ಕರ್ನಾಟಕ ಹೈಕೋರ್ಟ್ 
ರಾಜ್ಯ

‘ED ಒತ್ತೆ ಇಟ್ಟ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಾಧ್ಯವಿಲ್ಲ’: ಕರ್ನಾಟಕ ಹೈಕೋರ್ಟ್

ನ್ಯಾಯಮೂರ್ತಿ ಡಿ ಕೆ ಸಿಂಗ್ ಮತ್ತು ನ್ಯಾಯಮೂರ್ತಿ ವೆಂಕಟೇಶ್ ನಾಯಕ್ ಟಿ ಅವರ ವಿಭಾಗೀಯ ಪೀಠ, ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.

ಬೆಂಗಳೂರು: ಸಾಲಗಾರರು ಬ್ಯಾಂಕಿನಿಂದ ಸಾಲ ಪಡೆಯಲು ಒತ್ತೆ ಇಟ್ಟ ಆಸ್ತಿಗಳ ಮುಟ್ಟುಗೋಲು ಹಾಕಿಕೊಳ್ಳುವ ಕುರಿತು ಜಾರಿ ನಿರ್ದೇಶನಾಲಯ (ED) ಹೊರಡಿಸಿದ ಮುಟ್ಟುಗೋಲು ಆದೇಶ ಮತ್ತು ನ್ಯಾಯನಿರ್ಣಯ ಪ್ರಾಧಿಕಾರ ಹೊರಡಿಸಿದ್ದ ದೃಢೀಕರಣ ಆದೇಶ ರದ್ದುಗೊಳಿಸಿ ಮೇಲ್ಮನವಿ ನ್ಯಾಯಮಂಡಳಿ ಹೊರಡಿಸಿದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ.

ಪ್ರಾಥಮಿಕ ತನಿಖೆಯಲ್ಲಿ ಅಪರಾಧದ ಆದಾಯದಿಂದ ಸ್ವಾಧೀನಪಡಿಸಿಕೊಂಡ ಆಸ್ತಿಗಳು ಎಂದು ಕಂಡುಬಂದರೆ ಮಾತ್ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(PMLA) ಅಡಿಯಲ್ಲಿ ಮುಟ್ಟುಗೋಲು ಪ್ರಕ್ರಿಯೆಗೆ ಒಳಪಡಿಸಬಹುದು ಎಂದು ಹೈಕೋರ್ಟ್ ಹೇಳಿದೆ.

ಸಾಲಗಳ ವಿರುದ್ಧ ಮೇಲಾಧಾರ ಭದ್ರತೆಯಾಗಿ ನೀಡಲಾಗುವ ಆಸ್ತಿಗಳು PMLAಯ ಸೆಕ್ಷನ್ 2(u) ಅಡಿಯಲ್ಲಿ ವ್ಯಾಖ್ಯಾನಿಸಲಾದ ಅಪರಾಧದ ಆದಾಯ ಎಂದು ವಿವರಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.

ಈ ಆಸ್ತಿಗಳನ್ನು ಅಪರಾಧದ ಆದಾಯದಿಂದ ಸ್ವಾಧೀನಪಡಿಸಿಕೊಂಡಿಲ್ಲ ಮತ್ತು ಕೇಂದ್ರವು ಮುಟ್ಟುಗೋಲು ಹಾಕಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿ, ನ್ಯಾಯಮೂರ್ತಿ ಡಿ ಕೆ ಸಿಂಗ್ ಮತ್ತು ನ್ಯಾಯಮೂರ್ತಿ ವೆಂಕಟೇಶ್ ನಾಯಕ್ ಟಿ ಅವರ ವಿಭಾಗೀಯ ಪೀಠ, ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಧನ ಸುರಕ್ಷತೆ ಕುರಿತು ಇರಾನ್ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಮೂರು ಬಾರಿ ಮಾತುಕತೆ

ನೀವು ಮಿತಿ ಮೀರಿದ್ದೀರಿ: ಕನ್ನಡದಲ್ಲೇ ಎಚ್ಚರಿಕೆ ಕೊಟ್ಟ ರಶ್ಮಿಕಾ; ಸಂಕಷ್ಟದ ಸಮಯದಲ್ಲಿ ಕನ್ನಡವೇ ಬೇಕಾಯ್ತಾ? ಎಂದ ನೆಟ್ಟಿಗರು!

ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು: ಯಾರೇ ಒಪ್ಪಿದರೂ-ಒಪ್ಪದಿದ್ದರೂ ನಿಯಮಗಳ ಪ್ರಕಾರವೇ ಲೋಕಸಭೆ ಕಾರ್ಯನಿರ್ವಹಣೆ; ಸ್ಪೀಕರ್ ಓಂ ಬಿರ್ಲಾ

CEC ಜ್ಞಾನೇಶ್ ಕುಮಾರ್ ಪದಚ್ಯುತಿಗೆ ನಿರ್ಣಯ: 200ಕ್ಕೂ ಹೆಚ್ಚು ಸಂಸದರಿಂದ ನೋಟಿಸ್‌ಗೆ ಸಹಿ

ಇರಾನ್ ಬಿಕ್ಕಟ್ಟು: ಕೇಂದ್ರ ಸರ್ಕಾರಕ್ಕೆ ಹೊರೆ, ಪ್ರತಿ ತಿಂಗಳು 30,000 ಕೋಟಿ ರೂ. ಹೆಚ್ಚಿನ ವೆಚ್ಚ!

SCROLL FOR NEXT