ಸಾಂದರ್ಭಿಕ ಚಿತ್ರ 
ರಾಜ್ಯ

ಸಂಪುಟ ಸಭೆಯಲ್ಲಿ ಸಚಿವರ ಜಟಾಪಟಿ: ಡಾ. ಹೆಚ್‌.ಸಿ. ಮಹಾದೇವಪ್ಪ- ಕೆಜೆ ಜಾರ್ಜ್ ಕಿತ್ತಾಡಿಕೊಂಡ್ರಾ?

ಮತ್ತೊಂದೆಡೆ ಬೋರ್‌ವೆಲ್ ಕರೆಂಟ್ ಸಂಪರ್ಕ ವಿಚಾರವಾಗಿ ಸಚಿವರ ನಡುವಿನ ಜಟಾಪಟಿ ವಿಚಾರವನ್ನು ಸಚಿವ ಹೆಚ್‌ಕೆ ಪಾಟೀಲ್ ತಳ್ಳಿಹಾಕಿದ್ದಾರೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಹೆಚ್‌ಸಿ ಮಹದೇವಪ್ಪ ಹಾಗೂ ಇಂಧನ ಸಚಿವ ಕೆಜೆ ಜಾರ್ಜ್ ನಡುವೆ ಭಾರೀ ಜಟಾಪಟಿ ನಡೆದಿರುವುದಾಗಿ ವರದಿಯಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ಎಸ್‌ಸಿಪಿ ಟಿಎಸ್ಪಿ ಅನುದಾನದ ಬಗ್ಗೆ ನಡೆಯುತ್ತಿದ್ದ ಚರ್ಚೆ ವೇಳೆ ಮಾತಿನ ಸಮರ ನಡೆದಿದೆ.

ಗಂಗಾ ಕಲ್ಯಾಣ ಯೋಜನೆಯಡಿ ಆಯ್ಕೆಯಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ ಕೊಳವೆಬಾವಿಗಳನ್ನು ಕೊರೆಯಲು ಪಂಪ್ ಸೆಟ್‌ಗಳನ್ನು ಸರಬರಾಜು ಮಾಡುವ ಯೋಜನೆ ಬಗ್ಗೆ ಚರ್ಚಿಸುವಾಗ ಉಭಯ ಸಚಿವರ ನಡುವೆ ವಾಕ್ಸಮರ ನಡೆದಿದೆ.

ಸಭೆಯಲ್ಲಿ ಹೆಚ್‌ಸಿ ಮಹದೇವಪ್ಪ ಏರುಧ್ವನಿಯಲ್ಲೇ ಕೂಗಾಡಿದ್ದು, ಗಂಗಾ ಕಲ್ಯಾಣ ಯೋಜನೆಯಲ್ಲಿ ಬೋರ್ ವೆಲ್ ಹಾಕಲಾಗಿದೆ. ಆದರೆ ಇಲ್ಲಿಯವರೆಗೆ ಪವರ್ ಕನೆಕ್ಶನ್ ಕೊಟ್ಟಿಲ್ಲ. ಬಡವರಿಗೆ ಕೊರೆದಿರುವ ಬೋರ್ ವೆಲ್ ಅದು. ಪವರ್ ಕೊಡದಿದ್ರೆ ಅವರು ನೀರು ಎತ್ತೋದು ಹೇಗೆ? ಅಂತ ಇಂಧನ ಸಚಿವರ ಜಾರ್ಜ್ ವಿರುದ್ಧ ಕಿಡಿಕಾರಿದ್ದಾರೆ.

ಮತ್ತೊಂದೆಡೆ ಬೋರ್‌ವೆಲ್ ಕರೆಂಟ್ ಸಂಪರ್ಕ ವಿಚಾರವಾಗಿ ಸಚಿವರ ನಡುವಿನ ಜಟಾಪಟಿ ವಿಚಾರವನ್ನು ಸಚಿವ ಹೆಚ್‌ಕೆ ಪಾಟೀಲ್ ತಳ್ಳಿಹಾಕಿದ್ದಾರೆ. ಸೌಹಾರ್ದಯುತ ಮಾತುಕತೆ ಆಗಿದೆ. ನೀವು ಕೇಳಿದ ರೀತಿಯಲ್ಲಿ ಯಾವುದೇ ಮಾತುಕತೆ ಆಗಿಲ್ಲ, ನಿಮಗೆ ಯಾರೋ ತಪ್ಪು ಮಾಹಿತಿ ಕೊಟ್ಟಿದ್ದಾರೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜೆಫ್ರಿ ಎಪ್ಸ್ಟೀನ್ ಜೊತೆಗೆ ಅಕ್ರಮ ಸಂಬಂಧ ಆಪಾದನೆ: ಪ್ರಿನ್ಸ್ ಆಂಡ್ರ್ಯೂ ಅವರ ಬಿರುದು ತೆಗೆದುಹಾಕಿ ಅರಮನೆಯಿಂದ ಹೊರಹಾಕಿದ ಕಿಂಗ್ ಚಾರ್ಲ್ಸ್ III

ಧರ್ಮಸ್ಥಳ ಕೇಸ್'ಗೆ ಬಿಗ್ ಟ್ವಿಸ್ಟ್: ಮೂಲ ಪ್ರಕರಣ ರದ್ಧತಿಗೆ ಬುರುಡೆ ಗ್ಯಾಂಗ್ ಮನವಿ, ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

' ಕಸ ಸುರಿಯುವ ಹಬ್ಬ'ದಲ್ಲಿ ಒಂದೇ ದಿನ 218 ಮನೆಗಳ ಮುಂದೆ ಕಸದ ರಾಶಿ: 2.80 ಲಕ್ಷ ದಂಡ ವಸೂಲಿ-Video

Women's World Cup 2025: ಜೆಮಿಮಾ ಭರ್ಜರಿ ಶತಕ, 5 ವಿಕೆಟ್ ಗಳಿಂದ ಆಸೀಸ್ ಸೋಲಿಸಿ, ಫೈನಲ್ ಗೆ ಲಗ್ಗೆ ಇಟ್ಟ ಭಾರತ!

ಮೋದಿ ಮತಕ್ಕಾಗಿ 'ಭರತ ನಾಟ್ಯ'ನೂ ಮಾಡ್ತಾರೆ: ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು!

SCROLL FOR NEXT