J&K Crime Branch lodges FIRs against 2 notorious fraudsters in land scam 
ರಾಜ್ಯ

ಮಹಿಳೆ ಮೇಲೆ ಹಲ್ಲೆ, ಜಾತಿ ನಿಂದನೆ: ದಿಯಾ ಚಿತ್ರ ನಿರ್ಮಾಪಕ ಕೃಷ್ಣ ಚೈತನ್ಯ ಸೇರಿ ಇತರರ ವಿರುದ್ಧ FIR ದಾಖಲು

ರಾಜ್ಯಸರ್ಕಾರ ಡಿಸಿಆರ್‌ಇ ಠಾಣೆಗಳಿಗೆ ಮಾನ್ಯತೆ ನೀಡಿದ ಬಳಿಕ ರಾಜಧಾನಿಯಲ್ಲಿ ಜಾತಿ ದೌರ್ಜನ್ಯ ಸಂಬಂಧ ದಾಖಲಾದ ಮೊದಲ ಪ್ರಕರಣ ಇದಾಗಿದೆ.

ಬೆಂಗಳೂರು: ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ಅವಾಚ್ಯಶಬ್ಧಗಳಿಂದ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ದಿಯಾ ಚಿತ್ರ ನಿರ್ಮಾಪಕ ಕೃಷ್ಣಚೈತನ್ಯ ಸೇರಿ ಇತರರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಪೂರ್ವವಿಭಾಗದ ನಾಗರಿಕ ಹಕ್ಕು ಜಾರಿನಿರ್ದೇಶನಾಲಯ (ಡಿಸಿಆರ್‌ಇ) ಠಾಣೆಯಲ್ಲಿ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

ರಾಜ್ಯಸರ್ಕಾರ ಡಿಸಿಆರ್‌ಇ ಠಾಣೆಗಳಿಗೆ ಮಾನ್ಯತೆ ನೀಡಿದ ಬಳಿಕ ರಾಜಧಾನಿಯಲ್ಲಿ ಜಾತಿ ದೌರ್ಜನ್ಯ ಸಂಬಂಧ ದಾಖಲಾದ ಮೊದಲ ಪ್ರಕರಣ ಇದಾಗಿದೆ.

ನೇತಾಜಿ ನಗರದ ನಿವಾಸಿಯಾಗಿರುವ ಮಹಿಳೆಯೊಬ್ಬರು ದೂರು ನೀಡಿದ್ದು, ದೂರಿನ ಅನ್ವಯ ಚಿತ್ರ ನಿರ್ಮಾಪಕ ಕೃಷ್ಣಚೈತನ್ಯ, ಸತ್ಯನಾರಾಯಣ ರೆಡ್ಡಿ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ, ಅತಿಕ್ರಮ ಪ್ರವೇಶ, ಹಲ್ಲೆ, ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪಗಳ ಅನ್ವಯ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವರ್ತೂರು ಹೋಬಳಿ ಕಸವನಹಳ್ಳಿ ಗ್ರಾಮದಲ್ಲಿರುವ 3 ಎಕರೆ 35 ಗುಂಟೆ ಜಮೀನನ್ನು ಭೋಗ್ಯಕ್ಕೆ ಪಡೆದಿರುವ ಮಹಿಳೆ, ಭೂಮಿಯಲ್ಲಿ ನರ್ಸರಿ ನಡೆಸುತ್ತಿದ್ದಾರೆ.

ಆ.10ರಂದು ಜಮೀನಿನ ಬಳಿ ಕಾರಿನಲ್ಲಿ ಆಗಮಿಸಿದ್ದ ಕೃಷ್ಣಚೈತನ್ಯ, ಸತ್ಯನಾರಾಯಣ ರೆಡ್ಡಿ ಹಾಗೂ ಇತರರು ಬೀಗವನ್ನು ಮುರಿದು ಒಳಬಂದು, ಮಹಿಳೆಗೆ ಅವಾಚ್ಯಶಬ್ಧಗಳಿಂದ ಜಾತಿನಿಂದನೆ ಮಾಡಿದ್ದಾರೆ. ಜೊತೆಗೆ, ದೇಹದ ಖಾಸಗಿ ಅಂಗಗಳನ್ನು ಮುಟ್ಟಿ ಹಲ್ಲೆ ನಡೆಸಿ, ಜಮೀನು ಸ್ಥಳ ಬಿಟ್ಟುಕೊಡದಿದ್ದರೆ ಕೊಲೆ ಮಾಡುವ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ಮಹಿಳೆ ಆರೋಪಿಸಿದ್ದಾರೆ.

ಸಂತ್ರಸ್ತ ಮಹಿಳೆ ಆರಂಭದಲ್ಲಿ ಬೆಳ್ಳಂದೂರು ಠಾಣೆಯಲ್ಲಿ ದೂರು ನೀಡಲು ತೆರಳಿದ್ದು ಅಲ್ಲಿನ ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ. ಹಲವು ಬಾರಿ ದೂರು ನೀಡಿದರೂ ಸಬೂಬು ಹೇಳಿದ್ದಾರೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಮೇಲಿನ ದೌರ್ಜನ್ಯ ತಡೆ ಕಾಯಿದೆ ಪ್ರಕರಣಗಳ ತನಿಖೆ ಸಲುವಾಗಿಯೇ ಸ್ಥಾಪಿಸಲಾಗಿರುವ ಡಿಸಿಆರ್‌ಇ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ,

ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ ಮತ್ತು ವಿಚಾರಣೆಗಾಗಿ ಆರೋಪಿಗಳಿಗೆ ನೋಟಿಸ್ ನೀಡಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಹಿಂದೂ ಬೆಳವಣಿಗೆ ದರ' ಧರ್ಮ ಕೆಣಕುವ ಒಂದು ಮಾರ್ಗವಾಗಿತ್ತು: ಪ್ರಧಾನಿ ಮೋದಿ

'ಜನ ಸಾಮಾನ್ಯರಿಗಾಗಿ ಸುಪ್ರೀಂಕೋರ್ಟ್' : ಬಲವಾದ ಸಂದೇಶ ರವಾನಿಸಿದ CJI ಸೂರ್ಯಕಾಂತ್!

ಬೆಂಗಳೂರಿನಲ್ಲಿ 2,215 ಕೋಟಿ ರೂ. ಮೊತ್ತದ ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಪುಟ ಅನುಮೋದನೆ!

ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 9 ವಿಕೆಟ್ ಭರ್ಜರಿ ಜಯ: 2-1 ಅಂತರದಲ್ಲಿ ಸರಣಿ ಕೈ ವಶ!

ಇಂಡಿಗೋ ವಿಮಾನಗಳಲ್ಲಿ ವ್ಯತ್ಯಯ: ಇತರೆ ಏರ್‌ಲೈನ್‌ಗಳಿಂದ ಟಿಕೆಟ್ ದರ ಏರಿಕೆಗೆ ಸರ್ಕಾರ ಬ್ರೇಕ್

SCROLL FOR NEXT