ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಆಸ್ಪತ್ರೆ ಸಿಬ್ಬಂದಿ 
ರಾಜ್ಯ

ನಮ್ಮ ಮೆಟ್ರೋದಲ್ಲಿ ತ್ವರಿತ ಅಂಗಾಂಗ ರವಾನೆ: ಜೀವ ಉಳಿಸಲು ನೆರವಾಯ್ತು BMRCL, ಅಪರೂಪದ ಕ್ಷಣಕ್ಕೆ ಹಳದಿ ಮಾರ್ಗ ಸಾಕ್ಷಿ..!

ಒಂದು ಶ್ವಾಸಕೋಶ ಮತ್ತು ಹೃದಯವನ್ನ ಯಶವಂತಪುರದ ಸ್ಪರ್ಶ್‌ ಆಸ್ಪತ್ರೆಯಿಂದ ನಾರಾಯಣ ಹೆಲ್ತ್‌ ಸಿಟಿ ಮತ್ತು ಆಸ್ಟರ್‌ ಆರ್‌ವಿ ಆಸ್ಪತ್ರೆಗೆ ನಮ್ಮ ಮೆಟ್ರೋದಲ್ಲೇ ಕೊಂಡೊಯ್ಯಲಾಗಿದೆ.

ಬೆಂಗಳೂರು: ಸಾಮಾನ್ಯವಾಗಿ ಅಂಗಾಂಗಳನ್ನು ಆ್ಯಂಬುಲೆನ್ಸ್‌ ಮೂಲಕವೇ ಸಾಗಣೆ ಮಾಡುವುದುಂಟು. ಆದರೆ, ಇತ್ತೀಚಿನ ಸಂಚಾರ ಸಮಸ್ಯೆಯಿಂದಾಗಿ ಆ್ಯಂಬುಲೆನ್ಸ್‌ ಗಳೂ ರಸ್ತೆಯಲ್ಲಿ ಶೀಘ್ರಗತಿಯಲ್ಲಿ ಸಂಚಾರ ನಡೆಸುವುದು ಕಷ್ಟಕರವಾಗಿ ಹೋಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ಸಿಬ್ಬಂದಿಗಳು ನಮ್ಮ ಮೆಟ್ರೋ ಸೌಕರ್ಯ ಬಳಸಿಕೊಳ್ಳಲು ಮುಂದಾಗುತ್ತಿದ್ದಾರೆ.

ಇದರಂತೆ ಗುರುವಾರ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಹೃದಯ ಮತ್ತು ಶ್ವಾಸಕೋಶ ಸಾಗಣೆ ಮಾಡಲಾಗಿದೆ. ಇದರಿಂದ ಜೀವವೊಂದು ಉಳಿದಂತಾಗಿದೆ.

ಒಂದು ಶ್ವಾಸಕೋಶ ಮತ್ತು ಹೃದಯವನ್ನ ಯಶವಂತಪುರದ ಸ್ಪರ್ಶ್‌ ಆಸ್ಪತ್ರೆಯಿಂದ ನಾರಾಯಣ ಹೆಲ್ತ್‌ ಸಿಟಿ ಮತ್ತು ಆಸ್ಟರ್‌ ಆರ್‌ವಿ ಆಸ್ಪತ್ರೆಗೆ ನಮ್ಮ ಮೆಟ್ರೋದಲ್ಲೇ ಕೊಂಡೊಯ್ಯಲಾಗಿದೆ.

ಪ್ರಯಾಣಿಕರು ಸಂಚಾರ ಮಾಡುತ್ತಿದ್ದ ಮೆಟ್ರೋ ರೈಲಿನ ಒಂದು ಭೋಗಿಯಲ್ಲಿ ಶ್ವಾಸಕೋಶ-ಹೃದಯ ತುಂಬಿದ ವೈದ್ಯಕೀಯ ಬಾಕ್ಸ್‌ ಇಟ್ಟುಕೊಂಡು, ಆಸ್ಪತ್ರೆಯ ಸಿಬ್ಬಂದಿ ಸಂಚರಿಸಿದ್ದಾರೆ.ಎರಡು ಆಸ್ಪತ್ರೆಗಳ ನಡುವಿನ ಸುಮಾರು 30-33 ಕಿಮೀ ದೂರವನ್ನ ಕೇವಲ 61 ನಿಮಿಷದಲ್ಲಿ ತಲುಪಿದ್ದಾರೆ. ಈ ಸಂದರ್ಭದಲ್ಲಿ ಶ್ವಾಸಕೋಶ ಕಸಿ ಮಾಡುವ ಐವರು ಸಿಬ್ಬಂದಿಯೊಂದಿಗೆ BMRCL ಹೋಮ್‌ ಗಾರ್ಡ್‌ಗಳೂ ಇದ್ದರು.

ಏತನ್ಮಧ್ಯೆ ಸಮನ್ವಯ ಮತ್ತು ಸಹಾಯಕ್ಕಾಗಿ ನಾರಾಯಣ ಹೆಲ್ತ್ ಆಸ್ಪತ್ರೆಯು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್‌ಸಿಎಲ್) ಅಧಿಕಾರಿಗಳಿಗೆ ಕೃತಜ್ಞತೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಸ್ಲಿಂರಿಗೆ ನೀಡಲಾಗಿದ್ದ ಶೇ.5 ರಷ್ಟು ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

Guarantee scheme: ಅರ್ಹವಲ್ಲದ ಫಲಾನುಭವಿಗಳ ಕೈಬಿಟ್ಟು ಹಣ ಉಳಿತಾಯಕ್ಕೆ ಸರ್ಕಾರ ಮುಂದು; ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಕಡಿತ?

ಸ್ತನ ಹಿಡಿದು, ಪೈಜಾಮಾ ಬಿಚ್ಚುವುದು ಅತ್ಯಾಚಾರ ಯತ್ನವಲ್ಲ: ಅಲಹಾಬಾದ್ ಹೈಕೋರ್ಟ್‌ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಜಪಾನಿನ ಮಿಲಿಟರಿ ಬಜೆಟ್ ಹೆಚ್ಚಾದರೆ ಭಾರತವೇಕೆ ಖುಷಿಪಡಬೇಕು? (ತೆರೆದ ಕಿಟಕಿ)

ಅಧಿಕಾರ ಹಸ್ತಾಂತರ ಗೊಂದಲ, ನಾಯಕರ ಹೇಳಿಕೆಗಳು: ವಿದೇಶಕ್ಕೆ ಹಾರಿದ ಸಿದ್ದು ಬಣದ 11 ಮಂದಿ 'ಕೈ' ಶಾಸಕರು

SCROLL FOR NEXT