ಸಾಂದರ್ಭಿಕ ಚಿತ್ರ 
ರಾಜ್ಯ

ಹೆಣ ಮುಂದಿಟ್ಟುಕೊಂಡು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ವೈರಲ್ ಬಳಿಕ ಎಸ್‌ಐ, ಕಾನ್‌ಸ್ಟೆಬಲ್ ಅಮಾನತು!

ಆಂಬ್ಯುಲೆನ್ಸ್‌ ಸೇವೆಯಿಂದ ಹಿಡಿದು ಎಫ್‌ಐಆರ್ ಪ್ರತಿ, ಅಂತ್ಯಕ್ರಿಯೆ ಮತ್ತು ಮರಣ ಪ್ರಮಾಣಪತ್ರ ಪಡೆಯುವವರೆಗೂ ಪ್ರತಿ ಹಂತದಲ್ಲಿಯೂ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಶಿವಕುಮಾರ್ ಆರೋಪಿಸಿದ್ದರು.

ಬೆಂಗಳೂರು: ತನ್ನ ಇದ್ದೊಬ್ಬಳೇ ಮಗಳು ಸಾವಿಗೀಡಾದ ಸಮಯದಲ್ಲಿ ಎದುರಿಸಿದ ಕಿರುಕುಳ ಮತ್ತು ಭ್ರಷ್ಟಾಚಾರವನ್ನು ಎದುರಿಸಿದ ಬಗ್ಗೆ ತಂದೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಅಳಲು ತೋಡಿಕೊಂಡಿದ್ದ ಪೋಸ್ಟ್ ವೈರಲ್ ಆದ ನಂತರ, ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮತ್ತು ಕಾನ್‌ಸ್ಟೆಬಲ್‌ರನ್ನು ಅಮಾನತುಗೊಳಿಸಲಾಗಿದೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನ (ಬಿಪಿಸಿಎಲ್) ನಿವೃತ್ತ ಮುಖ್ಯ ಹಣಕಾಸು ಅಧಿಕಾರಿ ಶಿವಕುಮಾರ್ ಕೆ ಎಂಬುವವರು ಸೆಪ್ಟೆಂಬರ್‌ನಲ್ಲಿ ತಮ್ಮ 34 ವರ್ಷದ ಮಗಳು ಮೆದುಳಿನಲ್ಲಿನ ರಕ್ತಸ್ರಾವದಿಂದಾಗಿ ಮೃತಪಟ್ಟ ನಂತರ ಸಂಕಷ್ಟದ ಸಮಯದಲ್ಲಿಯೂ ತಾವು ಅನುಭವಿಸಿದ ಯಾತನೆಯನ್ನು ಲಿಂಕ್ಡ್‌ಇನ್ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದರು.

ಈಗ ಅಳಿಸಲಾಗಿರುವ ಪೋಸ್ಟ್‌ನಲ್ಲಿ, ಆಂಬ್ಯುಲೆನ್ಸ್‌ ಸೇವೆಯಿಂದ ಹಿಡಿದು ಎಫ್‌ಐಆರ್ ಪ್ರತಿ, ಅಂತ್ಯಕ್ರಿಯೆ ಮತ್ತು ಮರಣ ಪ್ರಮಾಣಪತ್ರ ಪಡೆಯುವವರೆಗೂ ಪ್ರತಿ ಹಂತದಲ್ಲಿಯೂ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಶಿವಕುಮಾರ್ ಆರೋಪಿಸಿದ್ದರು.

ಬೆಳ್ಳಂದೂರು ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮತ್ತು ಕಾನ್‌ಸ್ಟೆಬಲ್ ಲಂಚ ಕೇಳಿದ್ದರು ಮತ್ತು ನಮ್ಮೊಂದಿಗೆ ಅತ್ಯಂತ ಕೆಟ್ಟದಾಗಿ ನಡೆದುಕೊಂಡರು ಎಂದು ಆರೋಪಿಸಿದ್ದರು.

ನಮ್ಮ ಸ್ಥಿತಿಯೇ ಹೀಗಾದರೆ ಬಡವರ ಪರಿಸ್ಥಿತಿ ಏನು? ವ್ಯಕ್ತಿಯೊಬ್ಬ ಈಗಾಗಲೇ ತನ್ನ ಆತ್ಮೀಯರನ್ನು ಕಳೆದುಕೊಂಡು ದುಃಖದಲ್ಲಿರುವಾಗ, ಪೊಲೀಸರೇ ಲಂಚ ಕೇಳುವುದು ಮತ್ತು ಅಸಭ್ಯವಾಗಿ ಮಾತನಾಡುವುದು ಎಷ್ಟು ಸರಿ ಎಂದು ಅವರು ಪೋಸ್ಟ್‌ನಲ್ಲಿ ಕೇಳಿದ್ದಾರೆ.

