ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: Food delivery ಬಾಯ್​​ಗಳ ಮೊಬೈಲ್ ದೋಚುತ್ತಿದ್ದ ನಾಲ್ವರು ನೇಪಾಳಿ ಪ್ರಜೆಗಳ ಬಂಧನ

ನಗರದ ಖಾಸಗಿ ಕಂಪನಿಗಳಲ್ಲಿ ಭದ್ರತಾ ಸಿಬ್ಬಂದಿ ಮತ್ತು ಮನೆಗೆಲಸದ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ರಾತ್ರಿ ವೇಳೆ ಫುಡ್​ ಡೆಲಿವರಿ ಬಾಯ್​ಗಳನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದರು.

ಬೆಂಗಳೂರು: ಫುಡ್​ ಡೆಲಿವರಿ ಬಾಯ್​ಗಳನ್ನು ಗುರಿಯಾಗಿಸಿಕೊಂಡು ಅವರ ಮೊಬೈಲ್ ಫೋನ್‌ಗಳನ್ನು ದೋಚುತ್ತಿದ್ದ ನಾಲ್ವರು ನೇಪಾಳಿ ಪ್ರಜೆಗಳನ್ನು ಬೆಳ್ಳಂದೂರು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಆರೋಪಿಗಳನ್ನು ಪರಾಸ್ ಸಿಂಗ್ (25), ಮುಖೇಶ್ ಸಾಯಿ (19), ಬಿಪಿನ್ ಕರ್ಕಿ (20), ಮತ್ತು ಸಮೀರ್ ಲೋಹರ್ ಎಂದು ಗುರುತಿಸಲಾಗಿದೆ,

ಬಂಧಿತರನ್ನು ನೇಪಾಳ ಮೂಲದ ಪಾರಸ್ ಸಿಂಗ್ (25), ಮುಕೇಶ್ ಸಾಯಿ (19), ಬಿಪಿನ್ ಕರ್ಕಿ (20), ಸಮೀರ್ ಲೋಹಾರ್ ಎಂದು ಗುರ್ತಿಸಲಾಗಿದೆ. ಇವರೆಲ್ಲರೂ ನೇಪಾಳ ಮೂಲದವರಾಗಿದ್ದು, ಕುಡ್ಲು ಗೇಟ್ ನಿವಾಸಿಗಳಾಗಿದ್ದಾರೆ.

ನಗರದ ಖಾಸಗಿ ಕಂಪನಿಗಳಲ್ಲಿ ಭದ್ರತಾ ಸಿಬ್ಬಂದಿ ಮತ್ತು ಮನೆಗೆಲಸದ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ರಾತ್ರಿ ವೇಳೆ ಫುಡ್​ ಡೆಲಿವರಿ ಬಾಯ್​ಗಳನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದರು.

ಫುಡ್​ ಡೆಲಿವರಿ ಬಾಯ್​ಗಳ ಬೈಕ್‌ಗಳನ್ನು ತಡೆದು, ಅವರ ಮೇಲೆ ಹಲ್ಲೆ ನಡೆಸಿ, ಅವರ ಮೊಬೈಲ್ ಫೋನ್‌ಗಳನ್ನು ಕದ್ದು ಪರಾರಿಯಾಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸೆಪ್ಟೆಂಬರ್ 13 ರಂದು ರಾತ್ರಿ 11.30 ರ ಸುಮಾರಿಗೆ ಆರು ಜನರು ಫುಡ್​ ಡೆಲಿವರಿ ಬಾಯ್ ಸುರೇಶ್ ಅವರನ್ನು ದರೋಡೆ ಮಾಡಿದ್ದರು. ಘಟನೆ ಸಂಬಂಧ ಸುರೇಶ್ ಅವರು ನೀಡಿದ ದೂರಿನ ಮೇರೆಗೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಕದ್ದ ಫೋನ್ ಗಳನ್ನು ಮಾರಾಟ ಮಾಡುವ ಬದಲು ಅವುಗಳನ್ನು ಬಳಕೆ ಮಾಡುತ್ತಿದ್ದರು. ಈ ಗ್ಯಾಂಗ್ ಬೆಳ್ಳಂದೂರು, ಹೆಬ್ಬಗೋಡಿ, ಪರಪ್ಪನ ಅಗ್ರಹಾರ, ಬಂಡೆಪಾಳ್ಯ ಮತ್ತು ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಇದೇ ರೀತಿಯ ದರೋಡೆ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಹಿಳಾ ವಿಶ್ವಕಪ್ 2025: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 53 ರನ್‌ಗಳ ಭರ್ಜರಿ ಜಯ, ಸೆಮಿಫೈನಲ್‌ಗೆ INDIA ಲಗ್ಗೆ!

ವೆಸ್ಟ್ ಬ್ಯಾಂಕ್ ವಶಪಡಿಸಿಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೇ ಅಮೆರಿಕದ ಬೆಂಬಲ ಕಳಕೊಳ್ಳಬೇಕಾಗುತ್ತೆ: ಇಸ್ರೇಲ್‌ಗೆ ಟ್ರಂಪ್ ಕಟು ಎಚ್ಚರಿಕೆ

ರಕ್ಷಣಾ ವಲಯಕ್ಕೆ 79,000 ಕೋಟಿ ರೂ. ಮೌಲ್ಯದ ಉಪಕರಣಗಳ ಖರೀದಿಗೆ ಕೇಂದ್ರ ಸರ್ಕಾರ ಅನುಮೋದನೆ!

ಹೊಸ ಸಿಜೆಐ ನೇಮಕಕ್ಕೆ ಪ್ರಕ್ರಿಯೆ ಆರಂಭ: ಯಾರಾಗಲಿದ್ದಾರೆ ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ?

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಎರಡ್ಮೂರು ದಿನಗಳಲ್ಲಿ AAI ವರದಿ ಸಲ್ಲಿಕೆ- ಎಂ.ಬಿ ಪಾಟೀಲ್

SCROLL FOR NEXT