ಆರ್‌ಎಸ್‌ಎಸ್ ಪಥಸಂಚಲನ (ಸಾಂದರ್ಭಿಕ ಚಿತ್ರ) 
ರಾಜ್ಯ

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ; ಹಾಸ್ಟೆಲ್‌ನ ಸಹಾಯಕ ಅಡುಗೆ ಸಿಬ್ಬಂದಿ ಕೆಲಸದಿಂದ ವಜಾ

ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 20 ರಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗೆ ವಾಟ್ಸಾಪ್ ಮೂಲಕ ಬಂದ ದೂರಿನ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಬೀದರ್: ಆರ್‌ಎಸ್‌ಎಸ್ ಆಯೋಜಿಸಿದ್ದ ಪಥಸಂಚಲನದಲ್ಲಿ ಭಾಗವಹಿಸಿದ್ದ ಆರೋಪದ ಮೇಲೆ ಬಸವಕಲ್ಯಾಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಡೆಸುತ್ತಿರುವ ಹಾಸ್ಟೆಲ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಸಹಾಯಕ ಅಡುಗೆ ಸಿಬ್ಬಂದಿಯನ್ನು ಕೆಲಸದಿಂದ ಬಿಡುಗಡೆ ಮಾಡಲಾಗಿದೆ.

ಪ್ರಮೋದ್ ಕುಮಾರ್ ಎಂಬುವವರು ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 20 ರಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗೆ ವಾಟ್ಸಾಪ್ ಮೂಲಕ ಬಂದ ದೂರಿನ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಬಸವಕಲ್ಯಾಣ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಯು ಬೀದರ್ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರಿ ಸಂಘದ ಕಾರ್ಯದರ್ಶಿ/ಮುಖ್ಯ ಆಡಳಿತಾಧಿಕಾರಿ ಕಚೇರಿಗೆ ಪತ್ರ ಬರೆದು, ಪ್ರಮೋದ್ ಕುಮಾರ್ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡುವಂತೆ ತಿಳಿಸಿದ್ದಾರೆ.

ಪ್ರಮೋದ್ ಕುಮಾರ್ ಬಸವಕಲ್ಯಾಣದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕರ ಹಾಸ್ಟೆಲ್‌ನಲ್ಲಿ ಸಹಾಯಕ ಅಡುಗೆ ಸಿಬ್ಬಂದಿಯಾಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ.

'ಸರ್ಕಾರದಿಂದ ಸಂಬಳ ಪಡೆಯುತ್ತಿರುವ ಕಾಯಂ/ಹೊರಗುತ್ತಿಗೆ ಸಿಬ್ಬಂದಿ ಕಾನೂನಿನ ಪ್ರಕಾರ ಯಾವುದೇ ಸಂಸ್ಥೆ ಅಥವಾ ಸಂಘಟನೆಗಳ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸಲಾಗಿದೆ' ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಪ್ರಮೋದ್ ಕುಮಾರ್ ಅವರನ್ನು ಅಕ್ಟೋಬರ್ 21ರ ಬೆಳಿಗ್ಗೆ ಅಧಿಕೃತವಾಗಿ ಸಹಾಯಕ ಅಡುಗೆ ಸಿಬ್ಬಂದಿ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಅದು ಹೇಳಿದೆ.

ಕಳೆದ ವಾರ, ರಾಯಚೂರಿನ ಲಿಂಗಸುಗೂರ್‌ನಲ್ಲಿ ನಡೆದ ಆರ್‌ಎಸ್‌ಎಸ್ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದಕ್ಕಾಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಕೆ ಪಿ ಅವರನ್ನು ಅಮಾನತುಗೊಳಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ; ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ; Video