಜಿ ಸಚಿವ ಎಚ್ಎಂ ರೇವಣ್ಣ ಪುತ್ರನ ಕಾರು, ಬೈಕಿಗೆ ಡಿಕ್ಕಿ; ಯುವಕ ಸಾವು

ಕೋಳಿ ಮಾಂಸ ಮಾರಾಟಗಾರರ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಗಳಿಗೆ ಸುವೇಂದು ಅಧಿಕಾರಿಯಿಂದ 'ಸನ್ಮಾನ'

ಆಂಧ್ರಪ್ರದೇಶ: ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಬಸ್ ಕಂದಕಕ್ಕೆ ಉರುಳಿಬಿದ್ದು 9 ಯಾತ್ರಿಕರು ಸಾವು, 22 ಮಂದಿಗೆ ಗಾಯ-Video

SCROLL FOR NEXT