ಶ್ರೀಗಂಧದ ಮರದ ತುಂಡುಗಳು 
ರಾಜ್ಯ

TB ಜಲಾಶಯ ಮಂಡಳಿ ಕಾರ್ಯದರ್ಶಿ ನಿವಾಸದ ಆವರಣದಲ್ಲಿ ಬೆಲೆ ಬಾಳುವ ಶ್ರೀಗಂಧದ ಮರಗಳ ಕಳ್ಳತನ; SIT ರಚನೆ

ಸಿಸಿಟಿವಿ ದೃಶ್ಯಾವಳಿಗಳು ಮತ್ತು ಇತರ ತಾಂತ್ರಿಕ ಪುರಾವೆಗಳನ್ನು ಬಳಸಿಕೊಂಡು ಆರೋಪಿಗಳ ಗುರುತಿಸಲು ಮತ್ತು ಬಂಧಿಸಲು ಪ್ರಯತ್ನಗಳು ಮುಂದುವರೆದಿವೆ.

ಹೊಸಪೇಟೆ: ತುಂಗ ಭದ್ರಾ ಜಲಾಶಯ ಮಂಡಳಿ ಕಾರ್ಯದರ್ಶಿಗಳ ನಿವಾಸದ ಆವರಣಕ್ಕೆ ನುಗ್ಗಿದ ದುಷ್ಕರ್ಮಿಗಳು, ಬೆಲೆಬಾಳುವ ಶ್ರೀಗಂಧದ ಮರಗಳನ್ನು ಹೊತ್ತೊಯ್ದಿರುವ ಘಟನೆ ಶನಿವಾರ ನಡೆದಿದೆ.

ಈ ಸಂಬಂಧ ತುಂಗ ಭದ್ರಾ ಜಲಾಶಯ ಮಂಡಳಿ ಕಾರ್ಯದರ್ಶಿಯವರ ಮನೆಯ ಭದ್ರತಾ ಸಿಬ್ಬಂದಿ ದೂರು ಸಲ್ಲಿಸಿದ್ದು, ದೂರಿನಲ್ಲಿ, 25 ರಿಂದ 30 ವರ್ಷ ವಯಸ್ಸಿನವರಿದ್ದ 8 ರಿಂದ 10 ಜನರ ಗುಂಪು ಬೆಳಗಿನ ಜಾವ 1.40 ರ ಸುಮಾರಿಗೆ ಆವರಣಕ್ಕೆ ಪ್ರವೇಶಿಸಿತ್ತು. ಈ ವೇಳೆ ಭದ್ರತಾ ಸಿಬ್ಬಂದಿಯ ಕೈಕಾಲು ಕಟ್ಟಿ, ಬಾಯಿ ಮುಚ್ಚಿ ಮರಗಳ ಕಳ್ಳತನ ಮಾಡಿದೆ.

ಆರೋಪಿಗಳು 100 ಕೆಜಿ ತೂಕದ ಅಂದಾಜು 3 ಲಕ್ಷ ರೂ. ಮೌಲ್ಯದ ಶ್ರೀಗಂಧದ ಮರವನ್ನು ಕಡಿದು ಕದ್ದೊಯ್ದಿದ್ದಾರೆಂದು ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ ಅಪರಾಧ ಸಂಖ್ಯೆ 47/2025 ರ ಅಡಿಯಲ್ಲಿ ಅರಣ್ಯ ಕಾಯ್ದೆಯ ಸೆಕ್ಷನ್ 310(2) ಮತ್ತು 86 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಎಸ್ ಜಾಹ್ನವಿ ತಿಳಿಸಿದ್ದಾರೆ.

ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದ್ದು, ಪ್ರಸ್ತುತ ತನಿಖೆ ನಡೆಯುತ್ತಿದೆ. ಸಿಸಿಟಿವಿ ದೃಶ್ಯಾವಳಿಗಳು ಮತ್ತು ಇತರ ತಾಂತ್ರಿಕ ಪುರಾವೆಗಳನ್ನು ಬಳಸಿಕೊಂಡು ಆರೋಪಿಗಳ ಗುರುತಿಸಲು ಮತ್ತು ಬಂಧಿಸಲು ಪ್ರಯತ್ನಗಳು ಮುಂದುವರೆದಿವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶದಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮ: ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ದೆಹಲಿಯಲ್ಲಿ ಹೆಚ್ಚಿದ ಭದ್ರತೆ

77ನೇ ಗಣರಾಜ್ಯೋತ್ಸವ ದಿನಾಚರಣೆ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬಿಗಿ ಪೊಲೀಸ್ ಭದ್ರತೆ, ಹಲವೆಡೆ ಸಂಚಾರ ನಿಷೇಧ

Padma Awards 2026: ಕರ್ನಾಟಕದ 8 ಮಂದಿ ಸೇರಿದಂತೆ ದೇಶಾದ್ಯಂತ 131 ಸಾಧಕರಿಗೆ ಪದ್ಮ ಪ್ರಶಸ್ತಿ ಘೋಷಣೆ!

60 ಎಸೆತಗಳಲ್ಲಿ 155 ರನ್; ನ್ಯೂಜಿಲ್ಯಾಂಡ್ ವಿರುದ್ಧ ದಾಖಲೆಯ ಗೆಲುವು; T20 ಸರಣಿ ಭಾರತ ಕೈವಶ!

ಯುವರಾಜ್ ಸಿಂಗ್ 'ವಿಶ್ವ ದಾಖಲೆ' ಮುರಿಯುವಲ್ಲಿ ಜಸ್ಟ್ ಮಿಸ್! ಅಭಿಷೇಕ್ ಶರ್ಮಾ ಹೇಳಿದ್ದೇನು?

SCROLL FOR NEXT