ಸಾಂದರ್ಭಿಕ ಚಿತ್ರ 
ರಾಜ್ಯ

ಬೀದರ್ ಜಿಲ್ಲೆಯಲ್ಲಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 2.9 ಪ್ರಮಾಣದ ತೀವ್ರತೆ ದಾಖಲು!

ಚಿಟಗುಪ್ಪಾ ತಾಲೂಕಿನ ಭಾಸ್ಕರ್‌ನಗರ ಹಳ್ಳಿಯಲ್ಲಿ ಭೂಮಿ ಕಂಪಿಸಿರುವುದಾಗಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಭೂಕಂಪನ ಕೇಂದ್ರ ತಿಳಿಸಿದೆ.

ಬೀದರ್: ಗಡಿ ಜಿಲ್ಲೆ ಬೀದರ್ ನಲ್ಲಿ ಭಾನುವಾರ ಮುಂಜಾನೆ ಭೂಕಂಪನದ ಅನುಭವವಾಗಿದೆ. ಇಂದು ಬೆಳಗಿನ ಜಾವ 3-42 ಗಂಟೆಗೆ ಲಘು ಭೂಕಂಪದ ಅನುಭವದಿಂದ ಜನರು ಕೆಲಕಾಲ ಆತಂಕಕ್ಕೊಳಗಾದರು.

ಚಿಟಗುಪ್ಪಾ ತಾಲೂಕಿನ ಭಾಸ್ಕರ್‌ನಗರ ಹಳ್ಳಿಯಲ್ಲಿ ಭೂಮಿ ಕಂಪಿಸಿರುವುದಾಗಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಭೂಕಂಪನ ಕೇಂದ್ರ ತಿಳಿಸಿದೆ.

ರಿಕ್ಟರ್ ಮಾಪಕದಲ್ಲಿ 2.9 ಪ್ರಮಾಣದಲ್ಲಿ ಕಂಪನದ ತೀವ್ರತೆ ದಾಖಲಾಗಿದೆ.

ಭಾಸ್ಕರ್ ನಗರ ಸುತ್ತಮುತ್ತಲಿನ 30 ರಿಂದ 40 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿದ ವರದಿಯಾಗಿದೆ. ಇದರಿಂದ ಗ್ರಾಮಸ್ಥರು ಭಯಭೀತಿಗೊಂಡಿದ್ದರು. ಆದರೆ ಲಘು ಭೂಕಂಪನದಿಂದ ಯಾವುದೇ ಹಾನಿ ಆಗಿಲ್ಲ ಎಂದು ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಭೂಕಂಪನ ಕೇಂದ್ರ ಮಾಹಿತಿ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕೇಜ್ರಿವಾಲ್ ಗೆ ಬೇಲ್, SIR, ಆರ್ಟಿಕಲ್ 370, ವಾಕ್ ಸ್ವಾತಂತ್ರ್ಯದ ಬಗ್ಗೆ ತೀರ್ಪು....: ನೂತನ ಸಿಜೆಐ ಟ್ರ್ಯಾಕ್ ರೆಕಾರ್ಡ್ ಹೀಗಿದೆ....

ಗುನಾದಲ್ಲಿ Thar ಕಾರ್ ಗುದ್ದಿಸಿ ರೈತನ ಕೊಂದ BJP ಮುಖಂಡ: ಹೆಣ್ಣುಮಕ್ಕಳ ಬಟ್ಟೆ ಹರಿದು ನೀಚ ಕೃತ್ಯ, 14 ಮಂದಿ ವಿರುದ್ಧ FIR!

ಬೆಂಗಳೂರು: ಖಾಸಗಿ ಕಂಪನಿಯ ಬ್ಯಾಂಕ್ ಖಾತೆ ಹ್ಯಾಕ್ ಮಾಡಿ 48 ಕೋಟಿ ರೂ. ವಂಚನೆ; ಇಬ್ಬರ ಬಂಧನ

ಅಧಿಕಾರಿಗಳು ಪತ್ರಿಕೆ ಓದಿಲ್ಲವೇ? ದೇಶವನ್ನು ಕೆಟ್ಟದಾಗಿ ತೋರಿಸಲಾಗುತ್ತಿದೆ; ಬೀದಿ ನಾಯಿಗಳ ಬಗ್ಗೆ ವರದಿ ಸಲ್ಲಿಸದ ರಾಜ್ಯಗಳಿಗೆ 'ಸುಪ್ರೀಂ' ಛೀಮಾರಿ

CJI ವಿರುದ್ಧ ಶೂ ಎಸೆತ: ವಕೀಲ ರಾಕೇಶ್ ಕಿಶೋರ್ ವಿರುದ್ಧ ಕ್ರಮ ಕೈಬಿಟ್ಟ ಸುಪ್ರೀಂ ಕೋರ್ಟ್; ಇದೇ ನಿಜವಾದ ಕಾರಣ!

SCROLL FOR NEXT