ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: 7 ವರ್ಷದ ಬಾಲಕಿಯನ್ನು ಕೊಚ್ಚಿ ಕೊಂದ ಮಲತಂದೆ! ಪ್ರಕರಣ ದಾಖಲು

ಆಕೆಯ ದೂರಿನ ಆಧಾರದ ಮೇಲೆ ಕುಂಬಳಗೂಡು ಪೊಲೀಸ್ ಠಾಣೆಯಲ್ಲಿ ದರ್ಶನ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು: ಏಳು ವರ್ಷದ ಬಾಲಕಿಯನ್ನು ಆಕೆಯ ಮಲತಂದೆಯೇ ಕೊಚ್ಚಿ ಕೊಲೆಗೈದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಶುಕ್ರವಾರ ಸಂಜೆ ಮಗುವಿನ ತಾಯಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮನೆಗೆ ಹಿಂದಿರುಗಿದಾಗ ಮಹಿಳೆ ತನ್ನ ಮಗಳು ಸಿರಿ ಶವವನ್ನು ನೋಡಿದ್ದು, ಘಟನೆಯ ನಂತರ ತಲೆಮರೆಸಿಕೊಂಡಿರುವ ಪತಿ ದರ್ಶನ್ ಕೊಲೆ ಮಾಡಿರಬಹುದೆಂದು ಶಂಕಿಸಿದ್ದಾರೆ.

ಆಕೆಯ ದೂರಿನ ಆಧಾರದ ಮೇಲೆ ಕುಂಬಳಗೂಡು ಪೊಲೀಸ್ ಠಾಣೆಯಲ್ಲಿ ದರ್ಶನ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಿಂದ ಆತ ಬಾಲಕಿಯನ್ನು ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಆದಾಗ್ಯೂ, ಆಕೆಯ ಸಾವಿಗೆ ನಿಖರವಾದ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ ಎಂದು ಅವರು ಹೇಳಿದರು.

ಸುಮಾರು ನಾಲ್ಕು ತಿಂಗಳ ಹಿಂದೆ ವಿವಾಹವಾದ ದಂಪತಿಗಳು ಆಗಾಗ್ಗೆ ಜಗಳವಾಡುತ್ತಿದ್ದರು. ಕೌಟುಂಬಿಕ ಸಮಸ್ಯೆಗಳಿದ್ದವು. ಹೀಗಾಗಿ ಈ ಕೊಲೆ ನಡೆದಿರಬಹುದು ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.

ಆದರೆ, ಆರೋಪಿಯನ್ನು ಬಂಧಿಸಿದ ನಂತರ ನಿಖರ ಉದ್ದೇಶ ತಿಳಿಯಲಿದ್ದು, ಆತನ ಪತ್ತೆಗೆ ಪ್ರಯತ್ನ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!