ಶ್ರೀಗಂಧದ ಮರದ ತುಂಡುಗಳು 
ರಾಜ್ಯ

TB ಜಲಾಶಯ ಮಂಡಳಿ ಕಾರ್ಯದರ್ಶಿ ನಿವಾಸದ ಆವರಣದಲ್ಲಿ ಬೆಲೆ ಬಾಳುವ ಶ್ರೀಗಂಧದ ಮರಗಳ ಕಳ್ಳತನ; SIT ರಚನೆ

ಸಿಸಿಟಿವಿ ದೃಶ್ಯಾವಳಿಗಳು ಮತ್ತು ಇತರ ತಾಂತ್ರಿಕ ಪುರಾವೆಗಳನ್ನು ಬಳಸಿಕೊಂಡು ಆರೋಪಿಗಳ ಗುರುತಿಸಲು ಮತ್ತು ಬಂಧಿಸಲು ಪ್ರಯತ್ನಗಳು ಮುಂದುವರೆದಿವೆ.

ಹೊಸಪೇಟೆ: ತುಂಗ ಭದ್ರಾ ಜಲಾಶಯ ಮಂಡಳಿ ಕಾರ್ಯದರ್ಶಿಗಳ ನಿವಾಸದ ಆವರಣಕ್ಕೆ ನುಗ್ಗಿದ ದುಷ್ಕರ್ಮಿಗಳು, ಬೆಲೆಬಾಳುವ ಶ್ರೀಗಂಧದ ಮರಗಳನ್ನು ಹೊತ್ತೊಯ್ದಿರುವ ಘಟನೆ ಶನಿವಾರ ನಡೆದಿದೆ.

ಈ ಸಂಬಂಧ ತುಂಗ ಭದ್ರಾ ಜಲಾಶಯ ಮಂಡಳಿ ಕಾರ್ಯದರ್ಶಿಯವರ ಮನೆಯ ಭದ್ರತಾ ಸಿಬ್ಬಂದಿ ದೂರು ಸಲ್ಲಿಸಿದ್ದು, ದೂರಿನಲ್ಲಿ, 25 ರಿಂದ 30 ವರ್ಷ ವಯಸ್ಸಿನವರಿದ್ದ 8 ರಿಂದ 10 ಜನರ ಗುಂಪು ಬೆಳಗಿನ ಜಾವ 1.40 ರ ಸುಮಾರಿಗೆ ಆವರಣಕ್ಕೆ ಪ್ರವೇಶಿಸಿತ್ತು. ಈ ವೇಳೆ ಭದ್ರತಾ ಸಿಬ್ಬಂದಿಯ ಕೈಕಾಲು ಕಟ್ಟಿ, ಬಾಯಿ ಮುಚ್ಚಿ ಮರಗಳ ಕಳ್ಳತನ ಮಾಡಿದೆ.

ಆರೋಪಿಗಳು 100 ಕೆಜಿ ತೂಕದ ಅಂದಾಜು 3 ಲಕ್ಷ ರೂ. ಮೌಲ್ಯದ ಶ್ರೀಗಂಧದ ಮರವನ್ನು ಕಡಿದು ಕದ್ದೊಯ್ದಿದ್ದಾರೆಂದು ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ ಅಪರಾಧ ಸಂಖ್ಯೆ 47/2025 ರ ಅಡಿಯಲ್ಲಿ ಅರಣ್ಯ ಕಾಯ್ದೆಯ ಸೆಕ್ಷನ್ 310(2) ಮತ್ತು 86 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಎಸ್ ಜಾಹ್ನವಿ ತಿಳಿಸಿದ್ದಾರೆ.

ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದ್ದು, ಪ್ರಸ್ತುತ ತನಿಖೆ ನಡೆಯುತ್ತಿದೆ. ಸಿಸಿಟಿವಿ ದೃಶ್ಯಾವಳಿಗಳು ಮತ್ತು ಇತರ ತಾಂತ್ರಿಕ ಪುರಾವೆಗಳನ್ನು ಬಳಸಿಕೊಂಡು ಆರೋಪಿಗಳ ಗುರುತಿಸಲು ಮತ್ತು ಬಂಧಿಸಲು ಪ್ರಯತ್ನಗಳು ಮುಂದುವರೆದಿವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