ಡಿಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ 
ರಾಜ್ಯ

ಬಿಹಾರ ಚುನಾವಣೆ ಫಲಿತಾಂಶ ಮರುದಿನವೇ ದೆಹಲಿಗೆ ಸಿದ್ದರಾಮಯ್ಯ ಭೇಟಿ: ತೀವ್ರ ಕುತೂಹಲ

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ನ.14ರಂದು ಪ್ರಕಟವಾಗಲಿದ್ದು, ಅದಾದ ಮರುದಿನವೇ ಅಂದರೆ ನ.15ರಂದು ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ 2-3 ದಿನಗಳ ಕಾಲ ಅಲ್ಲೇ ಉಳಿಯಲಿದ್ದಾರೆಂದು ಹೇಳಲಾಗುತ್ತಿದೆ.

ಬೆಂಗಳೂರು: ರಾಜ್ಯ ಸಚಿವ ಪುನಾರಚನೆ ಹಾಗೂ ನವೆಂಬರ್ ಕ್ರಾಂತಿ ವದಂತಿ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.15ರಂದು ದೆಹಲಿಗೆ ಭೇಟಿ ನೀಡಲಿದ್ದಾರೆಂದು ಹೇಳಲಾಗುತ್ತಿದೆ. ಭೇಟಿ ಕುರಿತು ಊಹಾಪೋಹಗಳು ಹೆಚ್ಚಾಗಿವೆ.

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ನ.14ರಂದು ಪ್ರಕಟವಾಗಲಿದ್ದು, ಅದಾದ ಮರುದಿನವೇ ಅಂದರೆ ನ.15ರಂದು ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ 2-3 ದಿನಗಳ ಕಾಲ ಅಲ್ಲೇ ಉಳಿಯಲಿದ್ದಾರೆಂದು ಹೇಳಲಾಗುತ್ತಿದೆ.

ಹಿರಿಯ ನಾಯಕ ಕಪಿಲ್‌ ಸಿಬಲ್‌ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ. ಆದರೆ, ಪುಸ್ತಕ ಬಿಡುಗಡೆಗೆ ತೆರಳಲಿರುವವರು ಮೂರು ದಿನ ಅಲ್ಲೇ ಉಳಿದುಕೊಳ್ಳುವ ಚಿಂತನೆಯನ್ನೂ ಹೊಂದಿರುವುದರಿಂದ ಕುತೂಹಲಗಳು ಹೆಚ್ಚಾಗಿವೆ.

ಈ ಮೂರು ದಿನಗಳ ಭೇಟಿ ವೇಳೆ ಸಿದ್ದರಾಮಯ್ಯ ಅವರು ಹೈಕಮಾಂಡ್‌ ನಾಯಕರನ್ನು ಭೇಟಿಯಾಗುವ ಸಾಧ್ಯತೆ ಇದ್ದು, ಈ ವೇಳೆ ಸಂಪುಟ ವಿಸ್ತರಣೆ/ಪುನರ್‌ ರಚನೆ ಕುರಿತು ಮಹತ್ವದ ಮಾತುಕತೆ ನಡೆಸಲಿದ್ದಾರೆಂದು ಮೂಲಗಳು ತಿಳಿಸಿವೆ.

ಏತನ್ಮಧ್ಯೆ ಚನ್ನಮ್ಮನ ಕಿತ್ತೂರಿನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಸಂಪುಟ ಪುನಾರಚನೆ/ವಿಸ್ತರಣೆ ಕುರಿತ ವದಂತಿಯನ್ನು ಖಚಿತಪಡಿಸಿದ್ದಾರೆ.

ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ದೆಹಲಿಗೆ ಹೋಗುತ್ತಿದ್ದೇನೆ. ಅಲ್ಲಿಗೆ ಹೋದಾಗಲೆಲ್ಲ ನಾಯಕರನ್ನು ಭೇಟಿಯಾಗಿ ಹಲವು ವಿಷಯಗಳ ಬಗ್ಗೆ ಚರ್ಚಿಸುತ್ತೇನೆ. ನಮ್ಮ ರಾಜ್ಯದಲ್ಲಿ ನಡೆಯುತ್ತಿರುವ ಆಡಳಿತದ ಬಗ್ಗೆ ತಿಳಿಸುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದ್ದಾರೆ.

ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲ ಅಧಿವೇಶನ ಕುರಿತು ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನಿಸುತ್ತೇವೆ. ಅದೇ ರೀತಿ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಿರುವಂತೆ ಕಿತ್ತೂರು ಕರ್ನಾಟಕಕ್ಕೂ ಸ್ಥಾಪಿಸಲು ಪರಿಶೀಲಿಸಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ ಪಂಚಾಯಿತಿ ಪ್ರತಿನಿಧಿಗಳಿಗೆ ಭತ್ಯೆ ಹೆಚ್ಚಳ, ಪಿಂಚಣಿ, ವಿಮೆ ಸೌಲಭ್ಯ: ತೇಜಸ್ವಿ ಯಾದವ್

ದೆಹಲಿಗೆ ಭೇಟಿ ನೀಡುವುದು ಸಾಮಾನ್ಯ, ಸಂಪುಟ ಪುನರ್ ರಚನೆ ಕುರಿತು ಸಿಎಂ ಮಾತನಾಡುತ್ತಾರೆ: ಡಿಕೆ ಶಿವಕುಮಾರ್

Cabinet reshuffle: ಡಿಸೆಂಬರ್ ನಲ್ಲಿ ಸಚಿವ ಸಂಪುಟ ಪುನಾರಚನೆ; ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ರಾ?

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ವಿಫಲರಾಗಬೇಕೆಂದು ಬಯಸುವ ಆಯ್ಕೆದಾರರು ಇದ್ದಾರೆ: ಮೊಹಮ್ಮದ್ ಕೈಫ್

ಅಮೆರಿಕ ಬೆದರಿಕೆಗೆ ಬಗ್ಗದ ಭಾರತ; ಅಕ್ಟೋಬರ್ ನಲ್ಲಿ ರಷ್ಯಾದಿಂದ ತೈಲ ಆಮದು ಪ್ರಮಾಣ ಇನ್ನೂ ಹೆಚ್ಚಳ!

SCROLL FOR NEXT