ಸಂಗ್ರಹ ಚಿತ್ರ 
ರಾಜ್ಯ

ಟೋಲ್ ಮಾರ್ಗ ತಪ್ಪಿಸಿದ್ದಕ್ಕೆ ಮಾತಿನ ಚಕಮಕಿ: ಕಾಲೇಜು ವಿದ್ಯಾರ್ಥಿ ಮೇಲೆ ಕ್ಯಾಬ್ ಚಾಲಕ ಹಲ್ಲೆ, ಬಂಧನ

ಪಶ್ಚಿಮ ಬಂಗಾಳ ಮೂಲದ ಯುವತಿ ಬೆಂಗಳೂರಿನ ಖಾಸಗಿ ವಿಶ್ವವಿದ್ಯಾಲಯದಲ್ಲಿ ಪದವಿ ವ್ಯಾಸಾಂಗ ಮಾಡುತ್ತಿದ್ದಾರೆ. ಯುವತಿ ವಿಮಾನ ನಿಲ್ದಾಣಕ್ಕೆ ತೆರಳಲು ಕ್ಯಾಬ್ ಬುಕ್ ಮಾಡಿದ್ದಳು. ಪ್ರಯಾಣದ ಸಮಯದಲ್ಲಿ ಟೋಲ್ ಶುಲ್ಕ ಪಾವತಿಸಿದ್ದರೂ ಚಾಲಕ ಟೋಲ್ ರಸ್ತೆಯನ್ನು ತಪ್ಪಿಸಿದ್ದಾನೆ.

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ವೇಳೆ ಟೋಲ್ ಮಾರ್ಗವನ್ನು ತಪ್ಪಿಸಿದ್ದಕ್ಕೆ ಮಾತಿನ ಚಕಮಕಿಕ ನಡೆಸಿದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಕ್ಯಾಬ್ ಚಾಲಕನನ್ನು ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.

ಅಕ್ಟೋಬರ್ 20ರಂದು ಘಟನೆ ನಡೆದಿದ್ದು, ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಕ್ಯಾಬ್ ಚಾಲಕನನ್ನು ಕೇರಳದ ತ್ರಿಶೂರ್ ಮೂಲದ ಅಜಾಸ್ ಪಿ ಎಸ್ (31) ಎಂದು ಗುರುತಿಸಲಾಗಿದೆ. ಸಂತ್ರಸ್ತೆ ಚಿಕ್ಕಪ್ಪ ನೀಡಿದ ದೂರಿನ ಮೇರೆಗೆ ಅಜಾಸ್ ನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಪಶ್ಚಿಮ ಬಂಗಾಳ ಮೂಲದ ಯುವತಿ ಬೆಂಗಳೂರಿನ ಖಾಸಗಿ ವಿಶ್ವವಿದ್ಯಾಲಯದಲ್ಲಿ ಪದವಿ ವ್ಯಾಸಾಂಗ ಮಾಡುತ್ತಿದ್ದಾರೆ. ಯುವತಿ ವಿಮಾನ ನಿಲ್ದಾಣಕ್ಕೆ ತೆರಳಲು ಕ್ಯಾಬ್ ಬುಕ್ ಮಾಡಿದ್ದಳು. ಪ್ರಯಾಣದ ಸಮಯದಲ್ಲಿ ಟೋಲ್ ಶುಲ್ಕ ಪಾವತಿಸಿದ್ದರು, ಚಾಲಕ ಟೋಲ್ ರಸ್ತೆಯನ್ನು ತಪ್ಪಿಸಿದ್ದಾನೆ.

ಹೀಗಾಗಿ ಯುವತಿ ಪ್ರಶ್ನಿಸಿದ್ದು, ಇದಕ್ಕೆ ಸರಿಯಾದ ವಿವರಣೆ ನೀಡಿಲ್ಲ. ಹೀಗಾಗಿ ವಾಹನ ನಿಲ್ಲಿಸುವಂತೆ ಹೇಳಿದ್ದಾಳೆ. ಈ ವೇಳೆ ಚಾಲಕ ಮಾತಿನ ಚಕಮಕಿ ನಡೆಸಿದ್ದಾನೆ. ಬಳಿಕ ಕ್ಯಾಬ್ ನಿಂದ ಕೆಳಗಿಳಿದ ವಿದ್ಯಾರ್ಥಿನಿ ಮತ್ತೊಂದು ಕ್ಯಾಬ್ ಬುಕ್ ಮಾಡಿದ್ದು, ಹತ್ತಲು ಮುಂದಾದಾಗ ಹಲ್ಲೆ ನಡೆಸಿದ್ದಾನೆಂದು ದೂರಿನಲ್ಲಿ ತಿಳಿಸಿದ್ದಾರೆ.

ಘಟನೆ ಬಳಿಕ ವಿದ್ಯಾರ್ಥಿನಿ ತನ್ನ ವಸ್ತುಗಳನ್ನು ಸ್ಥಳದಲ್ಲೇ ಬಿಟ್ಟು, ಹೊರಟುಹೋಗಿದ್ದಾಳೆ. ಚಾಲಕ ಕೂಡ ಸ್ಥಳದಿಂದ ಪರಾಗಿಯಾಗಿದ್ದಾನೆಂದು ಹೇಳಿದ್ದಾರೆ.

ದೂರು ಹಿನ್ನೆಲೆ ಪೊಲೀಸರು, ಚಾಲಕನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್'ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿ 2 ದಿನಗಳ ಹಿಂದಷ್ಟೇ ಕೇರಳದಿಂದ ಬೆಂಗಳೂರಿಗೆ ಬಂದಿದ್ದು, ಬುಕಿಂಗ್ ಸ್ವೀಕರಿಸಿದಾಗ ಆತ ಮದ್ಯದ ಪ್ರಭಾವದಲ್ಲಿದ್ದ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಡಿಯಾ ಬ್ಲಾಕ್ ಪ್ರಣಾಳಿಕೆ 'ಬಿಹಾರ್ ಕಾ ತೇಜಸ್ವಿ ಪ್ರಾಣ್' ಬಿಡುಗಡೆ; ಪ್ರತಿ ಕುಟುಂಬಕ್ಕೂ ಸರ್ಕಾರಿ ನೌಕರಿ ಭರವಸೆ!

ಕೇಂದ್ರ ಚುನಾವಣಾ ಆಯುಕ್ತರು ರಾಜಕೀಯ ಪುಢಾರಿ: ನಾಲಿಗೆ ಹರಿಬಿಟ್ಟ ಯತೀಂದ್ರ ಸಿದ್ದರಾಮಯ್ಯ

Video: ವಿಧ್ವಂಸಕಾರಿ Melissa ಚಂಡಮಾರುತದ ಒಳಗೇ ನುಗ್ಗಿದ ಅಮೆರಿಕ ವಾಯುಪಡೆ ವಿಮಾನ, ಮುಂದೇನಾಯ್ತು..? ಒಳಗೇನಿತ್ತು?

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: 8ನೇ ವೇತನ ಆಯೋಗ ರಚನೆ; 18 ತಿಂಗಳ ಗಡುವು

ಬೆಳಗಾವಿ: ಲಾಡ್ಜ್‌ನಲ್ಲಿ ಪ್ರೇಯಸಿ ಜೊತೆ ಸರಸ; ರೆಡ್‌ಹ್ಯಾಂಡ್‌ ಆಗಿ ಪತ್ನಿ ಕೈಗೆ ಸಿಕ್ಕಿಬಿದ್ದ ಪತಿ; Video ವೈರಲ್!

SCROLL FOR NEXT