ಸಚಿವ ಪ್ರಿಯಾಂಕ್ ಖರ್ಗೆ  
ರಾಜ್ಯ

ಮತಗಳವು ಪ್ರಕರಣದ ಹೊಣೆಗಾರರನ್ನು ಜೈಲಿಗಟ್ಟುವುದು ಖಚಿತ: ಸಚಿವ ಪ್ರಿಯಾಂಕ್ ಖರ್ಗೆ

ಎಲ್ಲಾ ತನಿಖೆಗಳು ಈಗ ಬಿಜೆಪಿ ನಾಯಕರು ಮತ್ತು ಅವರ ಸಹಚರರ ಅಕ್ರಮವನ್ನು ತೋರಿಸುತ್ತವೆ. ಬಿಜೆಪಿಯ ವೋಟ್ ಚೋರಿಯ ಪ್ರತಿಯೊಂದು ಕೊಳಕು ತಂತ್ರ ಮತ್ತು ಕಾರ್ಯವೈಖರಿಯನ್ನು ಒಂದೊಂದಾಗಿ ಬಹಿರಂಗಪಡಿಸುತ್ತಿವೆ.

ಕಲಬುರಗಿ: ವೋಟ್ ಚೋರಿ ಪ್ರಕರಣಕ್ಕೆ ಹೊಸ ತಿರುವು ಪಡೆದಿದ್ದು, ಮತದಾರರ ಪಟ್ಟಿಯಿಂದ ಮತದಾರರ ಹೆಸರು ಅಳಿಸಿಹಾಕಲು ಪ್ರತಿಯೊಂದಕ್ಕೆ 80 ರು ಪಾವತಿಸಲಾಗಿದೆ ಎನ್ನುವ ಅಂಶ ಎಸ್ಐಟಿ ತನಿಖೆಯಿಂದ ತಿಳಿದು ಬಂದಿದೆ. ಇದು ಮತಗಳವು ವಿಚಾರದಲ್ಲಿ ನಾವು ಇಷ್ಟು ದಿನ ಹೇಳುತ್ತಿದ್ದ ವಿಷಯ ಎಸ್ಐಟಿ ತನಿಖೆಯಿಂದ ದೃಢಪಟ್ಟಿದೆ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಎಲ್ಲಾ ತನಿಖೆಗಳು ಈಗ ಬಿಜೆಪಿ ನಾಯಕರು ಮತ್ತು ಅವರ ಸಹಚರರ ಅಕ್ರಮವನ್ನು ತೋರಿಸುತ್ತವೆ. ಬಿಜೆಪಿಯ ವೋಟ್ ಚೋರಿಯ ಪ್ರತಿಯೊಂದು ಕೊಳಕು ತಂತ್ರ ಮತ್ತು ಕಾರ್ಯವೈಖರಿಯನ್ನು ಒಂದೊಂದಾಗಿ ಬಹಿರಂಗಪಡಿಸುತ್ತಿವೆ. ಈ ವಿಷಯದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನು ಹೊಣೆಗಾರರನ್ನಾಗಿ ಮಾಡಿ ಜೈಲಿಗೆ ಹಾಕಲಾಗುವುದು' ಎಂದು‌ ಸಾಮಾಜಿಕ‌ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್‌ ಮಾಡಿದ್ದಾರೆ.

2023ರ ವಿಧಾನಸಭೆ ಚುನಾವಣೆಗೆ ಮುನ್ನ, ಆಳಂದ ಮತ ಕ್ಷೇತ್ರದಲ್ಲಿ ಹಣ ನೀಡುವ ಮೂಲಕ ಸುಮಾರು 6,000ಕ್ಕೂ ಅಧಿಕ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಲು ಯತ್ನಿಸಲಾಗಿತ್ತು. ಕಲಬುರಗಿಯ ಪೂರ್ಣ ಪ್ರಮಾಣದ ದತ್ತಾಂಶ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಿರ್ವಾಹಕರು ಮತದಾರರ ಹೆಸರುಗಳನ್ನು ವ್ಯವಸ್ಥಿತವಾಗಿ ಅಳಿಸಿ‌ಹಾಕುವ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಹಾಳುಗೆಡವುತ್ತಿದ್ದರು‌ ಎಂದು‌ ಟೀಕಿಸಿದ್ದಾರೆ.

ಕಲಬುರಗಿಯ ಪೂರ್ಣ ಪ್ರಮಾಣದ ದತ್ತಾಂಶ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನಿರ್ವಾಹಕರು ಮತದಾರರ ಹೆಸರುಗಳನ್ನು ವ್ಯವಸ್ಥಿತವಾಗಿ ಅಳಿಸಿ‌ಹಾಕುವ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಹಾಳುಗೆಡವುತ್ತಿದ್ದರು. ಎಲ್ಲಾ ತನಿಖೆಗಳು ಈಗ ಬಿಜೆಪಿ ನಾಯಕರು ಮತ್ತು ಅವರ ಸಹಚರರ ಅಕ್ರಮವನ್ನು ತೋರಿಸುತ್ತವೆ. ಬಿಜೆಪಿಯ ವೋಟ್ ಚೋರಿಯ ಪ್ರತಿಯೊಂದು ತಂತ್ರ ಮತ್ತು ಕಾರ್ಯವೈಖರಿಯನ್ನು ಬಹಿರಂಗಪಡಿಸುತ್ತಿವೆ. ಈ ವಿಷಯದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನು ಹೊಣೆಗಾರರನ್ನಾಗಿ ಮಾಡಿ ಜೈಲಿಗೆ ಹಾಕಲಾಗುವುದು ಎಂದು ಪ್ರಿಯಾಂಕ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ವಿರುದ್ಧ ಪ್ರತೀಕಾರ: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ; ಜಾಗತಿಕ ಮಾರುಕಟ್ಟೆಗೆ ಶಾಕ್, ಭಾರತದ ಮೇಲೂ ಪರಿಣಾಮ ಸಾಧ್ಯತೆ..!

ಹಾರ್ಮುಜ್ ಜಲಸಂಧಿ ದಿಗ್ಬಂಧನ: ಹಿಂದೆ ಸರಿಯದಿದ್ದರೆ ಗಲ್ಪ್ ವ್ಯಾಪಾರ ಸಂಪೂರ್ಣ ಅಸ್ತವ್ಯಸ್ತ; ಅಮೆರಿಕಾಗೆ ಇರಾನ್ ಖಡಕ್ ಎಚ್ಚರಿಕೆ..!

SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ಭಾರೀ ಮುಖಭಂಗ: ಅಂಕಗಳನ್ನೇ ನೀಡಲು ಹೈಕೋರ್ಟ್ ಮಹತ್ವದ ಆದೇಶ

ದ್ವಿಪಕ್ಷೀಯ ವಾಣಿಜ್ಯ ಒಪ್ಪಂದ: ಜಂಟಿ ಕಾರ್ಯದರ್ಶಿ ದರ್ಪಣ್ ಜೈನ್ ನೇತೃತ್ವದ ನಿಯೋಗ ಏ.20ಕ್ಕೆ ಅಮೆರಿಕಾಕ್ಕೆ..!

ನಾನೇನು ಕೇರಳದಲ್ಲಿ ಮೋಜು- ಮಸ್ತಿಗೆ ಹೋಗಿರಲಿಲ್ಲ: ನನ್ನ ಹಣೆಬರಹ ಬರೆಯಲು ಯಾರಿಂದಲೂ ಸಾಧ್ಯವಿಲ್ಲ; ಆಪ್ತರ ತಲೆದಂಡ- ಜಮೀರ್ ಕೆಂಡ!

SCROLL FOR NEXT