ಸಚಿವ ಶಿವಾನಂದ ಪಾಟೀಲ್ 
ರಾಜ್ಯ

ಜವಳಿ ನೀತಿಗಾಗಿ ತಮಿಳುನಾಡು, ಮಧ್ಯಪ್ರದೇಶ ಮಾದರಿ ಅಧ್ಯಯನ: ಸಚಿವ ಶಿವಾನಂದ ಪಾಟೀಲ್

ನೆರೆ ರಾಜ್ಯಗಳ ಜವಳಿ ಉದ್ಯಮಿಗಳನ್ನು ಆಕರ್ಷಿಸಲು ಅಧ್ಯಯನ ವರದಿ ಅಗತ್ಯವಿದೆ. ಇತರೆ ರಾಜ್ಯಗಳು ಉದ್ಯಮಿಗಳಿಗೆ ಯಾವ ಸವಲತ್ತುಗಳನ್ನು ನೀಡುತ್ತಿವೆ ಎಂಬ ಮಾಹಿತಿಯ ಆಧಾರದಲ್ಲಿ ರಾಜ್ಯದ ನೀತಿಗಳನ್ನು ಬದಲಾವಣೆ ಮಾಡಲಾಗುವುದು ಎಂದರು.

ಬೆಂಗಳೂರು: ಮಧ್ಯಪ್ರದೇಶ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳ ಜವಳಿ ನೀತಿಯನ್ನು ಅಧ್ಯಯನ ಮಾಡಿ, ಸಮಗ್ರ ವರದಿ ಸಿದ್ಧಪಡಿಸಲು ಜವಳಿ ಸಚಿವ ಶಿವಾನಂದ ಪಾಟೀಲ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಕರ್ನಾಟಕ ನೂತನ ಜವಳಿ ಮತ್ತು ಸಿದ್ದ ಉಡುಪು ನೀತಿ ಅನುಷ್ಠಾನ ಕುರಿತ ಉನ್ನತ ಮಟ್ಟದ ಸಬಲೀಕರಣ ಸಮಿತಿ ಸಭೆಯ ನಂತರ ಈ ಕುರಿತು ಮಾಹಿತಿ ನೀಡಿದ ಅವರು, ನೆರೆ ರಾಜ್ಯಗಳ ಜವಳಿ ಉದ್ಯಮಿಗಳನ್ನು ಆಕರ್ಷಿಸಲು ಅಧ್ಯಯನ ವರದಿ ಅಗತ್ಯವಿದೆ. ಇತರೆ ರಾಜ್ಯಗಳು ಉದ್ಯಮಿಗಳಿಗೆ ಯಾವ ಸವಲತ್ತುಗಳನ್ನು ನೀಡುತ್ತಿವೆ ಎಂಬ ಮಾಹಿತಿಯ ಆಧಾರದಲ್ಲಿ ರಾಜ್ಯದ ನೀತಿಗಳನ್ನು ಬದಲಾವಣೆ ಮಾಡಲಾಗುವುದು ಎಂದರು.

ಬಾಂಗ್ಲಾದೇಶದ ಪ್ರತಿಕೂಲ ಪರಿಸ್ಥಿತಿ ಪರಿಣಾಮ ಅಲ್ಲಿನ ಜವಳಿ ಉದ್ಯಮ ಬೇರೆಡೆಗೆ ಸ್ಥಳಾಂತರವಾಗುತ್ತಿದೆ. ಅಲ್ಲಿನ ಉದ್ಯಮಿಗಳನ್ನು ಕರ್ನಾಟಕಕ್ಕೆ ಸೆಳೆಯಲು ಯೋಜನೆ ರೂಪಿಸಲಾಗುತ್ತಿದೆ. ತಮಿಳುನಾಡಿನಲ್ಲಿ ಉದ್ಯಮ ಸುಸ್ಥಿತಿಯಲ್ಲಿದೆ. ಬಹುತೇಕ ಉದ್ಯಮಿಗಳು ತಮಿಳುನಾಡಿನಲ್ಲಿ ಹೂಡಿಕೆಗೆ ಆಸಕ್ತಿ ತೋರುತ್ತಿದ್ದಾರೆ. ಅವರನ್ನು ಕರ್ನಾಟಕ ರಾಜ್ಯದತ್ತ ಸೆಳೆಯಲು ಏನು ಮಾಡಬೇಕು ಎನ್ನುವ ಕುರಿತು ಅಧ್ಯಯನ ಮಾಡಬೇಕಿದೆ.

