ಬಸವರಾಜ ರಾಯರೆಡ್ಡಿ-ಸಿದ್ದರಾಮಯ್ಯ 
ರಾಜ್ಯ

ಅಕ್ರಮ ಮರಳು ದಂಧೆ: ಮಾಧ್ಯಮಗಳ ವರದಿ ಆಧರಿಸಿ CMಗೆ ಪತ್ರ ಬರೆದಿದ್ದೆ; ಬಸವರಾಜ ರಾಯರೆಡ್ಡಿ ಸ್ಪಷ್ಟನೆ

ಪರವಾನಗಿ ಇಲ್ಲದೆ ಕೆಲವರು ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ. ಈ ಬಗ್ಗೆ ಅನೇಕ ಪತ್ರಿಕೆಗಳು ವರದಿ ಮಾಡಿದ್ದವು. ಆ ವರದಿ ಆಧಾರದ ಮೇಲೆ ಸಿಎಂಗೆ ಪತ್ರ ಬರೆದಿದ್ದೆ.

ಬೆಂಗಳೂರು: ಅಕ್ರಮ ಮರಳು ದಂಧೆ ವಿರೋಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಿಎಂ ಆರ್ಥಿಕ ಸಲಹೆಗಾರರಾಗಿರುವ ಬಸವರಾಜ ರಾಯರೆಡ್ಡಿಯವರು ಬರೆದಿರುವ ಪತ್ರವೊಂದು ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ.

ಪತ್ರ ಸಮರ ಕುರಿತು ರಾಜ್ಯ ಸರ್ಕಾರದ ವಿರುದ್ಧ ಹಲವು ಟೀಕೆಗಳು ವ್ಯಕ್ತವಾಗುತ್ತಿದ್ದು, ಇದರ ಬೆನ್ನಲ್ಲೇ ಬಸವರಾಜ ರಾಯರೆಡ್ಡಿಯವರು ಸ್ಪಷ್ಟನೆ ನೀಡಿದ್ದಾರೆ.

ಪರವಾನಗಿ ಇಲ್ಲದೆ ಮರಳು ದಂಧೆ ನಡೆಸುತ್ತಿರುವ ಕುರಿತು ಮಾಧ್ಯಮಗಳಲ್ಲಿ ವರದಿಗಳಾಗಿತ್ತು. ಈ ವರದಿ ಆಧರಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೆ ಎಂದು ಹೇಳಿದ್ದಾರೆ.

ಪರವಾನಗಿ ಇಲ್ಲದೆ ಕೆಲವರು ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ. ಈ ಬಗ್ಗೆ ಅನೇಕ ಪತ್ರಿಕೆಗಳು ವರದಿ ಮಾಡಿದ್ದವು. ಆ ವರದಿ ಆಧಾರದ ಮೇಲೆ ಸಿಎಂಗೆ ಪತ್ರ ಬರೆದಿದ್ದೆ. ಇದು ಸಾಮಾನ್ಯವಾಗಿ ನಡೆಯುತ್ತಿರುವ ವಿಷಯವಾಗಿದೆ. ಇದನ್ನೇ ದೊಡ್ಡ ವಿಷಯ ಮಾಡಬೇಡಿ ಎಂದು ತಿಳಿಸಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರ ಹೆಚ್ಚಾಗಿತ್ತು. ನಾವು ಭ್ರಷ್ಚಾಚಾರವನ್ನು ಹತ್ತಿಕ್ಕುತ್ತಿದ್ದೇವೆ. ಈ ನಿಟ್ಟಿನಲ್ಲಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ ಪಂಚಾಯಿತಿ ಪ್ರತಿನಿಧಿಗಳಿಗೆ ಭತ್ಯೆ ಹೆಚ್ಚಳ, ಪಿಂಚಣಿ, ವಿಮೆ ಸೌಲಭ್ಯ: ತೇಜಸ್ವಿ ಯಾದವ್

Cabinet reshuffle: ಡಿಸೆಂಬರ್ ನಲ್ಲಿ ಸಚಿವ ಸಂಪುಟ ಪುನಾರಚನೆ; ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ರಾ?

ಸಚಿವ ಸಂಪುಟ ಪುನರಾಚನೆ: ಸಿದ್ದುಗೆ ಬೆಂಬಲ, ಸಿಎಂ ಆಗಿ ಮುಂದುವರೆಯುತ್ತಾರೆಂದರೆ ಸ್ಥಾನ ತ್ಯಾಗಕ್ಕೂ ಸಿದ್ಧ ಎಂದ ಸಚಿವರು

ಆಸೀಸ್ ವಿರುದ್ಧದ 3rd ODI: ನಾಯಕ ಗಿಲ್ ಸಲಹೆ ನಿರ್ಲಕ್ಷಿಸಿ, ರೋಹಿತ್ ಮಾತು ಕೇಳಿದ ಹರ್ಷಿತ್ ರಾಣಾ! ಮುಂದೇನಾಯ್ತು Video ನೋಡಿ..

ಡಿಸೆಂಬರ್ 8 ರಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ

SCROLL FOR NEXT