ಶಿವಕುಮಾರ್ ಅವರ ಅನುಭವದ ಬಗ್ಗೆ ದುಃಖ ವ್ಯಕ್ತಪಡಿಸಿ, ಅನೇಕರು ಬೆಂಗಳೂರು ನಗರ ಪೊಲೀಸ್ ಮತ್ತು ಪೊಲೀಸ್ ಉಪ ಆಯುಕ್ತ ವೈಟ್‌ಫೀಲ್ಡ್ ಅವರ ಖಾತೆಗಳಿಗೆ 'X' ನಲ್ಲಿರುವ ಪೋಸ್ಟ್‌ಗಳನ್ನು ಟ್ಯಾಗ್ ಮಾಡುವ ಮೂಲಕ ಕ್ರಮ ಕೈಗೊಳ್ಳಬೇಕೆಂದು ಕೋರಿದ್ದಾರೆ.

ಡಿಸಿಪಿ ಕಚೇರಿಯು ಇದಕ್ಕೆ ಉತ್ತರಿಸಿದ್ದು, ಈ ವಿಷಯವನ್ನು ಸಂಪೂರ್ಣವಾಗಿ ತನಿಖೆ ಮಾಡಲಾಗುವುದು ಮತ್ತು ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದೆ.

ಗುರುವಾರ, 'ಶಿವಕುಮಾರ್ ಅವರ ಟ್ವೀಟ್ (ಪೋಸ್ಟ್) ನಲ್ಲಿ ಉಲ್ಲೇಖಿಸಲಾದ ಘಟನೆಗೆ ಸಂಬಂಧಿಸಿದಂತೆ, ಬೆಳ್ಳಂದೂರು ಪೊಲೀಸ್ ಠಾಣೆಯ ಒಬ್ಬ ಪಿಎಸ್ಐ ಮತ್ತು ಒಬ್ಬ ಪೊಲೀಸ್ ಕಾನ್‌ಸ್ಟೆಬಲ್ ಅನ್ನು ತಕ್ಷಣವೇ ಅಮಾನತುಗೊಳಿಸಲಾಗಿದೆ. ಪೊಲೀಸ್ ಇಲಾಖೆ ಯಾವುದೇ ಸಂದರ್ಭದಲ್ಲೂ ಅಂತಹ ಅಸಭ್ಯ ಅಥವಾ ಅನುಚಿತ ವರ್ತನೆಯನ್ನು ಸಹಿಸುವುದಿಲ್ಲ ಎಂದು ಡಿಸಿಪಿ ಕಚೇರಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

RCB ಫ್ಯಾನ್ಸ್ ಗೆ ಸಿಹಿಸುದ್ದಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಪಂದ್ಯ ಆಯೋಜನೆಗೆ ಕರ್ನಾಟಕ ಸರ್ಕಾರ ಗ್ರೀನ್ ಸಿಗ್ನಲ್!

T20 ವಿಶ್ವಕಪ್ 2026: ಇತಿಹಾಸ ಬರೆದ ಭಾರತ.. ಅತೀ ದೊಡ್ಡ ಜಯ, ಜಗತ್ತಿನ ಯಾವ ತಂಡವೂ ಮಾಡದ ದಾಖಲೆ!

T20 ವಿಶ್ವಕಪ್ 2026: ಗುರು ದೇವೋ ಭವ.. ಮಾಜಿ ಕೋಚ್ Gary Kirsten ಬಿಗಿದಪ್ಪಿದ ಹಾರ್ದಿಕ್ ಪಾಂಡ್ಯಾ!

ಮಹಾಶಿವರಾತ್ರಿ: ಬೆಂಗಳೂರಿನಲ್ಲಿ ಫೆಬ್ರವರಿ 15 ರಂದು ಮಾಂಸ ಮಾರಾಟ, ವಧೆ ನಿಷೇಧ

T20 ವಿಶ್ವಕಪ್ 2026: ಭಾರತ ಭರ್ಜರಿ ಬೌಲಿಂಗ್, ನಮೀಬಿಯಾ ವಿರುದ್ಧ 93 ರನ್ ಜಯ

SCROLL FOR NEXT