ಸಾಂದರ್ಭಿಕ ಚಿತ್ರ 
ರಾಜ್ಯ

ಸುರತ್ಕಲ್‌: ಕ್ಷುಲ್ಲಕ ಕಾರಣಕ್ಕಾಗಿ ಚೂರಿ ಇರಿತ, ಇಬ್ಬರಿಗೆ ಗಾಯ; ಬಜರಂಗದಳ ಕಾರ್ಯಕರ್ತ ಸೇರಿ ನಾಲ್ವರು ಆರೋಪಿಗಳಿಗಾಗಿ ಶೋಧ

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಗುರುತಿಸಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ. ಮುಕ್ಷಿದ್, ನಿಜಾಮ್ ಮತ್ತು ಇತರ ಇಬ್ಬರು ಸ್ನೇಹಿತರು ದೀಪಕ್ ಬಾರ್‌ಗೆ ತೆರಳಿ ಮದ್ಯ ಸೇವಿಸುತ್ತಿದ್ದರು.

ಮಂಗಳೂರು: ನಗರದ ಹೊರವಲಯದ ಸುರತ್ಕಲ್‌ನಲ್ಲಿರುವ ದೀಪಕ್ ಬಾರ್ ಬಳಿ ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಚೂರಿ ಇರಿತದಲ್ಲಿ ಅಂತ್ಯಗೊಂಡ ಘಟನೆ ಗುರುವಾರ ರಾತ್ರಿ ಸುಮಾರು 11 ಗಂಟೆಗೆ ವರದಿಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಗುರುತಿಸಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ. ಮುಕ್ಷಿದ್, ನಿಜಾಮ್ ಮತ್ತು ಇತರ ಇಬ್ಬರು ಸ್ನೇಹಿತರು ದೀಪಕ್ ಬಾರ್‌ಗೆ ತೆರಳಿ ಮದ್ಯ ಸೇವಿಸುತ್ತಿದ್ದರು.

ಇದೇ ವೇಳೆ, ಅಲ್ಲಿಗೆ ಬಂದಿದ್ದ ನಾಲ್ವರು ಅಪರಿಚಿತ ವ್ಯಕ್ತಿಗಳ ಜೊತೆ ಅವರಿಗೆ ವಾಗ್ವಾದ ಶುರುವಾಗಿದೆ. ಬಾರ್‌ನಿಂದ ಹೊರಬಂದ ನಂತರವೂ ಎರಡೂ ಗುಂಪುಗಳ ನಡುವೆ ಜಗಳ ಮುಂದುವರಿದಿದೆ. ಈ ಸಂದರ್ಭದಲ್ಲಿ, ಆರೋಪಿಗಳಲ್ಲಿ ಒಬ್ಬ ಚಾಕುವಿನಿಂದ (ಗಾಯದ ಸ್ವರೂಪ ಗಮನಿಸಿದಾಗ ಫ್ಲೆಕ್ಸ್ ಕತ್ತರಿಸುವ ಚಾಕು ಎಂದು ಶಂಕಿಸಲಾಗಿದೆ) ಮುಕ್ಷಿದ್ ಅವರ ಹೊಟ್ಟೆಗೆ ಮತ್ತು ಕಿವಿಯ ಸಮೀಪ ಇರಿದಿದ್ದಾನೆಗಿ

ತಡೆಯಲು ಬಂದ ಸ್ನೇಹಿತ ನಿಜಾಮ್ ಕೈಗೂ ಗಾಯವಾಗಿದೆ. ಅದೃಷ್ಟವಶಾತ್ ಗಾಯ ಆಳವಾಗಿರದ ಕಾರಣ ಮುಕ್ಷಿದ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಸುಧೀರ್‌ ಕುಮಾರ್‌ ರೆಡ್ಡಿ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ನಾಲ್ವರು ಅಪರಿಚಿತ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307ರ ಅಡಿಯಲ್ಲಿ (ಕೊಲೆ ಯತ್ನ) ಪ್ರಕರಣ ದಾಖಲಿಸಲಾಗಿದೆ.

ರಾತ್ರಿಯೇ ಕಾರ್ಯಪ್ರವೃತ್ತರಾದ ಪೊಲೀಸರ ವಿಶೇಷ ತಂಡಗಳು ಆರೋಪಿಗಳನ್ನು ಗುರುತಿಸುವಲ್ಲಿ ಯಶಸ್ವಿಯಾಗಿವೆ. ಸುರತ್ಕಲ್ ಠಾಣೆಯ ರೌಡಿ ಶೀಟರ್ ಹಾಗೂ ಬಜರಂಗದಳದಲ್ಲಿ ಸಕ್ರಿಯನಾಗಿರುವ ಗುರುರಾಜ್, ಆತನ ಸ್ನೇಹಿತ ಅಲೆಕ್ಸ್ ಸಂತೋಷ್, ಸುಶಾಂತ್ ಮತ್ತು ನಿತಿನ್ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳು ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT