ಬಸವರಾಜ ಹೊರಟ್ಟಿ 
ರಾಜ್ಯ

ಶಾಲಾ ವಿದ್ಯಾರ್ಥಿಗಳ ಕನಿಷ್ಠ ಉತ್ತೀರ್ಣ ಅಂಕ 35ಕ್ಕೆ ತನ್ನಿ: ರಾಜ್ಯ ಸರ್ಕಾರಕ್ಕೆ ಬಸವರಾಜ ಹೊರಟ್ಟಿ ಆಗ್ರಹ

33 ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಉತ್ತೀರ್ಣರೆಂದು ಪರಿಗಣಿಸಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಅವರು ಈ ಹಿಂದೆ ಹೇಳಿದ್ದರು.

ಬೆಂಗಳೂರು: ಶಾಲಾ ವಿದ್ಯಾರ್ಥಿಗಳಿಗೆ ಕನಿಷ್ಠ ಉತ್ತೀರ್ಣ ಅಂಕಗಳನ್ನು 35 ಕ್ಕೆ ತರುವಂತೆ ರಾಜ್ಯ ಸರ್ಕಾರಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಆಗ್ರಹಿಸಿದ್ದಾರೆ.

33 ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಉತ್ತೀರ್ಣರೆಂದು ಪರಿಗಣಿಸಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಅವರು ಈ ಹಿಂದೆ ಹೇಳಿದ್ದರು.

ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿರುವ ಹೊರಟ್ಟಿಯವರು, ಇದು ಸರಿಯಾದ ಕ್ರಮವಲ್ಲ. ಇದು ಬೋಧನೆಯ ಗುಣಮಟ್ಟ ಮತ್ತು ಕಲಿಕೆಯ ಗುಣಮಟ್ಟವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ಬಂಗಾರಪ್ಪ ಅವರ ನಿರ್ಧಾರವನ್ನು "ದುರದೃಷ್ಟಕರ".ಸ್ಪರ್ಧಾದ್ಮಕ ಜಗತ್ತಿನಲ್ಲಿ ಯಾವುದೇ ವಿದ್ಯಾರ್ಥಿ ಪರೀಕ್ಷೆಗಳನ್ನು ಎದುರಿಸುವುದು ಮುಖ್ಯ. ಅಂಕಗಳನ್ನು ಗಳಿಸುವುದು ಪರೀಕ್ಷೆಗಳ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದ್ದರೂ, ಇದು ವಿದ್ಯಾರ್ಥಿಯು ತನ್ನ ಗಮನ, ಧೈರ್ಯ, ಸ್ಮರಣಶಕ್ತಿ, ಕಲಿಕಾ ಸಾಮರ್ಥ್ಯ ಮತ್ತು ಇತರ ಸಮಗ್ರ ಬೆಳವಣಿಗೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ವಿದ್ಯಾರ್ಥಿಯ ಪ್ರತಿಭೆಯನ್ನು ಹೊರತರಲು ಸಹಾಯ ಮಾಡುತ್ತದೆ. ಇದು ಅವರ ಭವಿಷ್ಯಕ್ಕೆ ಸಹಾಯ ಮಾಡುತ್ತದೆ. ಈ ನಿಟ್ಟಿನಲ್ಲಿ, 35 ಅಂಕಗಳನ್ನು ಬಹಳ ಹಿಂದಿನಿಂದಲೂ ನಿಗದಿಪಡಿಸಲಾಗಿದೆ. ಇದು ವೈಜ್ಞಾನಿಕ ಮಾನದಂಡವಾಗಿದೆ. ಅದನ್ನು 33 ಅಂಕಗಳಿಗೆ ಇಳಿಸುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಾರ್ಖಂಡ್‌ ಸಮೀಪ ಚಾತ್ರಾದಲ್ಲಿ ಪತನಗೊಂಡ ರಾಂಚಿ–ದೆಹಲಿ ಏರ್ ಆಂಬ್ಯುಲೆನ್ಸ್: ಎಲ್ಲಾ 7 ಮಂದಿ ಸಾವು-Video

ಉಗ್ರರ ವಿರುದ್ಧ 'ಪ್ರಹಾರ್' ನಿರ್ಣಾಯಕ: ಕೇಂದ್ರದಿಂದ ದೇಶದ ಮೊದಲ ಭಯೋತ್ಪಾದನಾ ವಿರೋಧಿ ನೀತಿ ಬಿಡುಗಡೆ!

ರನ್ ರೇಟ್ ಹೆಚ್ಚಿಸಿಕೊಳ್ಳಲು ಜಿಂಬಾಬ್ವೆ ವಿರುದ್ಧ ದಾಖಲೆಯ 254 ರನ್ ಸಿಡಿಸಿದ ವೆಸ್ಟ್ ಇಂಡೀಸ್, ಭಾರತಕ್ಕೆ ಕಂಟಕ!

T20 World Cup 2026: ಜಿಂಬಾಬ್ವೆ ವಿರುದ್ಧ ವೆಸ್ಟ್ ಇಂಡೀಸ್ ಗೆ 107 ರನ್ ಗಳ ಭರ್ಜರಿ ಜಯ

ವಿಬಿ ಜಿ ರಾಮ್ ಜಿಯಿಂದ 16.12 ಕೋಟಿ ಜನ ನಿರುದ್ಯೋಗಿಗಳು; ಮನರೇಗಾ ಮರುಜಾರಿಗೊಳಿಸುವವರೆಗೆ ಹೋರಾಟ

SCROLL FOR NEXT