ಸಿಎಂ ಸಿದ್ದರಾಮಯ್ಯಗೆ ಡಿವಿಡೆಂಡ್ ಚೆಕ್ ಹಸ್ತಾಂತರ 
ರಾಜ್ಯ

KSDL ಐತಿಹಾಸಿಕ ಸಾಧನೆ: ಸರ್ಕಾರಕ್ಕೆ 135 ಕೋಟಿ ರೂ ಡಿವಿಡೆಂಡ್ ಹಸ್ತಾಂತರ!

ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಕೆಎಸ್ಡಿಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಅವರು ಈ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು.

ಬೆಂಗಳೂರು: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳನ್ನು ಶುಕ್ರವಾರ ಸರಕಾರಕ್ಕೆ ಹಸ್ತಾಂತರಿಸಿತು.

ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಕೆಎಸ್ಡಿಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಅವರು ಈ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಈ ಕಾರ್ಯಕ್ರಮವು ನಡೆಯಿತು.

ಸಚಿವ ಪಾಟೀಲರು ಮಾತನಾಡಿ, ಕೆಎಸ್ಡಿಎಲ್ ಸಂಸ್ಥೆಯು ಕಳೆದ ಹಣಕಾಸು ವರ್ಷದಲ್ಲಿ 1,700 ಕೋಟಿ ರೂಪಾಯಿ ವಹಿವಾಟು ನಡೆಸಿ, 451 ಕೋಟಿ ರೂ. ಲಾಭವನ್ನು ಕಂಡಿದೆ. ಇದರ ಪೈಕಿ ನಿಯಮದಂತೆ ಶೇ.30ರಷ್ಟು ಲಾಭಾಂಶವನ್ನು ಸರಕಾರಕ್ಕೆ ಕೊಡಲಾಗಿದೆ. ವಹಿವಾಟು, ಲಾಭ ಮತ್ತು ಲಾಭಾಂಶ ಮೂರರಲ್ಲೂ ಇದು ಸಾರ್ವಕಾಲಿಕ ದಾಖಲೆ ಆಗಿದೆ ಎಂದಿದ್ದಾರೆ.

2022-23ರಲ್ಲಿ ಬಿಜೆಪಿ ಸರಕಾರವಿದ್ದಾಗ ಸಂಸ್ಥೆಯ ವತಿಯಿಂದ ಸರಕಾರಕ್ಕೆ 54 ಕೋಟಿ ರೂಪಾಯಿ ಡಿವಿಡೆಂಡ್ (ಲಾಭಾಂಶ) ಕೊಡಲಾಗಿತ್ತು. 2023-24ರಲ್ಲಿ 108 ಕೋಟಿ ರೂ. ಲಾಭಾಂಶ ಹಸ್ತಾಂತರಿಸಲಾಗಿತ್ತು. ಇದಕ್ಕೆ ಹೋಲಿಸಿದರೆ ಲಾಭಾಂಶದಲ್ಲಿ ಈಗ 27 ಕೋಟಿ ರೂ. ಹೆಚ್ಚಳವಾಗಿದೆ. ಮುಂಬರುವ ವರ್ಷಗಳಲ್ಲಿ ಇದು ಮತ್ತಷ್ಟು ಹೆಚ್ಚಲಿದೆ ಎಂದು ಅವರು ನುಡಿದಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ.ಎಂ.ಸಿ.ಸುಧಾಕರ, ಸಂತೋಷ ಲಾಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಪಿ.ಕೆ.ಪ್ರಶಾಂತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್