ಕಾರ್ಯಾಚರಣೆಯಲ್ಲಿ ಭಾಗಿಯಾದ ತಂಡ 
ರಾಜ್ಯ

ಮೈಸೂರು: ಅಕ್ರಮ ಲಿಂಗ ಪತ್ತೆ ಪರೀಕ್ಷೆ, ಹೆಣ್ಣು ಭ್ರೂಣ ಹತ್ಯೆ ದಂಧೆ; ಐವರ ಬಂಧನ! Video

ಸುಳಿವು ಸಿಕ್ಕಿ ನಂತರ ವರುಣಾದ ಬನ್ನೂರು ಹೆದ್ದಾರಿಯ ಹುನಗನಹಳ್ಳಿ ಗ್ರಾಮದ ತೋಟದ ಮನೆ ಮೇಲೆ ಬುಧವಾರ ಸಂಜೆ ದಾಳಿ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಿರುವುದಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮೈಸೂರು: ಅಕ್ರಮ ಲಿಂಗ ಪತ್ತೆ ಪರೀಕ್ಷೆ ಮತ್ತು ಹೆಣ್ಣು ಭ್ರೂಣ ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪದಡಿ ಐವರನ್ನು ಬಂಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಕ್ಷೇತ್ರ ವರುಣಾದಲ್ಲಿ ಈ ಗ್ಯಾಂಗ್ ಕಾರ್ಯಾಚರಣೆ ನಡೆಸುತಿತ್ತು. ಅಕ್ರಮ ಲಿಂಗ ಪತ್ತೆ ಪರೀಕ್ಷೆ ಮತ್ತು ಭ್ರೂಣ ಹತ್ಯೆಯ ಬಗ್ಗೆ ಸುಳಿವು ಸಿಕ್ಕಿ ನಂತರ ವರುಣಾದ ಬನ್ನೂರು ಹೆದ್ದಾರಿಯ ಹುನಗನಹಳ್ಳಿ ಗ್ರಾಮದ ತೋಟದ ಮನೆ ಮೇಲೆ ಬುಧವಾರ ಸಂಜೆ ದಾಳಿ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಿರುವುದಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆಯ ವಿವರಗಳನ್ನು ದಿನೇಶ್ ಗುಂಡೂರಾವ್, ಸಾಮಾಜಿಕ ಮಾಧ್ಯಮ ಎಕ್ಸ್ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದಾರೆ.

ಬನ್ನೂರು ಹೆದ್ದಾರಿ ಸಮೀಪದ ಹುನಗನಹಳ್ಳಿ ಫಾರ್ಮ್ ಹೌಸ್ ನಲ್ಲಿ ಭ್ರೂಣ ಲಿಂಗ ಪತ್ತೆ ಕಾರ್ಯ ನಡೆಸುತ್ತಿದದ್ದು ಪತ್ತೆಯಾಗಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ರಹಸ್ಯ ಕಾರ್ಯಾಚರಣೆಯ ಮೂಲಕ ಭ್ರೂಣಹತ್ಯೆ ಹಂತಕರನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ. ಗರ್ಭಿಣಿ ಮಹಿಳೆಯ ಸಹಾಯದಿಂದ ಭ್ರೂಣ ಲಿಂಗ ಪತ್ತೆ ಪರೀಕ್ಷೆ ನಡೆಸಿರುವುದು ಪತ್ತೆಯಾಗಿದೆ. ಕಾರ್ಯಾಚರಣೆ ವೇಳೆ ಭ್ರೂಣ ಲಿಂಗ ಪತ್ತೆ ಪರೀಕ್ಷೆಗಾಗಿ ನಾಲ್ವರು ಗರ್ಭಿಣಿಯರು ಸ್ಥಳದಲ್ಲಿ ಇದದ್ದು ಕಂಡುಬಂದಿದೆ. ಸ್ಯಾನಿಂಗ್ ಯಂತ್ರೊಂದು ಪತ್ತೆಯಾಗಿದೆ.

ಪ್ರಸವಪೂರ್ವ ಲಿಂಗ ಪತ್ತೆ ಪರೀಕ್ಷೆ (PCPNDT) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಹೆಣ್ಣು ಭ್ರೂಣ ಹತ್ಯೆ ವಿರುದ್ಧ ಆರೋಗ್ಯ ಇಲಾಖೆ ನಿರಂತರವಾಗಿ ಹೋರಾಟ ನಡೆಸುತ್ತಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು ಆಗಿದ್ದು, ಜನರು ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಸಮಾಜವು ಇದನ್ನು ಅರಿತು ಹೆಣ್ಣು ಭ್ರೂಣ ಹತ್ಯೆಯ ವಿರುದ್ಧ ಸಮರ ಸಾರಲು ಮುಂದಾಗಬೇಕು. ಭ್ರೂಣಹತ್ಯೆ ವಿರುದ್ಧ ಸಹಕಾರ ನೀಡುವವರಿಗೆ ಆರೋಗ್ಯ ಇಲಾಖೆ ಸದಾ ಜೊತೆಗಿರುತ್ತದೆ. ಎಷ್ಟೇ ದೊಡ್ಡವರಾದರೂ ಹೆಣ್ಣು ಭ್ರೂಣಹತ್ಯೆ ತೊಲಗಿಸಲು ನಮ್ಮ ಸರ್ಕಾರ ಸಂಕಲ್ಪ ಮಾಡಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