ಸಂಗ್ರಹ ಚಿತ್ರ 
ರಾಜ್ಯ

ಹಾವೇರಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ಹೋರಿ ಬೆದರಿಸುವ ಸ್ಪರ್ಧೆ: ಹೋರಿ ಗುದ್ದಿ ಮೂವರು ಸಾವು

ದಾನೇಶ್ವರಿ ನಗರದ ಚಂದ್ರಶೇಖರ ಕೋಡಿಹಳ್ಳಿ (75) ಅವರು ಮನೆಗೆ ಹೊರಟಿದ್ದ ವೇಳೆ ಹಿಂದಿನಿಂದ ಬಂದ ಹೋರಿ ಹಾಯ್ದು ಸಾವನ್ನಪ್ಪಿದ್ದಾರೆ. ಬರೋಡಾ ಬ್ಯಾಂಕ್ ಎದುರುಗಡೆ ಘಟನೆ ನಡೆದಿದೆ.

ಹಾವೇರಿ: ದೀಪಾವಳಿ ಹಬ್ಬದ ನಿಮಿತ್ತ ಬುಧವಾರ ಹಮ್ಮಿಕೊಂಡಿದ್ದ 'ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ' ಹಾಗೂ ಹೋರಿಗಳ ಮೆರವಣಿಗೆ ಸಂದರ್ಭದಲ್ಲಿ ಹೋರಿ ಗುದ್ದಿ ಮೂವರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ದಾನೇಶ್ವರಿ ನಗರದ ಚಂದ್ರಶೇಖರ ಕೋಡಿಹಳ್ಳಿ (75) ಅವರು ಮನೆಗೆ ಹೊರಟಿದ್ದ ವೇಳೆ ಹಿಂದಿನಿಂದ ಬಂದ ಹೋರಿ ಹಾಯ್ದು ಸಾವನ್ನಪ್ಪಿದ್ದಾರೆ. ಬರೋಡಾ ಬ್ಯಾಂಕ್ ಎದುರುಗಡೆ ಘಟನೆ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಚಂದ್ರಶೇಖರ್ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಕುರಿತು ಹಾವೇರಿ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಂದ್ರಶೇಖರ ಕೋಡಿಹಳ್ಳಿ ಹೆಸ್ಕಾಂ ನಿವೃತ್ತ ನೌಕರರು.

ದೇವಿಹೊಸೂರು ಗ್ರಾಮದ‌ ಘನಿಸಾಬ್ (75) ಎಂಬವರು ದನ ಬೆದರಿಸುವ ಸ್ಪರ್ಧೆಯ ವೇಳೆ ಹೋರಿ ತಿವಿದು ಸಾವನ್ನಪ್ಪಿದ್ದಾರೆ. ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಹೋರಿ ಮನೆಗೆ ನುಗ್ಗಿದೆ. ಮನೆ ಕಟ್ಟೆ ಮೇಲೆ ಕುಳಿತಿದ್ದ ಘನಿಸಾಬಗೆ ಹೋರಿ ತಿವಿದಿದೆ. ಹಾವೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾನಗಲ್ ತಾಲೂಕಿನ ತಿಳವಳ್ಳಿಯಲ್ಲಿ ಹೋರಿ ತಿವಿದು ಯುವಕ ಸಾವನ್ನಪ್ಪಿದ್ದಾನೆ. ಸಂಜೆ ತಿಳವಳ್ಳಿ ಸಮೀಪದ ದುರ್ಗಾಂಬಿಕಾ ದಾಬಾ ಬಳಿ ಘಟನೆ ನಡೆದಿದೆ. ಗಾಯಾಳು ಭರತ್ ರಾಮಪ್ಪ ಹಿಂಗಮೇರಿ (24) ಅವರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ‌ ಫಲಿಸಲಿಲ್ಲ ಎಂಜು ತಿಳಿದು ಬಂದಿದೆ. ಆಡೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವೀರಭದ್ರೇಶ್ವರ ದೇವಸ್ಥಾನದ ರಥೋತ್ಸವ ಪ್ರತಿವರ್ಷ ದೀಪಾವಳಿಯಂದು ನಡೆಯುತ್ತದೆ. ಈ ಹಿನ್ನೆಲೆಯಲ್ಲಿ ಜಾತ್ರಾ ಸಮಿತಿ ಬಲಿಪಾಡ್ಯಮಿ ದಿನ ದನ ಬೆದರಿಸುವ ಸ್ಪರ್ಧೆ ಆಯೋಜಿಸುತ್ತದೆ. ಸ್ಪರ್ಧೆಯಲ್ಲಿ ಯಾವುದೇ ಬಹುಮಾನ ಇರುವುದಿಲ್ಲ.

ಸ್ಪರ್ಧೆ ನಡೆದ ನಂತರ ಬೇರೆ ಕಡೆ ಸ್ಪರ್ಧೆಗಳಲ್ಲಿ ಹೋರಿಗಳಿಗೆ ಬಹುಮಾನ ನೀಡಲಾಗುತ್ತದೆ. ಈ ವರ್ಷದ ಸ್ಪರ್ಧೆ ಬುಧವಾರ ಮಧ್ಯಾಹ್ನ ನಡೆಯಿತು. ಹಾವೇರಿ ನಗರ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಿಂದ ರೈತರು ತಮ್ಮ ನೆಚ್ಚಿನ ಹೋರಿಗಳನ್ನು ಸ್ಪರ್ಧೆಗೆ ಕರೆತಂದಿದ್ದರು. ಸುಮಾರು 300ಕ್ಕೂ ಅಧಿಕ ಕೊಬ್ಬರಿ ಹೋರಿಗಳು ಭಾಗಿಯಾಗಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Padma Awards 2026: ಕರ್ನಾಟಕದ 8 ಮಂದಿ ಸೇರಿದಂತೆ ದೇಶಾದ್ಯಂತ 131 ಸಾಧಕರಿಗೆ ಪದ್ಮ ಪ್ರಶಸ್ತಿ ಘೋಷಣೆ!

60 ಎಸೆತಗಳಲ್ಲಿ 155 ರನ್; ನ್ಯೂಜಿಲ್ಯಾಂಡ್ ವಿರುದ್ಧ ದಾಖಲೆಯ ಗೆಲುವು; T20 ಸರಣಿ ಭಾರತ ಕೈವಶ!

ಯುವರಾಜ್ ಸಿಂಗ್ 'ವಿಶ್ವ ದಾಖಲೆ' ಮುರಿಯುವಲ್ಲಿ ಜಸ್ಟ್ ಮಿಸ್! ಅಭಿಷೇಕ್ ಶರ್ಮಾ ಹೇಳಿದ್ದೇನು?

ಚೋರ್ಲಾ ಘಾಟ್ ನಲ್ಲಿ 400 ಕೋಟಿ ರೂ. ದರೋಡೆ: ಬೆಳಗಾವಿ ಎಸ್ ಪಿ ಹೇಳಿದ್ದೇನು?

ಮೈಸೂರು: ಕೌಟುಂಬಿಕ ಕಲಹ; ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ

SCROLL FOR NEXT