ಡಿಸಿಎಂ ಡಿಕೆ.ಶಿವಕುಮಾರ್ 
ರಾಜ್ಯ

ಸುರಂಗ ರಸ್ತೆ ಕಾಮಗಾರಿ ನಂತರ ಲಾಲ್‌ಬಾಗ್ ಭೂಮಿ ವಾಪಸ್: DCM ಡಿ.ಕೆ ಶಿವಕುಮಾರ್

ಸುರಂಗ ರಸ್ತೆ ಯೋಜನೆಗೆ ಯಾವುದೇ ಜಮೀನನ್ನು ಸ್ವಾಧೀನಪಡಿಸಿಕೊಳ್ಳುತ್ತಿಲ್ಲ. ಒಂದು ಸಣ್ಣ ಭಾಗದಲ್ಲಿ ರಸ್ತೆ ಹಾದುಹೋಗುತ್ತದೆ. ಇದನ್ನು ಪರಿಶೀಲನೆ ಮಾಡುತ್ತೇನೆ. ಲಾಲ್‌ಬಾಗ್‌ಗೆ ಯಾವುದೇ ರೀತಿ ತೊಂದರೆ ಆಗುವುದಿಲ್ಲ.

ಬೆಂಗಳೂರು: ಸುರಂಗ ರಸ್ತೆ ಯೋಜನೆ ಕಾಮಗಾರಿ ಪೂರ್ಣಗೊಂಡ ನಂತರ ಲಾಲ್‌ಬಾಗ್ ಭೂಮಿಯನ್ನು ಹಿಂತಿರುಗಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ.

ಯಶವಂತಪುರ ವಿಧಾನಸಭೆ ಕ್ಷೇತ್ರದ ಹೇರೋಹಳ್ಳಿಯ ಭರತ್ ನಗರ ಗಾಂಧಿ ಉದ್ಯಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಸುರಂಗ ರಸ್ತೆ ಯೋಜನೆಗೆ ಯಾವುದೇ ಜಮೀನನ್ನು ಸ್ವಾಧೀನಪಡಿಸಿಕೊಳ್ಳುತ್ತಿಲ್ಲ. ಒಂದು ಸಣ್ಣ ಭಾಗದಲ್ಲಿ ರಸ್ತೆ ಹಾದುಹೋಗುತ್ತದೆ. ಇದನ್ನು ಪರಿಶೀಲನೆ ಮಾಡುತ್ತೇನೆ. ಲಾಲ್‌ಬಾಗ್‌ಗೆ ಯಾವುದೇ ರೀತಿ ತೊಂದರೆ ಆಗುವುದಿಲ್ಲ. ಸ್ವಲ್ಪ ಜಾಗವನ್ನು ಈ ಯೋಜನೆ ಕಾಮಗಾರಿ ನಡೆಯುವವರೆಗೂ ಬಳಸಿಕೊಳ್ಳುತ್ತೇವೆ. ನಂತರ ಅದನ್ನು ತೆರವುಗೊಳಿಸಿ, ಲಾಲ್‌ಬಾಗ್ ಉದ್ಯಾನಕ್ಕೆ ಹಿಂತಿರುಗಿಸುತ್ತೇವೆ ಎಂದು ಹೇಳಿದರು.

ಸುರಂಗ ರಸ್ತೆಯನ್ನು ಭೂಮಿಯ ಒಳಗೆ ಕೊರೆಯಲಾಗುವುದು. ಹೊರಗೆ ಮಾಡಲು ಆಗುವುದಿಲ್ಲ. ಮುಂಬೈ, ದೆಹಲಿಯಲ್ಲಿ ಏಕೆ ಭೂಮಿ ಕೊರೆದು ಸುರಂಗ ರಸ್ತೆ ಮಾಡುತ್ತಿದ್ದಾರೆ. ಯಾವುದೇ ಸಂದರ್ಭದಲ್ಲಿ ನಾನು ಆತನ ಮಾತಿಗೆ ಬಾಗುವುದಿಲ್ಲ. ಹೋರಾಟ ಮಾಡುವವರು ಮಾಡುತ್ತಾರೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ನಾವು ಜನರಿಗಾಗಿ ಕೆಲಸ ಮಾಡುತ್ತಿದ್ದೇವೆಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮತ್ತೊಬ್ಬ ಏಕನಾಥ ಶಿಂಧೆ ಹುಟ್ಟಲು ಸಾಧ್ಯವಿಲ್ಲ; 'ನವೆಂಬರ್ ಕ್ರಾಂತಿ'ಗೆ ಕಾಂಗ್ರೆಸ್ ಅವಕಾಶ ನೀಡಲ್ಲ!

ನಾಳೆಯಿಂದಲೇ ರಾಷ್ಟ್ರವ್ಯಾಪಿ SIR: ಮೊದಲ ಹಂತದಲ್ಲಿ ಕೇರಳ, ತಮಿಳುನಾಡು, ಬಂಗಾಳ ಸೇರಿ 12 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ಶುದ್ಧೀಕರಣ

ಕೇಜ್ರಿವಾಲ್ ಗೆ ಬೇಲ್, SIR, ಆರ್ಟಿಕಲ್ 370, ವಾಕ್ ಸ್ವಾತಂತ್ರ್ಯದ ಬಗ್ಗೆ ತೀರ್ಪು..: ನೂತನ ಸಿಜೆಐ ಟ್ರ್ಯಾಕ್ ರೆಕಾರ್ಡ್ ಹೀಗಿದೆ...

ಹುಬ್ಬಳ್ಳಿಯ ಉದ್ಯಮಿ, ಗುತ್ತಿಗೆದಾರ ಆನಂದ ಹೂವಿನಹಡಗಲಿ ಲಾಡ್ಜ್‌ನಲ್ಲಿ ಆತ್ಮಹತ್ಯೆ!

ಚಿತ್ರಮಂದಿರಗಳಲ್ಲಿ ಯಶಸ್ವಿ ಓಟದ ಮಧ್ಯೆ OTT ಗೆ ಬಂದೆ ಬಿಡ್ತು ಕಾಂತಾರ ಅಧ್ಯಾಯ 1; 1000 ಕೋಟಿ ಕಲೆಕ್ಷನ್‌ ಮೇಲೆ ಕಾರ್ಮೋಡ!

SCROLL FOR NEXT