ಕಂದಾಯ ಸಚಿವ ಕೃಷ್ಣ ಬೈರೇಗೌಡ 
ರಾಜ್ಯ

ಚುನಾವಣಾ ಆಯೋಗ BJP ಅಂಗಸಂಸ್ಥೆಯಂತೆ ಕೆಲಸ ಮಾಡುತ್ತಿದೆ: ಸಚಿವ ಕೃಷ್ಣ ಬೈರೇಗೌಡ

ಚುನಾವಣಾ ಆಯೋಗ ಬಿಜೆಪಿಯ ಅಂಗಸಂಸ್ಥೆಯಂತೆ ಕೆಲಸ ಮಾಡುತ್ತಿದೆ. ಪರಿಣಾಮ ಇಡೀ ದೇಶದ ಚುನಾವಣಾ ಪ್ರಕ್ರಿಯೆಯೇ ಬುಡಮೇಲಾಗಿದೆ.

ಬೆಂಗಳೂರು: ಚುನಾವಣಾ ಆಯೋಗ ಬಿಜೆಪಿಯ ಅಂಗಸಂಸ್ಥೆಯಂತೆ ಕೆಲಸ ಮಾಡುತ್ತಿದ್ದು, ಬಿಜೆಪಿ ಮತ್ತು ಭಾರತ ಚುನಾವಣಾ ಆಯೋಗವು ದೇಶದ ಚುನಾವಣಾ ವ್ಯವಸ್ಥೆಯನ್ನು ನಾಶಮಾಡಲು ಪ್ರಯತ್ನಿಸುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಶನಿವಾರ ಆರೋಪಿಸಿದ್ದಾರೆ.

ಮತ ಕಳ್ಳತನದ ವಿರುದ್ಧ ಸಹಕಾರನಗರದಲ್ಲಿರುವ ತಮ್ಮ ಗೃಹ ಕಚೇರಿಯಿಂದ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಕೃಷ್ಣ ಬೈರೇಗೌಡ ಸುದ್ದಿಗಾರರೊಂದಿಗೆ ಮಾತನಾಡಿದರು.

ಚುನಾವಣಾ ಆಯೋಗ ಬಿಜೆಪಿಯ ಅಂಗಸಂಸ್ಥೆಯಂತೆ ಕೆಲಸ ಮಾಡುತ್ತಿದೆ. ಪರಿಣಾಮ ಇಡೀ ದೇಶದ ಚುನಾವಣಾ ಪ್ರಕ್ರಿಯೆಯೇ ಬುಡಮೇಲಾಗಿದೆ. ಚುನಾವಣಾ ವ್ಯವಸ್ಥೆಯಲ್ಲೇ ಅಕ್ರಮ ಎಸಗಿಬಿಟ್ಟರೆ ಬಿಜೆಪಿಯ ಗೆಲುವು ಸುಲಭ. ಹೀಗಾಗಿ ಚುನಾವಣಾ ಆಯೋಗ ಮತ್ತು ಬಿಜೆಪಿ ಜಂಟಿಯಾಗಿಯೇ ಈ ಅಕ್ರಮದಲ್ಲಿ ಶಾಮೀಲಾಗಿದೆ’ ಎಂದು ಕಿಡಿಕಾರಿದರು.

ಮಹದೇವಪುರದಲ್ಲಿ 35 ಸಾವಿರ ಅಕ್ರಮ ಮತಗಳನ್ನು ಪಟ್ಟಿಗೆ ಸೇರಿಸಿದ್ದಾರೆ ಎಂಬುದನ್ನು ಸಾಕ್ಷಿ ಸಮೇತ ನಿರೂಪಿಸಲಾಗಿದೆ. ಆಳಂದ ಕ್ಷೇತ್ರದಲ್ಲಿ 6 ಸಾವಿರ ನೈಜ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಈ ಅಕ್ರಮದ ಮಾಹಿತಿ ಸೂಕ್ತ ಸಮಯಕ್ಕೆ ಶಾಸಕ ಬಿ.ಆರ್.ಪಾಟೀಲ ಗಮನಕ್ಕೆ ಬಂದ ಕಾರಣಕ್ಕೆ ಇದನ್ನು ತಡೆಯಲಾಯಿತು. ಇಲ್ಲದಿದ್ದರೆ ಅಷ್ಟೂ ಹೆಸರುಗಳನ್ನು ಪಟ್ಟಿಯಿಂದ ತೆಗೆಯಲಾಗುತ್ತಿತ್ತು. ಇದು ಚುನಾವಣೆಯೊಂದರ ಫಲಿತಾಂಶದ ಮೇಲೂ ಪರಿಣಾಮ ಬೀರುತ್ತಿತ್ತು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾಳೆಯಿಂದಲೇ ರಾಷ್ಟ್ರವ್ಯಾಪಿ SIR: ಮೊದಲ ಹಂತದಲ್ಲಿ ಕೇರಳ, ತಮಿಳುನಾಡು, ಬಂಗಾಳ ಸೇರಿ 12 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ಶುದ್ಧೀಕರಣ

ಕೇಜ್ರಿವಾಲ್ ಗೆ ಬೇಲ್, SIR, ಆರ್ಟಿಕಲ್ 370, ವಾಕ್ ಸ್ವಾತಂತ್ರ್ಯದ ಬಗ್ಗೆ ತೀರ್ಪು..: ನೂತನ ಸಿಜೆಐ ಟ್ರ್ಯಾಕ್ ರೆಕಾರ್ಡ್ ಹೀಗಿದೆ...

ಹುಬ್ಬಳ್ಳಿಯ ಉದ್ಯಮಿ, ಗುತ್ತಿಗೆದಾರ ಆನಂದ ಹೂವಿನಹಡಗಲಿ ಲಾಡ್ಜ್‌ನಲ್ಲಿ ಆತ್ಮಹತ್ಯೆ!

ಚಿತ್ರಮಂದಿರಗಳಲ್ಲಿ ಯಶಸ್ವಿ ಓಟದ ಮಧ್ಯೆ OTT ಗೆ ಬಂದೆ ಬಿಡ್ತು ಕಾಂತಾರ ಅಧ್ಯಾಯ 1; 1000 ಕೋಟಿ ಕಲೆಕ್ಷನ್‌ ಮೇಲೆ ಕಾರ್ಮೋಡ!

Thar ವಾಹನ ಗುದ್ದಿಸಿ ರೈತನ ಕೊಂದ BJP ಮುಖಂಡ; ಹೆಣ್ಣುಮಕ್ಕಳ ಬಟ್ಟೆ ಹರಿದು ನೀಚ ಕೃತ್ಯ; 14 ಮಂದಿ ವಿರುದ್ಧ FIR!

SCROLL FOR NEXT