ಪರಪ್ಪನ ಅಗ್ರಹಾರ ಕೇಂದ್ರೀಯ ಕಾರಾಗೃಹ 
ರಾಜ್ಯ

ಪರಪ್ಪನ ಅಗ್ರಹಾರ ಕಾರಾಗೃಹ: ಒಳ ಉಡುಪಿನಲ್ಲಿ ಮೊಬೈಲ್ ಕಳ್ಳ ಸಾಗಣೆಗೆ ಯತ್ನ; ಜೈಲು ವೀಕ್ಷಕ ಬಂಧನ

ಅಮರ್ ಅಕ್ಟೋಬರ್‌ 23ರಂದು ಕರ್ತವ್ಯಕ್ಕೆ ಆಗಮಿಸಿದ್ದಾನೆ. ಈ ವೇಳೆ ಪ್ರವೇಶದ್ವಾರದಲ್ಲಿದ್ದ ಕೆಎಸ್‌ಐಎಸ್‌ಎಫ್ ಸಿಬ್ಬಂದಿ ತಪಾಸಣೆಗೆ ಒಳಪಡಿಸಲು ಮುಂದಾಗಿದ್ದಾರೆ.

ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಒಳ ಉಡುಪಿನಲ್ಲಿಟ್ಟುಕೊಂಡು ಮೊಬೈಲ್ ಕಳ್ಳಸಾಗಣೆ ಮಾಡುತತಿದ್ದ ಜೈಲಿನ ವೀಕ್ಷಕನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತ ಜೈಲು ಸಿಬ್ಬಂದಿಯನ್ನು ಅಮರ್ ಪ್ರಾಂಜೆ (29) ಎಂದು ಗುರ್ತಿಸಲಾಗಿದೆ. ಅಮರ್ ಅಕ್ಟೋಬರ್‌ 23ರಂದು ಕರ್ತವ್ಯಕ್ಕೆ ಆಗಮಿಸಿದ್ದಾನೆ. ಈ ವೇಳೆ ಪ್ರವೇಶದ್ವಾರದಲ್ಲಿದ್ದ ಕೆಎಸ್‌ಐಎಸ್‌ಎಫ್ ಸಿಬ್ಬಂದಿ ತಪಾಸಣೆಗೆ ಒಳಪಡಿಸಲು ಮುಂದಾಗಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಆತ ವಾಪಸ್‌ ಹೋಗಲು ಮುಂದಾಗಿದ್ದಾನೆ.

ಇದರಿಂದ ಅನುಮಾನಗೊಂಡ ಸಿಬ್ಬಂದಿ ಅವನನ್ನು ಹಿಡಿದು ತಪಾಸಣೆ ನಡೆಸಿದಾಗ ಒಳುಡುಪಿನಲ್ಲಿ ಒಂದು ಸ್ಮಾರ್ಟ್‌ಫೋನ್‌, ಇಯರ್‌ ಫೋನ್‌ ಪತ್ತೆಯಾಗಿದೆ.

ತಕ್ಷಣ ಜೈಲಿನ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಅಮರ್ ಪ್ರಾಂಜೆಯನ್ನ ಬಂಧಿಸಿದ್ದಾರೆ. ಈ ಸಂಬಂಧ ಜೈಲು ಅಧೀಕ್ಷಕ ಹೆಚ್.ಎ ಪರಮೇಶ್ ನೀಡಿದ ದೂರಿನ ಮೇರೆಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವ್ಯಕ್ತಿಯ ವಿರುದ್ಧ ಕರ್ನಾಟಕ ಕಾರಾಗೃಹ ಕಾಯ್ದೆಯ ಸೆಕ್ಷನ್ 42 ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 323 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಾರತವನ್ನು ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ?' ಲೋಕಸಭೆಯಲ್ಲಿ ರಾಹುಲ್ ಗಾಂಧಿ ಬೆಂಕಿ ಭಾಷಣ!

ಬೆಂಗಳೂರಿನಲ್ಲಿ ದಾರುಣ ಘಟನೆ: ಶಾಲಾ ಬಸ್ ಹರಿದು ತಂದೆಯ ಕಣ್ಣೆದುರೇ ವಿಲವಿಲ ಒದ್ದಾಡಿ ಪ್ರಾಣಬಿಟ್ಟ ಕಂದಮ್ಮಗಳು!

ಮುಂಬೈ ಮೇಯರ್‌ ಆಗಿ ರೀತು ತಾವ್ಡೆ ಅವಿರೋಧ ಆಯ್ಕೆ: 4 ದಶಕಗಳ ನಂತರ ಬಿಜೆಪಿಗೆ ಒಲಿದ ಪಟ್ಟ!

ಭಾರತಕ್ಕೆ ರಾಜತಾಂತ್ರಿಕ ಜಯ: ಫ್ಯಾಕ್ಟ್‌ಶೀಟ್‌ನಲ್ಲಿ ‘ದ್ವಿದಳ ಧಾನ್ಯಗಳು’ ಉಲ್ಲೇಖ ಕೈಬಿಟ್ಟ ಅಮೆರಿಕಾ..!

ಲೋಕಸಭೆ ಕಲಾಪಕ್ಕೆ ಪ್ರಧಾನಿ ಗೈರು: ಮೋದಿ ಮೇಲೆ ದಾಳಿಗೆ ಸಿದ್ಧರಾಗಿದ್ದ 'ಕೈ' ಮಹಿಳಾ ಸಂಸದರು? ಸಂಸತ್ ಆವರಣದಲ್ಲಿ ನಿಜವಾಗಿ ನಡೆದಿದ್ದೇನು? Video

SCROLL FOR NEXT