ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಅಕ್ರಮವಾಗಿ ಶ್ರೀಗಂಧದ ಮರ ಸಾಗಿಸುತ್ತಿದ್ದ ನಾಲ್ವರ ಬಂಧನ

ಬಂಧಿತ ಆರೋಪಿಗಳಿಂದ 1.12 ಕೋಟಿ ರೂ. ಮೌಲ್ಯದ, 750 ಕೆಜಿ ಶ್ರೀಗಂಧದ ಮರವನ್ನು ವಶಪಡಿಸಿಕೊಂಡಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ಬೆಂಗಳೂರು: 1.12 ಕೋಟಿ ರೂ. ಮೌಲ್ಯದ ಶ್ರೀಗಂಧದ ಮರದ ದಿಮ್ಮಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಅಂತರರಾಜ್ಯ ಗ್ಯಾಂಗ್‌ನ ನಾಲ್ವವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಬಂಧಿತ ಆರೋಪಿಗಳಿಂದ 750 ಕೆಜಿ ಶ್ರೀಗಂಧದ ಮರವನ್ನು ವಶಪಡಿಸಿಕೊಂಡಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿಗಳನ್ನು ಆಂಧ್ರಪ್ರದೇಶದ ಕರ್ನೂಲ್ ನಿವಾಸಿಗಳಾದ ಅಬ್ದುಲ್ ಕಲಾಂ(47), ರಾಮ ಭೋಪಾಲ್(40), ಶೇಖ್ ಶಾರುಖ್(31) ಮತ್ತು ಪರಮೇಶ್(30) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಅಕ್ಟೋಬರ್ 16 ರ ಮಧ್ಯರಾತ್ರಿಯ ಸುಮಾರಿಗೆ ಸಿದ್ದಾಪುರ ಪ್ರದೇಶಕ್ಕೆ ಧಾವಿಸಿದರು. ಅಲ್ಲಿ ದೆಹಲಿ ನೋಂದಣಿ ಸಂಖ್ಯೆಯ ಮಹೀಂದ್ರಾ ಎಕ್ಸ್‌ಯುವಿ ಮತ್ತು ಆಂಧ್ರಪ್ರದೇಶ ನೋಂದಣಿ ಹೊಂದಿರುವ ಮಹೀಂದ್ರಾ ಬೊಲೆರೊ ಹೋಟೆಲ್ ಬಳಿ ಅನುಮಾನಾಸ್ಪದವಾಗಿ ನಿಂತಿರುವುದು ಕಂಡುಬಂದಿದೆ.

ವಾಹನಗಳಿಂದ ನಾಲ್ವರನ್ನು ಬಂಧಿಸಲಾಯಿತು ಮತ್ತು ತಪಾಸಣೆಯ ಸಮಯದಲ್ಲಿ ಕೊಳೆತ ಈರುಳ್ಳಿ ತುಂಬಿದ ಚೀಲಗಳು ಕಂಡುಬಂದಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ಹೆಚ್ಚಿನ ಪರಿಶೀಲನೆ ನಡೆಸಿದಾಗ, ಚೀಲಗಳ ಒಳಗೆ ಶ್ರೀಗಂಧದ ಮರದ ದಿಮ್ಮಿಗಳನ್ನು ಮರೆಮಾಡಿರುವುದು ಕಂಡುಬಂದಿತು" ಎಂದು ಅಧಿಕಾರಿ ಹೇಳಿದ್ದಾರೆ.

"ವಿಚಾರಣೆಯ ಸಮಯದಲ್ಲಿ, ಆರೋಪಿಗಳು ಅಕ್ರಮ ಮಾರಾಟಕ್ಕಾಗಿ ಶ್ರೀಗಂಧದ ಮರದ ದಿಮ್ಮಿಗಳನ್ನು ತಂದಿದ್ದಾಗಿ ಒಪ್ಪಿಕೊಂಡರು" ಎಂದು ಅವರು ತಿಳಿಸಿದ್ದಾರೆ.

ಈ ಸಂಬಂಧ ಅರಣ್ಯ ಕಾಯ್ದೆಯ ಸಂಬಂಧಿತ ಸೆಕ್ಷನ್ ಗಳ ಅಡಿಯಲ್ಲಿ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

ಮಾನಸಿಕ ನೆಮ್ಮದಿಗೆ 10 ಸಾವಿರ ರೂ, ಸ್ವಯಂ ಆರೈಕೆಗೆ 10 ಸಾವಿರ: 22 ವರ್ಷದ ಬೆಂಗಳೂರು Gen Z ಯುವತಿಯ ಮಾಸಿಕ ಖರ್ಚುವೆಚ್ಚ ವೈರಲ್!

ವಿವಾದದ ನಡುವೆ ಮೈಸೂರಿನ ಮುಕ್ತ ವಿವಿಯಲ್ಲಿ RSS ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

SCROLL FOR NEXT