ಶ್ರೀಗಂಧದ ಮರದ ತುಂಡುಗಳು 
ರಾಜ್ಯ

TB ಜಲಾಶಯ ಮಂಡಳಿ ಕಾರ್ಯದರ್ಶಿ ನಿವಾಸದ ಆವರಣದಲ್ಲಿ ಬೆಲೆ ಬಾಳುವ ಶ್ರೀಗಂಧದ ಮರಗಳ ಕಳ್ಳತನ; SIT ರಚನೆ

ಸಿಸಿಟಿವಿ ದೃಶ್ಯಾವಳಿಗಳು ಮತ್ತು ಇತರ ತಾಂತ್ರಿಕ ಪುರಾವೆಗಳನ್ನು ಬಳಸಿಕೊಂಡು ಆರೋಪಿಗಳ ಗುರುತಿಸಲು ಮತ್ತು ಬಂಧಿಸಲು ಪ್ರಯತ್ನಗಳು ಮುಂದುವರೆದಿವೆ.

ಹೊಸಪೇಟೆ: ತುಂಗ ಭದ್ರಾ ಜಲಾಶಯ ಮಂಡಳಿ ಕಾರ್ಯದರ್ಶಿಗಳ ನಿವಾಸದ ಆವರಣಕ್ಕೆ ನುಗ್ಗಿದ ದುಷ್ಕರ್ಮಿಗಳು, ಬೆಲೆಬಾಳುವ ಶ್ರೀಗಂಧದ ಮರಗಳನ್ನು ಹೊತ್ತೊಯ್ದಿರುವ ಘಟನೆ ಶನಿವಾರ ನಡೆದಿದೆ.

ಈ ಸಂಬಂಧ ತುಂಗ ಭದ್ರಾ ಜಲಾಶಯ ಮಂಡಳಿ ಕಾರ್ಯದರ್ಶಿಯವರ ಮನೆಯ ಭದ್ರತಾ ಸಿಬ್ಬಂದಿ ದೂರು ಸಲ್ಲಿಸಿದ್ದು, ದೂರಿನಲ್ಲಿ, 25 ರಿಂದ 30 ವರ್ಷ ವಯಸ್ಸಿನವರಿದ್ದ 8 ರಿಂದ 10 ಜನರ ಗುಂಪು ಬೆಳಗಿನ ಜಾವ 1.40 ರ ಸುಮಾರಿಗೆ ಆವರಣಕ್ಕೆ ಪ್ರವೇಶಿಸಿತ್ತು. ಈ ವೇಳೆ ಭದ್ರತಾ ಸಿಬ್ಬಂದಿಯ ಕೈಕಾಲು ಕಟ್ಟಿ, ಬಾಯಿ ಮುಚ್ಚಿ ಮರಗಳ ಕಳ್ಳತನ ಮಾಡಿದೆ.

ಆರೋಪಿಗಳು 100 ಕೆಜಿ ತೂಕದ ಅಂದಾಜು 3 ಲಕ್ಷ ರೂ. ಮೌಲ್ಯದ ಶ್ರೀಗಂಧದ ಮರವನ್ನು ಕಡಿದು ಕದ್ದೊಯ್ದಿದ್ದಾರೆಂದು ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ ಅಪರಾಧ ಸಂಖ್ಯೆ 47/2025 ರ ಅಡಿಯಲ್ಲಿ ಅರಣ್ಯ ಕಾಯ್ದೆಯ ಸೆಕ್ಷನ್ 310(2) ಮತ್ತು 86 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಎಸ್ ಜಾಹ್ನವಿ ತಿಳಿಸಿದ್ದಾರೆ.

ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದ್ದು, ಪ್ರಸ್ತುತ ತನಿಖೆ ನಡೆಯುತ್ತಿದೆ. ಸಿಸಿಟಿವಿ ದೃಶ್ಯಾವಳಿಗಳು ಮತ್ತು ಇತರ ತಾಂತ್ರಿಕ ಪುರಾವೆಗಳನ್ನು ಬಳಸಿಕೊಂಡು ಆರೋಪಿಗಳ ಗುರುತಿಸಲು ಮತ್ತು ಬಂಧಿಸಲು ಪ್ರಯತ್ನಗಳು ಮುಂದುವರೆದಿವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಹಿಳಾ ವಿಶ್ವಕಪ್ 2025: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 53 ರನ್‌ಗಳ ಭರ್ಜರಿ ಜಯ, ಸೆಮಿಫೈನಲ್‌ಗೆ INDIA ಲಗ್ಗೆ!

ವೆಸ್ಟ್ ಬ್ಯಾಂಕ್ ವಶಪಡಿಸಿಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೇ ಅಮೆರಿಕದ ಬೆಂಬಲ ಕಳಕೊಳ್ಳಬೇಕಾಗುತ್ತೆ: ಇಸ್ರೇಲ್‌ಗೆ ಟ್ರಂಪ್ ಕಟು ಎಚ್ಚರಿಕೆ

ರಕ್ಷಣಾ ವಲಯಕ್ಕೆ 79,000 ಕೋಟಿ ರೂ. ಮೌಲ್ಯದ ಉಪಕರಣಗಳ ಖರೀದಿಗೆ ಕೇಂದ್ರ ಸರ್ಕಾರ ಅನುಮೋದನೆ!

ಹೊಸ ಸಿಜೆಐ ನೇಮಕಕ್ಕೆ ಪ್ರಕ್ರಿಯೆ ಆರಂಭ: ಯಾರಾಗಲಿದ್ದಾರೆ ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ?

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಎರಡ್ಮೂರು ದಿನಗಳಲ್ಲಿ AAI ವರದಿ ಸಲ್ಲಿಕೆ- ಎಂ.ಬಿ ಪಾಟೀಲ್

SCROLL FOR NEXT