ಸಾಂದರ್ಭಿಕ ಚಿತ್ರ 
ರಾಜ್ಯ

ಬೀದರ್ ಜಿಲ್ಲೆಯಲ್ಲಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 2.9 ಪ್ರಮಾಣದ ತೀವ್ರತೆ ದಾಖಲು!

ಚಿಟಗುಪ್ಪಾ ತಾಲೂಕಿನ ಭಾಸ್ಕರ್‌ನಗರ ಹಳ್ಳಿಯಲ್ಲಿ ಭೂಮಿ ಕಂಪಿಸಿರುವುದಾಗಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಭೂಕಂಪನ ಕೇಂದ್ರ ತಿಳಿಸಿದೆ.

ಬೀದರ್: ಗಡಿ ಜಿಲ್ಲೆ ಬೀದರ್ ನಲ್ಲಿ ಭಾನುವಾರ ಮುಂಜಾನೆ ಭೂಕಂಪನದ ಅನುಭವವಾಗಿದೆ. ಇಂದು ಬೆಳಗಿನ ಜಾವ 3-42 ಗಂಟೆಗೆ ಲಘು ಭೂಕಂಪದ ಅನುಭವದಿಂದ ಜನರು ಕೆಲಕಾಲ ಆತಂಕಕ್ಕೊಳಗಾದರು.

ಚಿಟಗುಪ್ಪಾ ತಾಲೂಕಿನ ಭಾಸ್ಕರ್‌ನಗರ ಹಳ್ಳಿಯಲ್ಲಿ ಭೂಮಿ ಕಂಪಿಸಿರುವುದಾಗಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಭೂಕಂಪನ ಕೇಂದ್ರ ತಿಳಿಸಿದೆ.

ರಿಕ್ಟರ್ ಮಾಪಕದಲ್ಲಿ 2.9 ಪ್ರಮಾಣದಲ್ಲಿ ಕಂಪನದ ತೀವ್ರತೆ ದಾಖಲಾಗಿದೆ.

ಭಾಸ್ಕರ್ ನಗರ ಸುತ್ತಮುತ್ತಲಿನ 30 ರಿಂದ 40 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿದ ವರದಿಯಾಗಿದೆ. ಇದರಿಂದ ಗ್ರಾಮಸ್ಥರು ಭಯಭೀತಿಗೊಂಡಿದ್ದರು. ಆದರೆ ಲಘು ಭೂಕಂಪನದಿಂದ ಯಾವುದೇ ಹಾನಿ ಆಗಿಲ್ಲ ಎಂದು ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಭೂಕಂಪನ ಕೇಂದ್ರ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

Ranji Trophy final: ಮೊದಲ ದಿನ ಬಲಿಷ್ಠ ಕರ್ನಾಟಕ ವಿರುದ್ಧ ಪ್ರಾಬಲ್ಯ ಸಾಧಿಸಿದ ಜಮ್ಮು ಕಾಶ್ಮೀರ!

ಬೆಂಗಳೂರಿನಲ್ಲಿ ನಕಲಿ ಕಾಲ್ ಸೆಂಟರ್ ಮೇಲೆ ಪೊಲೀಸ್ ದಾಳಿ; ಇಬ್ಬರ ಬಂಧನ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಮ್ಯೂಸಿಕ್ ಮೈಲಾರಿಗೆ ಬಿಗ್ ರಿಲೀಫ್; ಜಾಮೀನು ಮಂಜೂರು

ಮದುವೆಯಾದ ಎರಡೇ ದಿನಕ್ಕೆ ವಧು ನಿಗೂಢ ಸಾವು; ವರದಕ್ಷಿಣೆ ಹತ್ಯೆ ಎಂದು ಕುಟುಂಬ ಆರೋಪ

SCROLL FOR NEXT