ಮಹಾರಾಷ್ಟ್ರ ಸರ್ಕಾರ ವಿದ್ಯುತ್‌ ಬಿಲ್‌ನಲ್ಲೇ ಸಹಾಯಧನ ನೀಡುತ್ತಿದೆ. ನಮ್ಮಲ್ಲಿಯೂ ಈ ಪದ್ಧತಿ ಅನುಸರಿಸಿದರೆ ಮಹಾರಾಷ್ಟ್ರದ ಜವಳಿ ಉದ್ಯಮಿಗಳು ರಾಜ್ಯದಲ್ಲಿ ಬಂಡವಾಳ ಹೂಡಲು ಸಿದ್ಧರಿದ್ದಾರೆ ಎಂದು ಮಾಹಿತಿ ನೀಡಿದರು.

ಉದ್ಯಮಿಗಳಿಂದ ಬರುವ ಪ್ರಸ್ತಾವಗಳಿಗೆ ಮಂಜೂರಾತಿ ನೀಡಲು ವಿಳಂಬ ಮಾಡಬಾರದು. ರಾಜ್ಯ ಸರ್ಕಾರ ಸವಲತ್ತುಗಳನ್ನು ನೀಡಲು ವಿಳಂಬ ಮಾಡಿದರೆ ಉದ್ಯಮಿಗಳು ನೆರೆ ರಾಜ್ಯಗಳತ್ತ ಗಮನ ಹರಿಸುತ್ತಾರೆ. ನೆರೆ ರಾಜ್ಯಗಳ ಉದ್ಯಮಿಗಳನ್ನು ಕರ್ನಾಟಕ್ಕೆ ಬರುವಂತೆ ಅಧಿಕಾರಿಗಳು ಆಸಕ್ತಿ ವಹಿಸಲು ಸೂಚಿಸಲಾಗಿದೆ ಎಂದರು.

"ವರದಿ ಸಿದ್ಧವಾದ ನಂತರ ನಾವು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮುಂಬರುವ ಬಜೆಟ್‌ನಲ್ಲಿ ಹೆಚ್ಚಿನ ಹಣವನ್ನು ಕೋರುತ್ತೇವೆ" ಎಂದು ಅವರು ಹೇಳಿದರು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ರಿಯಾಯಿತಿಗಳನ್ನು ಪಡೆಯುವಲ್ಲಿ ಕಬ್ಬನ್‌ಪೇಟೆ ಮತ್ತು ಕಾಟನ್‌ಪೇಟೆಯ ನೇಕಾರರ ಸಮಸ್ಯೆಯನ್ನು ಸರ್ಕಾರ ಪರಿಹರಿಸಲಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

MUDA ಹಗರಣ: ಕೇಸ್‌ ಡೈರಿ ಸಲ್ಲಿಸುವಂತೆ ಲೋಕಾಯುಕ್ತ ಅಧಿಕಾರಿಗಳಿಗೆ ಕೋರ್ಟ್ ಸೂಚನೆ..!

ಜನೌಷಧಿ ಕೇಂದ್ರ ಮುಚ್ಚುವ ಆದೇಶ ರದ್ದು: ಸಾರ್ವಜನಿಕ ಹಿತಾಸಕ್ತಿಗಳಲ್ಲಿ ರಾಜಕೀಯ ಸರಿಯಲ್ಲ: ಸರ್ಕಾರಕ್ಕೆ ಹೈಕೋರ್ಟ್‌ ಕಿವಿಮಾತು

Video-'ಆಕೆ ನರಕಕ್ಕೆ ಹೋಗಲಿ, ನಿತೀಶ್ ಕುಮಾರ್ ಕ್ರಮ ಸರಿ ಇದೆ': ಮುಸ್ಲಿಂ ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂನ್ನು ಸಮರ್ಥಿಸಿಕೊಂಡ BJP ಸಚಿವ ಗಿರಿರಾಜ್ ಸಿಂಗ್

ಡಿಕೆ.ಶಿವಕುಮಾರ್ ಆಪ್ತ ಕಾರ್ಯದರ್ಶಿ ಕಾರು ಅಪಘಾತ: ಬೈಕ್‌ ಸವಾರ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

ಬೆಂಗಳೂರು: ರಿಕ್ಕಿ ಕೇಜ್ ಮನೆಯಲ್ಲಿ ಕಳ್ಳತನ; ಆರೋಪಿ ಬಂಧನ

SCROLL FOR NEXT