ಬಸವರಾಜ ರಾಯರೆಡ್ಡಿ-ಸಿದ್ದರಾಮಯ್ಯ 
ರಾಜ್ಯ

ಅಕ್ರಮ ಮರಳು ದಂಧೆ: ಮಾಧ್ಯಮಗಳ ವರದಿ ಆಧರಿಸಿ CMಗೆ ಪತ್ರ ಬರೆದಿದ್ದೆ; ಬಸವರಾಜ ರಾಯರೆಡ್ಡಿ ಸ್ಪಷ್ಟನೆ

ಪರವಾನಗಿ ಇಲ್ಲದೆ ಕೆಲವರು ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ. ಈ ಬಗ್ಗೆ ಅನೇಕ ಪತ್ರಿಕೆಗಳು ವರದಿ ಮಾಡಿದ್ದವು. ಆ ವರದಿ ಆಧಾರದ ಮೇಲೆ ಸಿಎಂಗೆ ಪತ್ರ ಬರೆದಿದ್ದೆ.

ಬೆಂಗಳೂರು: ಅಕ್ರಮ ಮರಳು ದಂಧೆ ವಿರೋಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಿಎಂ ಆರ್ಥಿಕ ಸಲಹೆಗಾರರಾಗಿರುವ ಬಸವರಾಜ ರಾಯರೆಡ್ಡಿಯವರು ಬರೆದಿರುವ ಪತ್ರವೊಂದು ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ.

ಪತ್ರ ಸಮರ ಕುರಿತು ರಾಜ್ಯ ಸರ್ಕಾರದ ವಿರುದ್ಧ ಹಲವು ಟೀಕೆಗಳು ವ್ಯಕ್ತವಾಗುತ್ತಿದ್ದು, ಇದರ ಬೆನ್ನಲ್ಲೇ ಬಸವರಾಜ ರಾಯರೆಡ್ಡಿಯವರು ಸ್ಪಷ್ಟನೆ ನೀಡಿದ್ದಾರೆ.

ಪರವಾನಗಿ ಇಲ್ಲದೆ ಮರಳು ದಂಧೆ ನಡೆಸುತ್ತಿರುವ ಕುರಿತು ಮಾಧ್ಯಮಗಳಲ್ಲಿ ವರದಿಗಳಾಗಿತ್ತು. ಈ ವರದಿ ಆಧರಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೆ ಎಂದು ಹೇಳಿದ್ದಾರೆ.

ಪರವಾನಗಿ ಇಲ್ಲದೆ ಕೆಲವರು ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ. ಈ ಬಗ್ಗೆ ಅನೇಕ ಪತ್ರಿಕೆಗಳು ವರದಿ ಮಾಡಿದ್ದವು. ಆ ವರದಿ ಆಧಾರದ ಮೇಲೆ ಸಿಎಂಗೆ ಪತ್ರ ಬರೆದಿದ್ದೆ. ಇದು ಸಾಮಾನ್ಯವಾಗಿ ನಡೆಯುತ್ತಿರುವ ವಿಷಯವಾಗಿದೆ. ಇದನ್ನೇ ದೊಡ್ಡ ವಿಷಯ ಮಾಡಬೇಡಿ ಎಂದು ತಿಳಿಸಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರ ಹೆಚ್ಚಾಗಿತ್ತು. ನಾವು ಭ್ರಷ್ಚಾಚಾರವನ್ನು ಹತ್ತಿಕ್ಕುತ್ತಿದ್ದೇವೆ. ಈ ನಿಟ್ಟಿನಲ್ಲಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

'ನೆರೆಹೊರೆಯವರು ಕೆಟ್ಟವ್ರು, ನಾವೇನ್ ಮಾಡ್ಬೇಕು ಅನ್ನೋದನ್ನ ಬೇರೆಯವ್ರು ಹೇಳೋದ್ ಬೇಡ: ಜೈಶಂಕರ್‌ ಖಡಕ್ ವಾರ್ನಿಂಗ್

ಮುಂಬೈ ಮೇಯರ್ ಹಿಂದೂ-ಮರಾಠಿ ಆಗಿರುತ್ತಾರೆ: ಮಹಾ ಸಿಎಂ ಫಡ್ನವೀಸ್

Bangladesh ವಿವಾದ: 'ಇತಿಹಾಸ ಮರೆತಿದ್ದಾರೆ.. ತಲೆ ತೆಗೆಯೋದ್ರಲ್ಲಿ ನಮ್ಮನ್ನು ಮೀರಿಸೋರಿಲ್ಲ'..: BJP ನಾಯಕ ಟೆಮ್ಜೆನ್

Ballari banner row: ಯಾರ ಗನ್ ನಿಂದ ಗುಂಡು ಹಾರಿತ್ತು ಎಂದು ತನಿಖೆ ಮಾಡಲು ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ

SCROLL FOR NEXT