ಡಿಕೆ ಶಿವಕುಮಾರ್ 
ರಾಜ್ಯ

ಜಾತ್ಯತೀತ-ಧರ್ಮಾತೀತ ಕರ್ನಾಟಕ ನಿರ್ಮಿಸಿದ ಕೀರ್ತಿ ಅರಸು ಸಮುದಾಯಕ್ಕೆ ಸಲ್ಲುತ್ತದೆ: DCM ಡಿ.ಕೆ ಶಿವಕುಮಾರ್

ಅರಸು ಸಮುದಾಯವು ಗಾತ್ರದಲ್ಲಿ ಚಿಕ್ಕದಿರಬಹುದು. ಆದರೆ, ಈ ರಾಜ್ಯಕ್ಕೆ ಅವರು ನೀಡಿರುವ ಕೊಡುಗೆ ಬಹುದೊಡ್ಡದು. ನಾಲ್ವಡಿ ಕೃಷ್ಣರಾಜ ಒಡೆಯರ್, ಕೆಂಪರಾಜಮ್ಮಣ್ಣಿ, ಜಯಚಾಮರಾಜೇಂದ್ರ ಒಡೆಯರ್ ಅವರು ಹೀಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.

ಬೆಂಗಳೂರು: ಮಾನವ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸಿ ಜಾತ್ಯತೀತ ಮತ್ತು ಧರ್ಮಾತೀತವಾಗಿ ಕರ್ನಾಟಕವನ್ನು ನಿರ್ಮಿಸಲು ಮೈಸೂರು ರಾಜರು ಮತ್ತು ಅರಸು ಸಮುದಾಯದ ಕೊಡುಗೆಯನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಾನುವಾರ ಶ್ಲಾಘಿಸಿದರು.

ಅರಮನೆ ಮೈದಾನದಲ್ಲಿ ನಡೆದ ಅರಸು ಸಂಘದ ಸುವರ್ಣ ಮಹೋತ್ಸವದಲ್ಲಿ ಮಾತನಾಡಿದ ಅವರು, ಅರಸು ಸಮುದಾಯವು ಗಾತ್ರದಲ್ಲಿ ಚಿಕ್ಕದಿರಬಹುದು. ಆದರೆ, ಈ ರಾಜ್ಯಕ್ಕೆ ಅವರು ನೀಡಿರುವ ಕೊಡುಗೆ ಬಹುದೊಡ್ಡದು. ನಾಲ್ವಡಿ ಕೃಷ್ಣರಾಜ ಒಡೆಯರ್, ಕೆಂಪರಾಜಮ್ಮಣ್ಣಿ, ಜಯಚಾಮರಾಜೇಂದ್ರ ಒಡೆಯರ್ ಅವರು ಹೀಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕನ್ನಂಬಾಡಿ ಕಟ್ಟೆ, ವಾಣಿವಿಲಾಸ ಸಾಗರ ಅಣೆಕಟ್ಟು, ಜೆ.ಸಿ ಎಂಜಿನಿಯರ್ ಕಾಲೇಜು, ವಿಕ್ಟೋರಿಯಾ ಆಸ್ಪತ್ರೆ ಹೀಗೆ ಹಲವಾರು ಜನೋಪಕಾರಿ ಕೆಲಸಗಳಿಗೆ ಅಡಿಪಾಯ ಹಾಕಿಕೊಟ್ಟವರು ಮೈಸೂರು ಅರಸರು ಎಂದು ಹೇಳಿದರು.

ವಿದ್ಯುತ್ ಉತ್ಪಾದನೆ ಸೇರಿದಂತೆ ರಾಜ್ಯದ ಪ್ರಮುಖ ಸಂಸ್ಥೆಗಳ ಸ್ಥಾಪನೆಗೆ ಅಡಿಪಾಯ ಹಾಕಿಕೊಟ್ಟವರು ಮೈಸೂರಿನ ಒಡೆಯರು. ಅವರು ನೆಟ್ಟಿರುವ ಮರದ ಫಲವನ್ನು ನಾವೆಲ್ಲರೂ ತಿನ್ನುತ್ತಿದ್ದೇವೆ ಎಂದು ಕೊಂಡಾಡಿದರು.

ಅರಸು ಸಮುದಾಯಕ್ಕೆ ಮೀಸಲಾತಿ ಸೇರಿದಂತೆ ಇತರೇ ಅನುಕೂಲಗಳನ್ನು ಕಲ್ಪಿಸಿಕೊಡಬೇಕು ಎಂದು ಮುಖಂಡರು ಮನವಿ ಸಲ್ಲಿಸಿದ್ದಾರೆ. ಇದರ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು. ಸಂಘಕ್ಕೆ ನಿವೇಶನ ಬೇಕು ಎಂದು ಮನವಿ ಸಲ್ಲಿಸಿದ್ದೀರಿ. ನಾನು ಬೆಂಗಳೂರು ಅಭಿವೃದ್ಧಿಯ ಜವಾಬ್ದಾರಿ ಹೊತ್ತಿದ್ದೇನೆ‌. ಆದ ಕಾರಣ ಸಂಘದ ಪ್ರಮುಖರು ಹಾಗೂ ರಾಜ ವಂಶಸ್ಥರ ಜೊತೆಯಲ್ಲಿ ಚರ್ಚೆ ಮಾಡಿ ನಿಮ್ಮ ಬೇಡಿಕೆ ಈಡೇರಿಸುವ ಬಗ್ಗೆ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕಾ ಮೇಲೆ ಭಾರತ ನಂಬಲಸಾಧ್ಯ ತೆರಿಗೆಯನ್ನು ವಿಧಿಸಿದ್ದು, ಇದು ವಿಶ್ವದಲ್ಲೇ ಅತ್ಯಧಿಕ: ಸುಂಕಾಸ್ತ್ರ ಕ್ರಮಕ್ಕೆ ಟ್ರಂಪ್ ಸಮರ್ಥನೆ

ನಿಮ್ಮ-ಭಾರತ ಸಂಬಂಧಕ್ಕೆ ನಮ್ಮ ತಕರಾರಿಲ್ಲ ಆದರೆ, ನಮ್ಮ ಬಾಂಧವ್ಯ ಗಟ್ಟಿಗೊಳಿಸೋಣ: ರಷ್ಯಾಗೆ ಪಾಕ್ ಮನವಿ

ಎರಡು ಗಂಟೆ ಮಳೆ - 20 ಕಿ.ಮೀ. ಟ್ರಾಫಿಕ್ ಜಾಮ್: ಮಿಲೇನಿಯಮ್ ಸಿಟಿ ನಗರಾಭಿವೃದ್ಧಿ ಟ್ರಿಪಲ್ ಎಂಜಿನ್ ಮಾದರಿ: BJP ಕಾಲೆಳೆದ ಕಾಂಗ್ರೆಸ್!

'ಸ್ವಾತಂತ್ರ್ಯ ಹೋರಾಟದಲ್ಲಿ ಯಾರ ಮನೆ ನಾಯಿ ಭಾಗವಹಿಸಿತ್ತೆಂದು ಬಹಿರಂಗ ಪಡಿಸಲಿ: ರಾಜ್ಯ ಸರ್ಕಾರದಲ್ಲಿ ಬಚ್ಚಲುಬಾಯಿ ಮಂತ್ರಿಗಳು!'

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ "ಐತಿಹಾಸಿಕ ನಿರ್ಧಾರ"; ಐದು ಪಾಲಿಕೆಗೆ ಆಯುಕ್ತರ ನೇಮಕ

SCROLL FOR NEXT