ಮಳೆಯ ಸಾಂದರ್ಭಿಕ ಚಿತ್ರ  
ರಾಜ್ಯ

Karnataka Rains: ವಾಯುಭಾರ ಕುಸಿತ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಮಳೆ

ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಹವಾಮಾನದಲ್ಲಿ ಬದಲಾವಣೆ ಆಗಿದೆ. ಅ. 27 ರಂದು ಭಾರೀ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು: ದೀಪಾವಳಿ ಹಬ್ಬ ಮುಗಿದರೂ ಮಳೆಯಾಗುತ್ತಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರದ ಮಟ್ಟಿಗೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳ ಬಹುತೇಕ ಕಡೆ, ಉತ್ತರ ಒಳನಾಡು ಕೆಲವು ಕಡೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಹವಾಮಾನದಲ್ಲಿ ಬದಲಾವಣೆ ಆಗಿದೆ. ಅ. 27 ರಂದು ಭಾರೀ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಸಹಜವಾಗಿದ್ದು, ಹಗುರದಿಂದ ಸಾಧಾರಣ ಮಳೆ ಸರ್ವೇ ಸಾಮಾನ್ಯವಾಗಿದೆ. ಬೆಂಗಳೂರಿಗೆ ಅಕ್ಟೋಬರ್ 25 ಹಾಗೂ 26 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಕರ್ನಾಟಕದ ಜಿಲ್ಲೆಗಳಿಗೆ ಅಕ್ಟೋಬರ್ 26 ರಂದು ಯೆಲ್ಲೋ ಹಾಗೂ 27 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಒಟ್ಟಿನಲ್ಲಿ, ಮುಂದಿನ ಏಳು ದಿನಗಳ ಕಾಲ ಕರ್ನಾಟಕದ ವಿವಿಧೆಡೆ ವರ್ಷಧಾರೆ ಬಹುತೇಕ ಖಚಿತ ಎಂಬ ಸುಳಿವನ್ನು ಹವಾಮಾನ ಇಲಾಖೆ ನೀಡಿದೆ.

ಅಕ್ಟೋಬರ್ 24 ರಿಂದ ನವೆಂಬರ್ 2 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಕೆಲವೊಮ್ಮೆ ವ್ಯಾಪಕವಾಗಿ ಹಾಗೂ ಕೆಲವೊಮ್ಮೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಅಕ್ಟೋಬರ್ 28 ರಂದು ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಎಕ್ಸ್ ಸಂದೇಶದಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video