ಪರಪ್ಪನ ಅಗ್ರಹಾರ ಕೇಂದ್ರೀಯ ಕಾರಾಗೃಹ 
ರಾಜ್ಯ

ಪರಪ್ಪನ ಅಗ್ರಹಾರ ಕಾರಾಗೃಹ: ಒಳ ಉಡುಪಿನಲ್ಲಿ ಮೊಬೈಲ್ ಕಳ್ಳ ಸಾಗಣೆಗೆ ಯತ್ನ; ಜೈಲು ವೀಕ್ಷಕ ಬಂಧನ

ಅಮರ್ ಅಕ್ಟೋಬರ್‌ 23ರಂದು ಕರ್ತವ್ಯಕ್ಕೆ ಆಗಮಿಸಿದ್ದಾನೆ. ಈ ವೇಳೆ ಪ್ರವೇಶದ್ವಾರದಲ್ಲಿದ್ದ ಕೆಎಸ್‌ಐಎಸ್‌ಎಫ್ ಸಿಬ್ಬಂದಿ ತಪಾಸಣೆಗೆ ಒಳಪಡಿಸಲು ಮುಂದಾಗಿದ್ದಾರೆ.

ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಒಳ ಉಡುಪಿನಲ್ಲಿಟ್ಟುಕೊಂಡು ಮೊಬೈಲ್ ಕಳ್ಳಸಾಗಣೆ ಮಾಡುತತಿದ್ದ ಜೈಲಿನ ವೀಕ್ಷಕನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತ ಜೈಲು ಸಿಬ್ಬಂದಿಯನ್ನು ಅಮರ್ ಪ್ರಾಂಜೆ (29) ಎಂದು ಗುರ್ತಿಸಲಾಗಿದೆ. ಅಮರ್ ಅಕ್ಟೋಬರ್‌ 23ರಂದು ಕರ್ತವ್ಯಕ್ಕೆ ಆಗಮಿಸಿದ್ದಾನೆ. ಈ ವೇಳೆ ಪ್ರವೇಶದ್ವಾರದಲ್ಲಿದ್ದ ಕೆಎಸ್‌ಐಎಸ್‌ಎಫ್ ಸಿಬ್ಬಂದಿ ತಪಾಸಣೆಗೆ ಒಳಪಡಿಸಲು ಮುಂದಾಗಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಆತ ವಾಪಸ್‌ ಹೋಗಲು ಮುಂದಾಗಿದ್ದಾನೆ.

ಇದರಿಂದ ಅನುಮಾನಗೊಂಡ ಸಿಬ್ಬಂದಿ ಅವನನ್ನು ಹಿಡಿದು ತಪಾಸಣೆ ನಡೆಸಿದಾಗ ಒಳುಡುಪಿನಲ್ಲಿ ಒಂದು ಸ್ಮಾರ್ಟ್‌ಫೋನ್‌, ಇಯರ್‌ ಫೋನ್‌ ಪತ್ತೆಯಾಗಿದೆ.

ತಕ್ಷಣ ಜೈಲಿನ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಅಮರ್ ಪ್ರಾಂಜೆಯನ್ನ ಬಂಧಿಸಿದ್ದಾರೆ. ಈ ಸಂಬಂಧ ಜೈಲು ಅಧೀಕ್ಷಕ ಹೆಚ್.ಎ ಪರಮೇಶ್ ನೀಡಿದ ದೂರಿನ ಮೇರೆಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವ್ಯಕ್ತಿಯ ವಿರುದ್ಧ ಕರ್ನಾಟಕ ಕಾರಾಗೃಹ ಕಾಯ್ದೆಯ ಸೆಕ್ಷನ್ 42 ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 323 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನವದೆಹಲಿ: ಸಿಎಂ ಬದಲಾವಣೆ ವದಂತಿ; 'ಅಡ್ಡ ಗೋಡೆ ಮೇಲೆ ದೀಪ' ಇಟ್ಟಂತೆ ಮಾತನಾಡಿದ DCM ಡಿ.ಕೆ ಶಿವಕುಮಾರ್! Video

Vijay Hazare Trophy: ಲಿಸ್ಟ್ ಎ ಕ್ರಿಕೆಟ್​ನಲ್ಲೂ ಇತಿಹಾಸ ಸೃಷ್ಟಿಸಿದ Virat Kohli; ಸಚಿನ್ ದಾಖಲೆಗಳು ಉಡೀಸ್!

ಬಾಗಲಕೋಟೆ: ಚುನಾವಣೆಯಲ್ಲಿ ಮುಸ್ಲಿಮರನ್ನು ಬೇಕಂತಲೆ ಸೋಲಿಸ್ತಾರೆ; 1 ಕೋಟಿ ಜನಸಂಖ್ಯೆಗೆ 10 MLA ಸಾಕಾ?: ಮಹೇಶ್ವರಾನಂದ ಸ್ವಾಮೀಜಿ

Video: ಮೊರಾರ್ಜಿ ಶಾಲಾ ಆವರಣಕ್ಕೆ ನುಗ್ಗಿದ ಒಂಟಿ ಸಲಗ, ಬೆಚ್ಚಿ ಬಿದ್ದ ವಿದ್ಯಾರ್ಥಿಗಳು!

Year Ender 2025: ಈ ವರ್ಷ ಸ್ವಿಗ್ಗಿಯಲ್ಲಿ ಪ್ರತಿ ಸೆಕೆಂಡಿಗೆ 3.25 ಬಿರಿಯಾನಿ ಆರ್ಡರ್‌!

SCROLL FOR NEXT